ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 1ಕೋಟಿ ಲಂಚ ಪಡೆದ ಆರೋಪದ ಮೇಲೆ ರೈಲ್ವೆ ಹಿರಿಯ ಅಧಿಕಾರಿ ಬಂಧನ

Last Updated 17 ಜನವರಿ 2021, 12:56 IST
ಅಕ್ಷರ ಗಾತ್ರ

ನವದೆಹಲಿ: ₹1 ಕೋಟಿ ಲಂಚ ಪಡೆದ ಆರೋಪದ ಮೇಲೆ ರೈಲ್ವೆಯ ಹಿರಿಯ ಅಧಿಕಾರಿಯನ್ನು ಸಿಬಿಐ ಭಾನುವಾರ ಬಂಧಿಸಿದೆ.

‘1985ರ ಬ್ಯಾಚ್‌ನ ಐಆರ್‌ಇಎಸ್ ಅಧಿಕಾರಿಯಾಗಿರುವ ಮಹೇಂದರ್ ಸಿಂಗ್ ಚೌಹಾಣ್ ಬಂಧನಕ್ಕೊಳಗಾದವರು. ಈಶಾನ್ಯ ಗಡಿ ರೈಲ್ವೆ (ಎನ್‌ಎಫ್‌ಆರ್) ಯೋಜನೆಗಳ ಗುತ್ತಿಗೆಗೆ ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿದೆ. ಲಂಚದ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಸಿಬಿಐ ಅಧಿಕಾರಿಗಳು ಹೇಳಿದರು.

‘ಈ ಅಧಿಕಾರಿ ಅಸ್ಸಾಂನ ಮಾಲಿಗಾಂವ್‌ನಲ್ಲಿರುವ ಎನ್‌ಎಫ್‌ಆರ್‌ ಪ್ರಧಾನ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದೆಹಲಿ, ಅಸ್ಸಾಂ, ಉತ್ತರಾಖಂಡ ಮತ್ತು ಇತರ ಎರಡು ರಾಜ್ಯಗಳ 20 ಪ್ರದೇಶಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸುತ್ತಿದೆ’ ಎಂದು ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT