<p><strong>ನವದೆಹಲಿ</strong>: ಮನೆ ಮಾರಾಟ, ಗೃಹಸಾಲ ಯೋಜನೆಗಳ ಹೆಸರಿನಲ್ಲಿ ಜನರನ್ನು ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಕೋಲ್ಕತ್ತ, ಮುಂಬೈ ಸೇರಿದಂತೆ 12 ಪ್ರದೇಶಗಳಲ್ಲಿ ಸಿಬಿಐ ಶನಿವಾರ ಶೋಧ ಕಾರ್ಯಾಚರಣೆ ನಡೆಸಿದೆ.</p>.<p>ಜತೆಗೆ ಕೆಲವು ಬಿಲ್ಡರ್ಗಳು ಹಾಗೂ ಹಣಕಾಸು ಸಂಸ್ಥೆಗಳ ವಿರುದ್ಧ 6 ಪ್ರಕರಣಗಳನ್ನೂ ದಾಖಲಿಸಿರುವುದಾಗಿ ತಿಳಿಸಿದೆ.</p>.<p>ಮನೆ ಖರೀದಿ ಹೆಸರಿನಲ್ಲಿ ವಂಚನೆಗೀಡಾಗಿದ್ದ ದೇಶದ ವಿವಿಧ ಭಾಗಗಳ ಜನರು, ಗೃಹ ಸಾಲ ಒದಗಿಸಿದ್ದ ಕೆಲವು ಹಣಕಾಸು ಸಂಸ್ಥೆಗಳು ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುತ್ತಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.</p>.<p class="bodytext">ಈ ಪ್ರಕರಣವನ್ನು ಆಲಿಸಿದ್ದ ಸುಪ್ರೀಂ ಕೋರ್ಟ್, ಬಿಲ್ಡರ್ಗಳು ಮತ್ತು ಹಣಕಾಸು ಸಂಸ್ಥೆಗಳ ನಡುವಿನ ಅಸಹಜ ನಂಟಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು 2025ರ ಏಪ್ರಿಲ್ನಲ್ಲಿ ಕೇಂದ್ರಿಯ ತನಿಖಾ ಸಂಸ್ಥೆಗೆ (ಸಿಬಿಐ) ನಿರ್ದೇಶಿಸಿತ್ತು. </p>.<p class="bodytext">ಅದರಂತೆ ಎನ್ಸಿಆರ್ ಹೊರತಾದ ಪ್ರದೇಶಗಳಲ್ಲಿ ತನಿಖೆ ನಡೆಸಿದ ಸಿಬಿಐ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು. ವರದಿ ಪರಿಶೀಲಿಸಿದ ಸುಪ್ರೀಂಕೋರ್ಟ್, ಬೆಂಗಳೂರು, ಮುಂಬೈ ಹಾಗೂ ಕೋಲ್ಕತ್ತದ ಕೆಲವು ಬಿಲ್ಡರ್ಗಳ ವಿರುದ್ಧ ಒಟ್ಟು 6 ಪ್ರಕರಣ ದಾಖಲಿಸಲು ನಿರ್ದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ದೆಹಲಿ ಎನ್ಸಿಆರ್ ಪ್ರದೇಶದಲ್ಲೂ ತನಿಖೆ ನಡೆಸಿ, 22 ಪ್ರಕರಣಗಳನ್ನು ಈ ಹಿಂದೆ ದಾಖಲಿಸಲಾಗಿದೆ ಎಂದೂ ಸಿಬಿಐ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮನೆ ಮಾರಾಟ, ಗೃಹಸಾಲ ಯೋಜನೆಗಳ ಹೆಸರಿನಲ್ಲಿ ಜನರನ್ನು ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಕೋಲ್ಕತ್ತ, ಮುಂಬೈ ಸೇರಿದಂತೆ 12 ಪ್ರದೇಶಗಳಲ್ಲಿ ಸಿಬಿಐ ಶನಿವಾರ ಶೋಧ ಕಾರ್ಯಾಚರಣೆ ನಡೆಸಿದೆ.</p>.<p>ಜತೆಗೆ ಕೆಲವು ಬಿಲ್ಡರ್ಗಳು ಹಾಗೂ ಹಣಕಾಸು ಸಂಸ್ಥೆಗಳ ವಿರುದ್ಧ 6 ಪ್ರಕರಣಗಳನ್ನೂ ದಾಖಲಿಸಿರುವುದಾಗಿ ತಿಳಿಸಿದೆ.</p>.<p>ಮನೆ ಖರೀದಿ ಹೆಸರಿನಲ್ಲಿ ವಂಚನೆಗೀಡಾಗಿದ್ದ ದೇಶದ ವಿವಿಧ ಭಾಗಗಳ ಜನರು, ಗೃಹ ಸಾಲ ಒದಗಿಸಿದ್ದ ಕೆಲವು ಹಣಕಾಸು ಸಂಸ್ಥೆಗಳು ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುತ್ತಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.</p>.<p class="bodytext">ಈ ಪ್ರಕರಣವನ್ನು ಆಲಿಸಿದ್ದ ಸುಪ್ರೀಂ ಕೋರ್ಟ್, ಬಿಲ್ಡರ್ಗಳು ಮತ್ತು ಹಣಕಾಸು ಸಂಸ್ಥೆಗಳ ನಡುವಿನ ಅಸಹಜ ನಂಟಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು 2025ರ ಏಪ್ರಿಲ್ನಲ್ಲಿ ಕೇಂದ್ರಿಯ ತನಿಖಾ ಸಂಸ್ಥೆಗೆ (ಸಿಬಿಐ) ನಿರ್ದೇಶಿಸಿತ್ತು. </p>.<p class="bodytext">ಅದರಂತೆ ಎನ್ಸಿಆರ್ ಹೊರತಾದ ಪ್ರದೇಶಗಳಲ್ಲಿ ತನಿಖೆ ನಡೆಸಿದ ಸಿಬಿಐ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು. ವರದಿ ಪರಿಶೀಲಿಸಿದ ಸುಪ್ರೀಂಕೋರ್ಟ್, ಬೆಂಗಳೂರು, ಮುಂಬೈ ಹಾಗೂ ಕೋಲ್ಕತ್ತದ ಕೆಲವು ಬಿಲ್ಡರ್ಗಳ ವಿರುದ್ಧ ಒಟ್ಟು 6 ಪ್ರಕರಣ ದಾಖಲಿಸಲು ನಿರ್ದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ದೆಹಲಿ ಎನ್ಸಿಆರ್ ಪ್ರದೇಶದಲ್ಲೂ ತನಿಖೆ ನಡೆಸಿ, 22 ಪ್ರಕರಣಗಳನ್ನು ಈ ಹಿಂದೆ ದಾಖಲಿಸಲಾಗಿದೆ ಎಂದೂ ಸಿಬಿಐ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>