ಆರೋಪಿ ರಾಜೇಶ್ ರಮೇಶ್ ನಾಯಕ್ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ.
ಆರೋಪಿ ನಾಯಕ್ ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರು ಸಹೋದರರಿಂದ ಸುಮಾರು ₹10 ಲಕ್ಷ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಂತ್ರಸ್ತರ ತಂದೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೋಧದ ವೇಳೆ, ಸಿಬಿಐ ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ 23ಕ್ಕೂ ಹೆಚ್ಚು ಜನರು ನಾಯಕ್ ಅವರ ವಂಚನೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.