<p><strong>ನವದೆಹಲಿ: </strong>ಜಾರಿ ನಿರ್ದೇಶನಾಲಯವು (ಇ.ಡಿ) ಅನಗತ್ಯವಾಗಿ ತೊಂದರೆ ಕೊಡುತ್ತಿದ್ದು, ಈ ರೀತಿಯಿಂದ ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.</p>.<p>ದೆಹಲಿ ಅಬಕಾರಿ ನೀತಿ 2021-22ರಲ್ಲಿ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಇ.ಡಿ ದೇಶದಾದ್ಯಂತ 40 ಸ್ಥಳಗಳಲ್ಲಿ ದಾಳಿ ನಡೆಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/ed-conducts-fresh-raids-in-delhi-liquor-policy-case-972498.html" itemprop="url">ದೆಹಲಿ ಅಬಕಾರಿ ಹಗರಣ: ಕರ್ನಾಟಕವೂ ಸೇರಿ ದೇಶದ 40 ಕಡೆ ಇ.ಡಿ ದಾಳಿ </a></p>.<p>ಪ್ರತಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಕೇಜ್ರಿವಾಲ್, ಬಿಜೆಪಿ ಆರೋಪ ಮಾಡುತ್ತಿರುವ ಅಬಕಾರಿ ಹಗರಣ ಏನೆಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.</p>.<p>ಬಿಜೆಪಿ ನಾಯಕರೊಬ್ಬರು ₹8000 ಕೋಟಿ ಹಗರಣ ನಡೆದಿದೆ ಎಂದು ಆಪಾದಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ₹144 ಕೋಟಿ ಹಗರಣ ಎಂದು ಹೇಳುತ್ತಾರೆ. ಸಿಬಿಐ ಎಫ್ಐಆರ್ನಲ್ಲಿ ₹1 ಕೋಟಿ ಹಗರಣ ಎಂದು ಉಲ್ಲೇಖವಾಗಿದೆ. ನಿಜಕ್ಕೂ ಮದ್ಯದ ಹಗರಣ ಏನೆಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಜಾರಿ ನಿರ್ದೇಶನಾಲಯವು (ಇ.ಡಿ) ಅನಗತ್ಯವಾಗಿ ತೊಂದರೆ ಕೊಡುತ್ತಿದ್ದು, ಈ ರೀತಿಯಿಂದ ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.</p>.<p>ದೆಹಲಿ ಅಬಕಾರಿ ನೀತಿ 2021-22ರಲ್ಲಿ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಇ.ಡಿ ದೇಶದಾದ್ಯಂತ 40 ಸ್ಥಳಗಳಲ್ಲಿ ದಾಳಿ ನಡೆಸಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/ed-conducts-fresh-raids-in-delhi-liquor-policy-case-972498.html" itemprop="url">ದೆಹಲಿ ಅಬಕಾರಿ ಹಗರಣ: ಕರ್ನಾಟಕವೂ ಸೇರಿ ದೇಶದ 40 ಕಡೆ ಇ.ಡಿ ದಾಳಿ </a></p>.<p>ಪ್ರತಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಕೇಜ್ರಿವಾಲ್, ಬಿಜೆಪಿ ಆರೋಪ ಮಾಡುತ್ತಿರುವ ಅಬಕಾರಿ ಹಗರಣ ಏನೆಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.</p>.<p>ಬಿಜೆಪಿ ನಾಯಕರೊಬ್ಬರು ₹8000 ಕೋಟಿ ಹಗರಣ ನಡೆದಿದೆ ಎಂದು ಆಪಾದಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ₹144 ಕೋಟಿ ಹಗರಣ ಎಂದು ಹೇಳುತ್ತಾರೆ. ಸಿಬಿಐ ಎಫ್ಐಆರ್ನಲ್ಲಿ ₹1 ಕೋಟಿ ಹಗರಣ ಎಂದು ಉಲ್ಲೇಖವಾಗಿದೆ. ನಿಜಕ್ಕೂ ಮದ್ಯದ ಹಗರಣ ಏನೆಂಬುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>