<p><strong>ನವದೆಹಲಿ/ಕೋಲ್ಕತ್ತ</strong> : ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಮೇಲೆ ಸಂದೇಶ್<br>ಖಾಲಿಯಲ್ಲಿ ನಡೆದ ದಾಳಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.</p><p>ಅಲ್ಲದೇ, ಪ್ರಕರಣದ ಪ್ರಮುಖ ಆರೋಪಿ, ಟಿಎಂಸಿಯಿಂದ ಅಮಾನತುಗೊಂಡಿರುವ ಶಹಜಹಾನ್ ಶೇಖ್ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಬೇಕು ಎಂದೂ ಹೈಕೋರ್ಟ್ ನಿರ್ದೇಶನ ನೀಡಿದೆ.</p><p>ಆದರೆ, ಶಹಜಹಾನ್ ಶೇಖ್ ಅವರನ್ನು ವಶಕ್ಕೆ ಪಡೆಯಲು ಸಿಬಿಐ ವಿಫಲವಾಯಿತು.</p><p>ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ, ಶಹಜಹಾನ್ ಶೇಖ್ ಅವರನ್ನು ವಶಕ್ಕೆ ಪಡೆಯುವುದಕ್ಕಾಗಿ ಸಿಬಿಐ ಅಧಿಕಾರಿಗಳಿದ್ದ ಒಂದು ತಂಡ ಸಿಆರ್ಪಿಎಫ್ ಸಿಬ್ಬಂದಿಯೊಂದಿಗೆ ಕೋಲ್ಕತ್ತದ ಭವಾನಿ ಭವನದಲ್ಲಿರುವ ಸಿಐಡಿ ಕೇಂದ್ರ ಕಚೇರಿಗೆ ತೆರಳಿತು.</p><p>ರಾತ್ರಿ 7.30ರ ವರೆಗೆ ಕಾದ ಸಿಬಿಐ ತಂಡ, ಬರಿಗೈಲಿ ವಾಪಸಾಯಿತು. ‘ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಹೀಗಾಗಿ, ಶೇಖ್ ಅವರನ್ನು ಸಿಬಿಐಗೆ ಹಸ್ತಾಂತರಿಸಿಲ್ಲ’ ಎಂದು ಸಿಐಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಇನ್ನೊಂದೆಡೆ, ಪ್ರಕರಣದ ತನಿಖೆಯನ್ನು ವಹಿಸಿಕೊಳ್ಳುವುದಕ್ಕಾಗಿ ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳ ಪೊಲೀಸರನ್ನು ಸಂಪರ್ಕಿಸಿದರು.</p><p>ಈ ಬೆಳವಣಿಗೆ ಬೆನ್ನಲ್ಲೇ, ಕಲ್ಕತ್ತ ಹೈಕೋರ್ಟ್ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತು.</p><p>ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಪಶ್ಚಿಮ ಬಂಗಾಳ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು. </p><p>ತುರ್ತು ವಿಚಾರಣೆಗೆ ನಿರಾಕರಿಸಿದ ನ್ಯಾಯಪೀಠ, ಅರ್ಜಿಯನ್ನು ವಿಚಾರಣೆ ಪಟ್ಟಿಗೆ ಸೇರಿಸುವ ಸಂಬಂಧ, ಸುಪ್ರೀಂ ಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಮನವಿ ಸಲ್ಲಿಸುವಂತೆ ಸಿಂಘ್ವಿ ಅವರಿಗೆ ಸೂಚಿಸಿತು.</p><p><strong>ಪ್ರತ್ಯೇಕ ಅರ್ಜಿ: ಜನವರಿ 5ರಂದು ಸಂದೇಶ್ಖಾಲಿಯಲ್ಲಿ ಇ.ಡಿ ಅಧಿಕಾರಿ ಗಳ ಮೇಲೆ ಹಲ್ಲೆ ನಡೆದಿತ್ತು. </strong></p>.<p>ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಪೊಲೀಸರು ಹಾಗೂ ಸಿಬಿಐ ಅಧಿಕಾರಿಗಳನ್ನು ಒಳಗೊಂಡ ಜಂಟಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಕಲ್ಕತ್ತ ಹೈಕೋರ್ಟ್ ಜನವರಿ 17ರಂದು ಆದೇಶಿಸಿತ್ತು.</p><p>ಪ್ರಕರಣದ ಪ್ರಮುಖ ಆರೋಪಿ ಶಹಜಹಾನ್ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಫೆ.29ರಂದು ಬಂಧಿಸಿದ್ದರು.</p><p>ಎಸ್ಐಟಿ ರಚನೆಗೆ ಸಂಬಂಧಿಸಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇ.ಡಿ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದವು. ತನಿಖೆಯನ್ನು ಸಿಬಿಐಗೆ ವಹಿಸುವಂತೆ ಇ.ಡಿ ಕೋರಿದ್ದರೆ, ರಾಜ್ಯ ಪೊಲೀಸರಿಗೆ ವಹಿಸುವಂತೆ ಪಶ್ಚಿಮ ಬಂಗಾಳ ಸರ್ಕಾರ ಮನವಿ ಮಾಡಿತ್ತು.</p><p>ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠವು, ಇ.ಡಿ ಅರ್ಜಿಯನ್ನು ಪುರಸ್ಕರಿಸಿತು.</p><p>‘ಪಕ್ಷಪಾತದ ವರ್ತನೆ’: ಅರ್ಜಿ ವಿಚಾರಣೆ ವೇಳೆ, ಪಶ್ಚಿಮ ಬಂಗಾಳ ಪೊಲೀಸರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ ಹೈಕೋರ್ಟ್ನ ವಿಭಾಗೀಯ ಪೀಠ, ‘ಈ ಪ್ರಕರಣದಲ್ಲಿ ಪೊಲೀಸರು ಸಂಪೂರ್ಣ ಪಕ್ಷಪಾತದಿಂದ ವರ್ತಿಸಿದ್ದಾರೆ’ ಎಂದು ಹೇಳಿತು.</p><p>‘ಆರೋಪಿಯನ್ನು ರಕ್ಷಿಸುವ ಸಂಬಂಧ ತನಿಖೆಯನ್ನು ವಿಳಂಬ ಮಾಡಲಾಗಿದೆ’ ಎಂದೂ ಪೀಠವು ಹೇಳಿತು.</p><p>‘ತನಿಖೆ ನಡೆಸುವುದಕ್ಕಾಗಿ ಸಿಬಿಐಗೆ ಹಸ್ತಾಂತರಿಸಲು ಯೋಗ್ಯವಾದ ಪ್ರಕರಣ ಇದಾಗಿದೆ’ ಎಂದು ಅಭಿಪ್ರಾಯಪಟ್ಟ ವಿಭಾಗೀಯ ಪೀಠ, ‘ಸಂಜೆ 4.30ರ ಒಳಗಾಗಿ ಆರೋಪಿಯನ್ನು ಸಿಬಿಐಗೆ ಒಪ್ಪಿಸಬೇಕು’ ಎಂದೂ ಆದೇಶಿಸಿತು.</p>.<h2><strong>ಶಹಜಹಾನ್ ಸ್ವತ್ತು ಜಪ್ತಿ</strong></h2><p>ಶಹಜಹಾನ್ ಶೇಖ್ ಅವರಿಗೆ ಸೇರಿದ, ಸಂದೇಶ್ಖಾಲಿಯಲ್ಲಿರುವ ₹12.78 ಕೋಟಿ ಮೌಲ್ಯದ ಸ್ವತ್ತುಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಂಗಳವಾರ ಜಪ್ತಿ ಮಾಡಿದ್ದಾರೆ.</p><p>ಬ್ಯಾಂಕ್ ಠೇವಣಿಗಳು, ಒಂದು ಅಪಾರ್ಟ್ಮೆಂಟ್, ಕೃಷಿ ಭೂಮಿ ಹಾಗೂ ಮೀನುಗಾರಿಕೆ ನಡೆಸುವ ಜಮೀನುಗಳು ಜಪ್ತಿ ಮಾಡಿದ ಸ್ವತ್ತುಗಳಲ್ಲಿ ಸೇರಿವೆ.</p><p>‘ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ, ಶಹಜಹಾನ್ ಶೇಖ್ಗೆ ಸೇರಿದ ಸ್ವತ್ತುಗಳನ್ನು ಜಪ್ತಿ ಮಾಡುವುದಕ್ಕೆ ಸಂಬಂಧಿಸಿ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ’ ಎಂದು ಇ.ಡಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><blockquote>ಸತ್ಯಮೇವ ಜಯತೆ, ಕಲ್ಕತ್ತ ಹೈಕೋರ್ಟ್ ಆದೇಶ ಬಿಜೆಪಿಯ ನಿಲುವನ್ನು ಸಮರ್ಥಿಸಿದೆ </blockquote><span class="attribution">ಶೆಹಜಾದ್ ಪೂನಾವಾಲಾ, ಬಿಜೆಪಿ ವಕ್ತಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಕೋಲ್ಕತ್ತ</strong> : ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಮೇಲೆ ಸಂದೇಶ್<br>ಖಾಲಿಯಲ್ಲಿ ನಡೆದ ದಾಳಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.</p><p>ಅಲ್ಲದೇ, ಪ್ರಕರಣದ ಪ್ರಮುಖ ಆರೋಪಿ, ಟಿಎಂಸಿಯಿಂದ ಅಮಾನತುಗೊಂಡಿರುವ ಶಹಜಹಾನ್ ಶೇಖ್ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಬೇಕು ಎಂದೂ ಹೈಕೋರ್ಟ್ ನಿರ್ದೇಶನ ನೀಡಿದೆ.</p><p>ಆದರೆ, ಶಹಜಹಾನ್ ಶೇಖ್ ಅವರನ್ನು ವಶಕ್ಕೆ ಪಡೆಯಲು ಸಿಬಿಐ ವಿಫಲವಾಯಿತು.</p><p>ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ, ಶಹಜಹಾನ್ ಶೇಖ್ ಅವರನ್ನು ವಶಕ್ಕೆ ಪಡೆಯುವುದಕ್ಕಾಗಿ ಸಿಬಿಐ ಅಧಿಕಾರಿಗಳಿದ್ದ ಒಂದು ತಂಡ ಸಿಆರ್ಪಿಎಫ್ ಸಿಬ್ಬಂದಿಯೊಂದಿಗೆ ಕೋಲ್ಕತ್ತದ ಭವಾನಿ ಭವನದಲ್ಲಿರುವ ಸಿಐಡಿ ಕೇಂದ್ರ ಕಚೇರಿಗೆ ತೆರಳಿತು.</p><p>ರಾತ್ರಿ 7.30ರ ವರೆಗೆ ಕಾದ ಸಿಬಿಐ ತಂಡ, ಬರಿಗೈಲಿ ವಾಪಸಾಯಿತು. ‘ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಹೀಗಾಗಿ, ಶೇಖ್ ಅವರನ್ನು ಸಿಬಿಐಗೆ ಹಸ್ತಾಂತರಿಸಿಲ್ಲ’ ಎಂದು ಸಿಐಡಿ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಇನ್ನೊಂದೆಡೆ, ಪ್ರಕರಣದ ತನಿಖೆಯನ್ನು ವಹಿಸಿಕೊಳ್ಳುವುದಕ್ಕಾಗಿ ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳ ಪೊಲೀಸರನ್ನು ಸಂಪರ್ಕಿಸಿದರು.</p><p>ಈ ಬೆಳವಣಿಗೆ ಬೆನ್ನಲ್ಲೇ, ಕಲ್ಕತ್ತ ಹೈಕೋರ್ಟ್ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತು.</p><p>ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಪಶ್ಚಿಮ ಬಂಗಾಳ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು. </p><p>ತುರ್ತು ವಿಚಾರಣೆಗೆ ನಿರಾಕರಿಸಿದ ನ್ಯಾಯಪೀಠ, ಅರ್ಜಿಯನ್ನು ವಿಚಾರಣೆ ಪಟ್ಟಿಗೆ ಸೇರಿಸುವ ಸಂಬಂಧ, ಸುಪ್ರೀಂ ಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಮನವಿ ಸಲ್ಲಿಸುವಂತೆ ಸಿಂಘ್ವಿ ಅವರಿಗೆ ಸೂಚಿಸಿತು.</p><p><strong>ಪ್ರತ್ಯೇಕ ಅರ್ಜಿ: ಜನವರಿ 5ರಂದು ಸಂದೇಶ್ಖಾಲಿಯಲ್ಲಿ ಇ.ಡಿ ಅಧಿಕಾರಿ ಗಳ ಮೇಲೆ ಹಲ್ಲೆ ನಡೆದಿತ್ತು. </strong></p>.<p>ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಪೊಲೀಸರು ಹಾಗೂ ಸಿಬಿಐ ಅಧಿಕಾರಿಗಳನ್ನು ಒಳಗೊಂಡ ಜಂಟಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಕಲ್ಕತ್ತ ಹೈಕೋರ್ಟ್ ಜನವರಿ 17ರಂದು ಆದೇಶಿಸಿತ್ತು.</p><p>ಪ್ರಕರಣದ ಪ್ರಮುಖ ಆರೋಪಿ ಶಹಜಹಾನ್ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಫೆ.29ರಂದು ಬಂಧಿಸಿದ್ದರು.</p><p>ಎಸ್ಐಟಿ ರಚನೆಗೆ ಸಂಬಂಧಿಸಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇ.ಡಿ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದವು. ತನಿಖೆಯನ್ನು ಸಿಬಿಐಗೆ ವಹಿಸುವಂತೆ ಇ.ಡಿ ಕೋರಿದ್ದರೆ, ರಾಜ್ಯ ಪೊಲೀಸರಿಗೆ ವಹಿಸುವಂತೆ ಪಶ್ಚಿಮ ಬಂಗಾಳ ಸರ್ಕಾರ ಮನವಿ ಮಾಡಿತ್ತು.</p><p>ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠವು, ಇ.ಡಿ ಅರ್ಜಿಯನ್ನು ಪುರಸ್ಕರಿಸಿತು.</p><p>‘ಪಕ್ಷಪಾತದ ವರ್ತನೆ’: ಅರ್ಜಿ ವಿಚಾರಣೆ ವೇಳೆ, ಪಶ್ಚಿಮ ಬಂಗಾಳ ಪೊಲೀಸರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ ಹೈಕೋರ್ಟ್ನ ವಿಭಾಗೀಯ ಪೀಠ, ‘ಈ ಪ್ರಕರಣದಲ್ಲಿ ಪೊಲೀಸರು ಸಂಪೂರ್ಣ ಪಕ್ಷಪಾತದಿಂದ ವರ್ತಿಸಿದ್ದಾರೆ’ ಎಂದು ಹೇಳಿತು.</p><p>‘ಆರೋಪಿಯನ್ನು ರಕ್ಷಿಸುವ ಸಂಬಂಧ ತನಿಖೆಯನ್ನು ವಿಳಂಬ ಮಾಡಲಾಗಿದೆ’ ಎಂದೂ ಪೀಠವು ಹೇಳಿತು.</p><p>‘ತನಿಖೆ ನಡೆಸುವುದಕ್ಕಾಗಿ ಸಿಬಿಐಗೆ ಹಸ್ತಾಂತರಿಸಲು ಯೋಗ್ಯವಾದ ಪ್ರಕರಣ ಇದಾಗಿದೆ’ ಎಂದು ಅಭಿಪ್ರಾಯಪಟ್ಟ ವಿಭಾಗೀಯ ಪೀಠ, ‘ಸಂಜೆ 4.30ರ ಒಳಗಾಗಿ ಆರೋಪಿಯನ್ನು ಸಿಬಿಐಗೆ ಒಪ್ಪಿಸಬೇಕು’ ಎಂದೂ ಆದೇಶಿಸಿತು.</p>.<h2><strong>ಶಹಜಹಾನ್ ಸ್ವತ್ತು ಜಪ್ತಿ</strong></h2><p>ಶಹಜಹಾನ್ ಶೇಖ್ ಅವರಿಗೆ ಸೇರಿದ, ಸಂದೇಶ್ಖಾಲಿಯಲ್ಲಿರುವ ₹12.78 ಕೋಟಿ ಮೌಲ್ಯದ ಸ್ವತ್ತುಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಂಗಳವಾರ ಜಪ್ತಿ ಮಾಡಿದ್ದಾರೆ.</p><p>ಬ್ಯಾಂಕ್ ಠೇವಣಿಗಳು, ಒಂದು ಅಪಾರ್ಟ್ಮೆಂಟ್, ಕೃಷಿ ಭೂಮಿ ಹಾಗೂ ಮೀನುಗಾರಿಕೆ ನಡೆಸುವ ಜಮೀನುಗಳು ಜಪ್ತಿ ಮಾಡಿದ ಸ್ವತ್ತುಗಳಲ್ಲಿ ಸೇರಿವೆ.</p><p>‘ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ, ಶಹಜಹಾನ್ ಶೇಖ್ಗೆ ಸೇರಿದ ಸ್ವತ್ತುಗಳನ್ನು ಜಪ್ತಿ ಮಾಡುವುದಕ್ಕೆ ಸಂಬಂಧಿಸಿ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ’ ಎಂದು ಇ.ಡಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><blockquote>ಸತ್ಯಮೇವ ಜಯತೆ, ಕಲ್ಕತ್ತ ಹೈಕೋರ್ಟ್ ಆದೇಶ ಬಿಜೆಪಿಯ ನಿಲುವನ್ನು ಸಮರ್ಥಿಸಿದೆ </blockquote><span class="attribution">ಶೆಹಜಾದ್ ಪೂನಾವಾಲಾ, ಬಿಜೆಪಿ ವಕ್ತಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>