<p><strong>ಹೈದರಾಬಾದ್:</strong> ಅತ್ಯಾಚಾರಕ್ಕೀಡಾಗಿ 2007ರಲ್ಲಿ ಮೃತಪಟ್ಟಿದ್ದ ಆಯೇಷಾ ಮೀರಾ ಅವರ ಮೃತದೇಹವನ್ನು ನ್ಯಾಯಾಲಯದ ಆದೇಶದಂತೆ ಅವರ ಕುಟುಂಬಸ್ಥರಿಗೆ ಸಿಬಿಐ ಶುಕ್ರವಾರ ಹಸ್ತಾಂತರಿಸಿದೆ.</p>.<p>ನ್ಯಾಯಾಲಯದ ಆದೇಶದಂತೆ ಕಳೆದ ವರ್ಷ ಮರುಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣವು ಖುಲಾಸೆಯಾಗಿರುವುದರಿಂದ ಆಯೇಷಾ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿಸುವಂತೆ ಸಿಬಿಐ ನ್ಯಾಯಾಲಯ ಆದೇಶಿಸಿತ್ತು. </p>.<p>ಬಿ–ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದ ಆಯೇಷಾ ಅವರು ಮಹಿಳಾ ವಸತಿನಿಲಯದ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಸೆಷನ್ಸ್ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಸತ್ಯಂಬಾಬು ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದಿರುವ ಕಾರಣ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಆಯೇಷಾ ಪೋಷಕರು ಮೇಲ್ಮನವಿ ಸಲ್ಲಿಸಿದ ಕಾರಣ ಸಿಬಿಐ ಮರುತನಿಖೆಗೆ ಹೈಕೋರ್ಟ್ ಆದೇಶಿಸಿತ್ತು. ಸಿಬಿಐ ನೀಡಿದ್ದ ಅಂತಿಮ ವರದಿಯು ನ್ಯಾಯಾಲಯವು ಇತ್ತೀಚೆಗೆ ಅಂಗೀಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಅತ್ಯಾಚಾರಕ್ಕೀಡಾಗಿ 2007ರಲ್ಲಿ ಮೃತಪಟ್ಟಿದ್ದ ಆಯೇಷಾ ಮೀರಾ ಅವರ ಮೃತದೇಹವನ್ನು ನ್ಯಾಯಾಲಯದ ಆದೇಶದಂತೆ ಅವರ ಕುಟುಂಬಸ್ಥರಿಗೆ ಸಿಬಿಐ ಶುಕ್ರವಾರ ಹಸ್ತಾಂತರಿಸಿದೆ.</p>.<p>ನ್ಯಾಯಾಲಯದ ಆದೇಶದಂತೆ ಕಳೆದ ವರ್ಷ ಮರುಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣವು ಖುಲಾಸೆಯಾಗಿರುವುದರಿಂದ ಆಯೇಷಾ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿಸುವಂತೆ ಸಿಬಿಐ ನ್ಯಾಯಾಲಯ ಆದೇಶಿಸಿತ್ತು. </p>.<p>ಬಿ–ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದ ಆಯೇಷಾ ಅವರು ಮಹಿಳಾ ವಸತಿನಿಲಯದ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಸೆಷನ್ಸ್ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಸತ್ಯಂಬಾಬು ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದಿರುವ ಕಾರಣ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಆಯೇಷಾ ಪೋಷಕರು ಮೇಲ್ಮನವಿ ಸಲ್ಲಿಸಿದ ಕಾರಣ ಸಿಬಿಐ ಮರುತನಿಖೆಗೆ ಹೈಕೋರ್ಟ್ ಆದೇಶಿಸಿತ್ತು. ಸಿಬಿಐ ನೀಡಿದ್ದ ಅಂತಿಮ ವರದಿಯು ನ್ಯಾಯಾಲಯವು ಇತ್ತೀಚೆಗೆ ಅಂಗೀಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>