<p><strong>ಪಟ್ನಾ:</strong> ವಂಚನೆ ಪ್ರಕರಣವೊಂದರಲ್ಲಿ ಸಿಬಿಐ ನ್ಯಾಯಾಲಯದಲ್ಲಿ ದೋಷಿ ಎಂದು ಸಾಬೀತಾಗಿ ಕಳೆದ ವರ್ಷ ಶಾಸಕ ಸ್ಥಾನ ಕಳೆದುಕೊಂಡಿದ್ದ ಆರ್ ಜೆಡಿಯ ಮಾಜಿ ನಾಯಕ ಅನಿಲ್ ಸಹಾನಿ ಬುಧವಾರ ಬಿಜೆಪಿ ಸೇರಿದ್ದಾರೆ. </p><p>ಬಿಹಾರ ಚುನಾವಣಾ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸಮ್ಮುಖದಲ್ಲಿ ಸಹಾನಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಕೂಡ ಇದ್ದರು. </p><p>2012ರಲ್ಲಿ ಆರ್ ಜೆಡಿಯ ರಾಜ್ಯಸಭೆ ಸಭಾ ನಾಯಕನಾಗಿದ್ದ ಅವಧಿಯಲ್ಲಿ ಪ್ರಯಾಣ ಮಾಡದಿದ್ದರೂ, ರಜೆ ಪ್ರಯಾಣ ರಿಯಾಯಿತಿ ಪಡೆಯಲು ನಕಲಿ ವಿಮಾನ ಟಿಕೆಟ್ ಸಲ್ಲಿಸಿದ್ದ ಪ್ರಕರಣದಲ್ಲಿ ಸಿಬಿಐ ಕೋರ್ಟ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.</p><p>2020ರ ವಿಧಾನಸಭೆ ಚುನಾವಣೆಯಲ್ಲಿ ಕುರ್ಹಾನಿ ಕ್ಷೇತ್ರದಿಂದ ಬಿಜೆಪಿ ಸ್ಪರ್ಧಿ ಕೇದರ್ ಗುಪ್ತಾ ಅವರನ್ನು 900 ಮತಗಳಿಂದ ಸೋಲಿಸಿದ್ದರು. 2024ರಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಗೆದ್ದಿದ್ದ ಗುಪ್ತಾ, ನಂತರ ಸಚಿವರೂ ಆದರು.</p><p>ಮುಜಾಫರ್ ಪುರದಲ್ಲಿ ಭಾರಿ ಹಿಂದುಳಿದ ಜಾತಿಯಾಗಿರುವ ‘ನಿಶಾದ್’ ಸಮುದಾಯದ ಮತದಾರರನ್ನು ಸೆಳೆಯಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ವಂಚನೆ ಪ್ರಕರಣವೊಂದರಲ್ಲಿ ಸಿಬಿಐ ನ್ಯಾಯಾಲಯದಲ್ಲಿ ದೋಷಿ ಎಂದು ಸಾಬೀತಾಗಿ ಕಳೆದ ವರ್ಷ ಶಾಸಕ ಸ್ಥಾನ ಕಳೆದುಕೊಂಡಿದ್ದ ಆರ್ ಜೆಡಿಯ ಮಾಜಿ ನಾಯಕ ಅನಿಲ್ ಸಹಾನಿ ಬುಧವಾರ ಬಿಜೆಪಿ ಸೇರಿದ್ದಾರೆ. </p><p>ಬಿಹಾರ ಚುನಾವಣಾ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸಮ್ಮುಖದಲ್ಲಿ ಸಹಾನಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಕೂಡ ಇದ್ದರು. </p><p>2012ರಲ್ಲಿ ಆರ್ ಜೆಡಿಯ ರಾಜ್ಯಸಭೆ ಸಭಾ ನಾಯಕನಾಗಿದ್ದ ಅವಧಿಯಲ್ಲಿ ಪ್ರಯಾಣ ಮಾಡದಿದ್ದರೂ, ರಜೆ ಪ್ರಯಾಣ ರಿಯಾಯಿತಿ ಪಡೆಯಲು ನಕಲಿ ವಿಮಾನ ಟಿಕೆಟ್ ಸಲ್ಲಿಸಿದ್ದ ಪ್ರಕರಣದಲ್ಲಿ ಸಿಬಿಐ ಕೋರ್ಟ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.</p><p>2020ರ ವಿಧಾನಸಭೆ ಚುನಾವಣೆಯಲ್ಲಿ ಕುರ್ಹಾನಿ ಕ್ಷೇತ್ರದಿಂದ ಬಿಜೆಪಿ ಸ್ಪರ್ಧಿ ಕೇದರ್ ಗುಪ್ತಾ ಅವರನ್ನು 900 ಮತಗಳಿಂದ ಸೋಲಿಸಿದ್ದರು. 2024ರಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಗೆದ್ದಿದ್ದ ಗುಪ್ತಾ, ನಂತರ ಸಚಿವರೂ ಆದರು.</p><p>ಮುಜಾಫರ್ ಪುರದಲ್ಲಿ ಭಾರಿ ಹಿಂದುಳಿದ ಜಾತಿಯಾಗಿರುವ ‘ನಿಶಾದ್’ ಸಮುದಾಯದ ಮತದಾರರನ್ನು ಸೆಳೆಯಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>