<p><strong>ನವದೆಹಲಿ:</strong> ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ನಜೀಬ್ ಅಹಮದ್ ನಾಪತ್ತೆ ಪ್ರಕರಣವನ್ನು ಮುಕ್ತಾಯಗೊಳಿಸಲು ಸಿಬಿಐಗೆ ದೆಹಲಿ ನ್ಯಾಯಾಲಯವೊಂದು ಸೋಮವಾರ ಅನುಮತಿ ನೀಡಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿದರೂ ಯಾವುದೇ ಪ್ರಯೋಜನವಾಗದ ಕಾರಣ ಈ ನಿರ್ಧಾರ ಪ್ರಕಟಿಸುತ್ತಿರುವುದಾಗಿ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಜ್ಯೋತಿ ಮಹೇಶ್ವರಿ ಅವರು ಹೇಳಿದ್ದಾರೆ. ಜತೆಗೆ ಭವಿಷ್ಯದಲ್ಲಿ ಯಾವುದೇ ಸುಳಿವು ಸಿಕ್ಕರೂ ಪ್ರಕರಣವನ್ನು ಮತ್ತೆ ತೆರೆಯಲು ಸಿಬಿಐಗೆ ಅವಕಾಶ ನೀಡಿದ್ದಾರೆ.</p>.<p>2016ರ ಅಕ್ಟೋಬರ್ 15ರಂದು ನಜೀಬ್ ನಾಪತ್ತೆಯಾಗಿದ್ದು, ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು. ನಂತರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. 2018ರಲ್ಲಿ ಸಿಬಿಐ, ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಸಿಬಿಐ ಸರಿಯಾಗಿ ತನಿಖೆ ನಡೆಸಿಲ್ಲ ಎಂದು ನಜೀಬ್ ಅವರ ತಾಯಿ ಆರೋಪಿಸಿದ್ದರು. </p>.<p class="title">ಸಮಗ್ರ ತನಿಖೆಯ ಬಳಿಕವೂ ಯಾವುದೇ ಸಾಕ್ಷ್ಯ ಸಿಗದ ಕಾರಣದಿಂದ ಈಗ ಮತ್ತೆ ಪ್ರಕರಣವನ್ನು ಮುಕ್ತಾಯಗೊಳಿಸಲು ನ್ಯಾಯಾಲಯ ಅನುಮತಿಸಿದೆ. ‘ಮಗನ ಪತ್ತೆಗಾಗಿ 2016ರಿಂದಲೂ ಹೋರಾಡುತ್ತಿರುವ ನಜೀಬ್ನ ತಾಯಿಯ ಸಂಕಷ್ಟ ಅರ್ಥವಾಗುತ್ತದೆ. ಆದರೆ, ಸಿಬಿಐ ನಡೆಸಿರುವ ತನಿಖೆಯನ್ನು ದೂಷಿಸಲೂ ಸಾಧ್ಯವಿಲ್ಲ‘ ಎಂದು ನ್ಯಾಯಾಲಯ ಹೇಳಿದೆ. </p>.<p>ವಿದ್ಯಾರ್ಥಿ ನಜೀಬ್ಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕೆಲವು ಸದಸ್ಯರಿಗೂ ಜಟಾಪಟಿ ನಡೆದಿದ್ದ ಆರೋಪ ಕೇಳಿಬಂದಿತ್ತು. ಅದಾದ ಮರುದಿನವೇ ಅಂದರೆ 2016ರ ಅಕ್ಟೋಬರ್ 15ರಂದೇ ನಜೀಬ್, ಜೆಎನ್ಯುನ ಮಹಿ–ಮಾಂಡವಿ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ನಜೀಬ್ ಅಹಮದ್ ನಾಪತ್ತೆ ಪ್ರಕರಣವನ್ನು ಮುಕ್ತಾಯಗೊಳಿಸಲು ಸಿಬಿಐಗೆ ದೆಹಲಿ ನ್ಯಾಯಾಲಯವೊಂದು ಸೋಮವಾರ ಅನುಮತಿ ನೀಡಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿದರೂ ಯಾವುದೇ ಪ್ರಯೋಜನವಾಗದ ಕಾರಣ ಈ ನಿರ್ಧಾರ ಪ್ರಕಟಿಸುತ್ತಿರುವುದಾಗಿ ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಜ್ಯೋತಿ ಮಹೇಶ್ವರಿ ಅವರು ಹೇಳಿದ್ದಾರೆ. ಜತೆಗೆ ಭವಿಷ್ಯದಲ್ಲಿ ಯಾವುದೇ ಸುಳಿವು ಸಿಕ್ಕರೂ ಪ್ರಕರಣವನ್ನು ಮತ್ತೆ ತೆರೆಯಲು ಸಿಬಿಐಗೆ ಅವಕಾಶ ನೀಡಿದ್ದಾರೆ.</p>.<p>2016ರ ಅಕ್ಟೋಬರ್ 15ರಂದು ನಜೀಬ್ ನಾಪತ್ತೆಯಾಗಿದ್ದು, ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು. ನಂತರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. 2018ರಲ್ಲಿ ಸಿಬಿಐ, ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಸಿಬಿಐ ಸರಿಯಾಗಿ ತನಿಖೆ ನಡೆಸಿಲ್ಲ ಎಂದು ನಜೀಬ್ ಅವರ ತಾಯಿ ಆರೋಪಿಸಿದ್ದರು. </p>.<p class="title">ಸಮಗ್ರ ತನಿಖೆಯ ಬಳಿಕವೂ ಯಾವುದೇ ಸಾಕ್ಷ್ಯ ಸಿಗದ ಕಾರಣದಿಂದ ಈಗ ಮತ್ತೆ ಪ್ರಕರಣವನ್ನು ಮುಕ್ತಾಯಗೊಳಿಸಲು ನ್ಯಾಯಾಲಯ ಅನುಮತಿಸಿದೆ. ‘ಮಗನ ಪತ್ತೆಗಾಗಿ 2016ರಿಂದಲೂ ಹೋರಾಡುತ್ತಿರುವ ನಜೀಬ್ನ ತಾಯಿಯ ಸಂಕಷ್ಟ ಅರ್ಥವಾಗುತ್ತದೆ. ಆದರೆ, ಸಿಬಿಐ ನಡೆಸಿರುವ ತನಿಖೆಯನ್ನು ದೂಷಿಸಲೂ ಸಾಧ್ಯವಿಲ್ಲ‘ ಎಂದು ನ್ಯಾಯಾಲಯ ಹೇಳಿದೆ. </p>.<p>ವಿದ್ಯಾರ್ಥಿ ನಜೀಬ್ಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕೆಲವು ಸದಸ್ಯರಿಗೂ ಜಟಾಪಟಿ ನಡೆದಿದ್ದ ಆರೋಪ ಕೇಳಿಬಂದಿತ್ತು. ಅದಾದ ಮರುದಿನವೇ ಅಂದರೆ 2016ರ ಅಕ್ಟೋಬರ್ 15ರಂದೇ ನಜೀಬ್, ಜೆಎನ್ಯುನ ಮಹಿ–ಮಾಂಡವಿ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>