<p><strong>ನವದೆಹಲಿ</strong>: ಪಶ್ಚಿಮ ಬಂಗಾಳ ಮುಖ್ಯಮಂತ್ರಿಯ ಆಪ್ತ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಯವರ ಸಂಬಂಧಿ ಕೋಲ್ಕತ್ತಾ ಮೂಲದ ಉದ್ಯಮಿ ಬಿನಯ್ ಮಿಶ್ರಾ ಅವರ ವಿರುದ್ಧ ಜಾನುವಾರು ಕಳ್ಳಸಾಗಣೆ ಪ್ರಕರಣದಡಿ ಸಿಬಿಐ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.</p>.<p>ಅಸನ್ಸೊಲ್ನ ಸಿಬಿಐ ನ್ಯಾಯಾಲಯದಲ್ಲಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆರೋಪಿ ಮಿಶ್ರ ತಲೆಮರೆಸಿ ಕೊಂಡಿದ್ದಾನೆಂದು ಸಿಬಿಐ ಉಲ್ಲೇಖಿಸಿದೆ.</p>.<p>ಜಾನುವಾರು ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಾರ್ಯಾಚರಣೆಯದಲ್ಲಿದ್ದ ಬಿಎಸ್ಎಫ್ ಕಮಾಂಡೆಂಟ್ ಸತೀಶ್ ಕುಮಾರ್ ಮತ್ತು ಇತರ ಆರು ಜನರ ವಿರುದ್ಧ ಸಿಬಿಐ ಫೆಬ್ರವರಿ 18 ರಂದು ಚಾರ್ಜ್ಶೀಟ್ ಸಲ್ಲಿಸಿತ್ತು. ಸಿಬಿಐ ಈ ಪ್ರಕರಣವನ್ನು ಕಳೆದ ವರ್ಷ ಸೆಪ್ಟೆಂಬರ್ 21ರಂದು ಕೈಗೆತ್ತಿಕೊಂಡಿತ್ತು.</p>.<p>ಈಸ್ಟರ್ ಕೋಲ್ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಂದ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಮತ್ತು ದರೋಡೆಕೋರರಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆ ಇತ್ತೀಚೆಗೆ ಬ್ಯಾನರ್ಜಿ ಅವರ ಪತ್ನಿ ರುಜೀರಾ ಮತ್ತು ಅತ್ತಿಗೆ ಮೇನಕಾ ಗಂಭೀರ್ ಅವರನ್ನು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಬಂಗಾಳ ಮುಖ್ಯಮಂತ್ರಿಯ ಆಪ್ತ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಯವರ ಸಂಬಂಧಿ ಕೋಲ್ಕತ್ತಾ ಮೂಲದ ಉದ್ಯಮಿ ಬಿನಯ್ ಮಿಶ್ರಾ ಅವರ ವಿರುದ್ಧ ಜಾನುವಾರು ಕಳ್ಳಸಾಗಣೆ ಪ್ರಕರಣದಡಿ ಸಿಬಿಐ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.</p>.<p>ಅಸನ್ಸೊಲ್ನ ಸಿಬಿಐ ನ್ಯಾಯಾಲಯದಲ್ಲಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆರೋಪಿ ಮಿಶ್ರ ತಲೆಮರೆಸಿ ಕೊಂಡಿದ್ದಾನೆಂದು ಸಿಬಿಐ ಉಲ್ಲೇಖಿಸಿದೆ.</p>.<p>ಜಾನುವಾರು ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಾರ್ಯಾಚರಣೆಯದಲ್ಲಿದ್ದ ಬಿಎಸ್ಎಫ್ ಕಮಾಂಡೆಂಟ್ ಸತೀಶ್ ಕುಮಾರ್ ಮತ್ತು ಇತರ ಆರು ಜನರ ವಿರುದ್ಧ ಸಿಬಿಐ ಫೆಬ್ರವರಿ 18 ರಂದು ಚಾರ್ಜ್ಶೀಟ್ ಸಲ್ಲಿಸಿತ್ತು. ಸಿಬಿಐ ಈ ಪ್ರಕರಣವನ್ನು ಕಳೆದ ವರ್ಷ ಸೆಪ್ಟೆಂಬರ್ 21ರಂದು ಕೈಗೆತ್ತಿಕೊಂಡಿತ್ತು.</p>.<p>ಈಸ್ಟರ್ ಕೋಲ್ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಂದ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಮತ್ತು ದರೋಡೆಕೋರರಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆ ಇತ್ತೀಚೆಗೆ ಬ್ಯಾನರ್ಜಿ ಅವರ ಪತ್ನಿ ರುಜೀರಾ ಮತ್ತು ಅತ್ತಿಗೆ ಮೇನಕಾ ಗಂಭೀರ್ ಅವರನ್ನು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>