<p><strong>ಕೋಲ್ಕತ್ತ: </strong>ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಗೋವುಗಳ ಕಳ್ಳಸಾಗಣೆ ಪ್ರಕರಣದ ಆರೋಪಿ ವಿನಯ್ ಮಿಶ್ರಾ ಅವರ ಒಬ್ಬ ಸಹೋದರನನ್ನು ಸಿಬಿಐ ಅಧಿಕಾರಿಗಳು ಬುಧವಾರ ವಿಚಾರಣೆಗೆ ಒಳಪಡಿಸಿದರು.</p>.<p>ವಿಚಾರಣೆಗೆ ಒಳಪಟ್ಟ ವ್ಯಕ್ತಿ ತೃಣಮೂಲ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ ಎಂದು ಸಿಬಿಐ ಮೂಲಗಳು ಹೇಳಿವೆ.</p>.<p>ಆರೋಪಿ ಮಿಶ್ರಾ ಉದ್ಯಮಿಯಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಆಪ್ತ ಎಂದು ಹೇಳಲಾಗಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಆರೋಪಿ ವಿನಯ್ ಮಿಶ್ರಾಗೆ ಸೇರಿದ ಕಚೇರಿ, ಮನೆಗಳಲ್ಲಿ ಡಿ. 31ರಂದು ಶೋಧ ಕಾರ್ಯ ನಡೆಸಿದ್ದರು. ಮಿಶ್ರಾ ತಲೆ ಮರೆಸಿಕೊಂಡಿದ್ದು, ಅವರ ವಿರುದ್ಧ ಸಿಬಿಐ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.</p>.<p>ಈ ಪ್ರಕರಣದ ಪ್ರಮುಖ ಸೂತ್ರಧಾರ ಎನ್ನಲಾದ ಇನಾಮುಲ್ ಹಕ್ ಎಂಬಾತನನ್ನು ಸಿಬಿಐ ಅಧಿಕಾರಿಗಳು ನವೆಂಬರ್ 6ರಂದು ಬಂಧಿಸಿದ್ದಾರೆ.</p>.<p>ಇತರ ಆರೋಪಿಗಳಾದ ಅನಾರುಲ್ ಎಸ್.ಕೆ, ಮೊಹಮ್ಮದ್ ಗುಲಾಂ ಮುಸ್ತಫಾಗೆ ನೆರವು ನೀಡಿದ ಆರೋಪದ ಮೇಲೆ 36ನೇ ಬಿಎಸ್ಎಫ್ ಬೆಟಾಲಿಯನ್ನ ಮಾಜಿ ಕಮಾಂಡೆಂಟ್ ಸತೀಶ್ಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಗೋವುಗಳ ಕಳ್ಳಸಾಗಣೆ ಪ್ರಕರಣದ ಆರೋಪಿ ವಿನಯ್ ಮಿಶ್ರಾ ಅವರ ಒಬ್ಬ ಸಹೋದರನನ್ನು ಸಿಬಿಐ ಅಧಿಕಾರಿಗಳು ಬುಧವಾರ ವಿಚಾರಣೆಗೆ ಒಳಪಡಿಸಿದರು.</p>.<p>ವಿಚಾರಣೆಗೆ ಒಳಪಟ್ಟ ವ್ಯಕ್ತಿ ತೃಣಮೂಲ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ ಎಂದು ಸಿಬಿಐ ಮೂಲಗಳು ಹೇಳಿವೆ.</p>.<p>ಆರೋಪಿ ಮಿಶ್ರಾ ಉದ್ಯಮಿಯಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಆಪ್ತ ಎಂದು ಹೇಳಲಾಗಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಆರೋಪಿ ವಿನಯ್ ಮಿಶ್ರಾಗೆ ಸೇರಿದ ಕಚೇರಿ, ಮನೆಗಳಲ್ಲಿ ಡಿ. 31ರಂದು ಶೋಧ ಕಾರ್ಯ ನಡೆಸಿದ್ದರು. ಮಿಶ್ರಾ ತಲೆ ಮರೆಸಿಕೊಂಡಿದ್ದು, ಅವರ ವಿರುದ್ಧ ಸಿಬಿಐ ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.</p>.<p>ಈ ಪ್ರಕರಣದ ಪ್ರಮುಖ ಸೂತ್ರಧಾರ ಎನ್ನಲಾದ ಇನಾಮುಲ್ ಹಕ್ ಎಂಬಾತನನ್ನು ಸಿಬಿಐ ಅಧಿಕಾರಿಗಳು ನವೆಂಬರ್ 6ರಂದು ಬಂಧಿಸಿದ್ದಾರೆ.</p>.<p>ಇತರ ಆರೋಪಿಗಳಾದ ಅನಾರುಲ್ ಎಸ್.ಕೆ, ಮೊಹಮ್ಮದ್ ಗುಲಾಂ ಮುಸ್ತಫಾಗೆ ನೆರವು ನೀಡಿದ ಆರೋಪದ ಮೇಲೆ 36ನೇ ಬಿಎಸ್ಎಫ್ ಬೆಟಾಲಿಯನ್ನ ಮಾಜಿ ಕಮಾಂಡೆಂಟ್ ಸತೀಶ್ಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>