<p><strong>ನವದೆಹಲಿ</strong>: ‘₹4.56 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಆರು ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇವರು ಆಂಧ್ರಪ್ರದೇಶದ ವಿಜಯವಾಡ ಹಾಗೂ ಗುಂಟೂರಿನವರು’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ’ ಎಂದೂ ಅವರು ಹೇಳಿದ್ದಾರೆ.</p>.<p>‘ಆರೋಗ್ಯ ಭದ್ರತಾ ಯೋಜನೆಯ ಕಾರ್ಯದರ್ಶಿ ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಶಾಖೆಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದರು. ಆ ಖಾತೆಗಳಿಗೆ ತಲಾ ₹ 90 ಲಕ್ಷ ಜಮೆ ಮಾಡಿದ್ದರು. ಮತ್ತೊಂದು ಖಾತೆಗೆ ₹68.84 ಲಕ್ಷ ಹಾಕಿದ್ದರು. ಈ ಆರು ಮಂದಿ ಅಧಿಕಾರಿಗಳು ಖಾತೆದಾರರ ಅನುಮತಿಯಿಲ್ಲದೆಯೇ ಅಷ್ಟೂ ಹಣವನ್ನು ಅನಾಮಧೇಯ ಖಾತೆಗಳಿಗೆ ವರ್ಗಾಯಿಸಿದ್ದರು. ಬಳಿಕ ಕಾರ್ಯದರ್ಶಿಯ ಗಮನಕ್ಕೂ ತರದೆ ಅವರ ನಾಲ್ಕು ಖಾತೆಗಳನ್ನು ರದ್ದುಗೊಳಿಸಿದ್ದರು’ ಎಂದು ಸಿಬಿಐ ವಕ್ತಾರ ಆರ್.ಸಿ.ಜೋಷಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘₹4.56 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಆರು ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇವರು ಆಂಧ್ರಪ್ರದೇಶದ ವಿಜಯವಾಡ ಹಾಗೂ ಗುಂಟೂರಿನವರು’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ’ ಎಂದೂ ಅವರು ಹೇಳಿದ್ದಾರೆ.</p>.<p>‘ಆರೋಗ್ಯ ಭದ್ರತಾ ಯೋಜನೆಯ ಕಾರ್ಯದರ್ಶಿ ಗುಂಟೂರು ಜಿಲ್ಲೆಯ ಮಂಗಳಗಿರಿಯಲ್ಲಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ನ ಶಾಖೆಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದರು. ಆ ಖಾತೆಗಳಿಗೆ ತಲಾ ₹ 90 ಲಕ್ಷ ಜಮೆ ಮಾಡಿದ್ದರು. ಮತ್ತೊಂದು ಖಾತೆಗೆ ₹68.84 ಲಕ್ಷ ಹಾಕಿದ್ದರು. ಈ ಆರು ಮಂದಿ ಅಧಿಕಾರಿಗಳು ಖಾತೆದಾರರ ಅನುಮತಿಯಿಲ್ಲದೆಯೇ ಅಷ್ಟೂ ಹಣವನ್ನು ಅನಾಮಧೇಯ ಖಾತೆಗಳಿಗೆ ವರ್ಗಾಯಿಸಿದ್ದರು. ಬಳಿಕ ಕಾರ್ಯದರ್ಶಿಯ ಗಮನಕ್ಕೂ ತರದೆ ಅವರ ನಾಲ್ಕು ಖಾತೆಗಳನ್ನು ರದ್ದುಗೊಳಿಸಿದ್ದರು’ ಎಂದು ಸಿಬಿಐ ವಕ್ತಾರ ಆರ್.ಸಿ.ಜೋಷಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>