ನವದೆಹಲಿ: ಭ್ರಷ್ಟಾಚಾರದ ಆರೋಪದ ಮೇಲೆ ವಿಶ್ವ ಭಾರತಿ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಸುಶಾಂತ್ ದತ್ತಗುಪ್ತ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.
2012 ಮತ್ತು 2013 ರ ಅವಧಿಯಲ್ಲಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆಡಳಿತ ಹಾಗೂ ಹಣಕಾಸು ವಿಚಾರಗಳಲ್ಲಿ ಅಕ್ರಮ ಎಸಗಿದ ಆರೋಪ ಅವರ ಮೇಲಿದೆ. ಎರಡು ವರ್ಷಗಳ ಸುದೀರ್ಘ ಪ್ರಾಥಮಿಕ ತನಿಖೆ (ಪಿಇ) ನಂತರ ಸಿಬಿಐ ಈ ಕ್ರಮ ತೆಗೆದುಕೊಂಡಿದೆ.
ವಿಶ್ವಭಾರತಿಯಿಂದ ವೇತನ ಪಡೆಯುತ್ತಿದ್ದ ದತ್ತಗುಪ್ತ ಅವರು ಏಕಕಾಲಕ್ಕೆ ಜವಾಹರಲಾಲಾಲ್ ನೆಹರೂ ವಿಶ್ವವಿದ್ಯಾಲಯದಿಂದ (ಜೆಎನ್ಯು) ನಿವೃತ್ತಿವೇತನವನ್ನೂ ಪಡೆಯುವ ಮೂಲಕ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪಿಸಲಾಗಿದೆ.
ನಿಯಮಗಳನ್ನು ಗಾಳಿಗೆ ತೂರಿ ಇಲಾಖಾ ವಿಚಾರಣೆ ನಡೆಸಿದ್ದ ನಿವೃತ್ತ ನ್ಯಾಯಾಧೀಶರೊಬ್ಬರಿಗೆ ದತ್ತಗುಪ್ತ ₹ 5 ಲಕ್ಷಗೌರವಧನ ನೀಡಿರುವ ಮಾಹಿತಿಯೂ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ತಿಳಿಸಿದೆ.