ನವದಹೆಲಿ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ 5 ವರ್ಷದ ಹಿಂದೆ ದಾಖಲಾದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ನಾಳೆ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸಿಆರ್ಪಿಸಿ ಸೆಕ್ಷನ್ 160ರಡಿ ನೋಟಿಸ್ ಜಾರಿ ಮಾಡಿದ್ದು, ಫೆ. 29ಕ್ಕೂ ಮುನ್ನ ಸಿಬಿಐ ಅಧಿಕಾರಿಗಳ ಎದುರು ಹಾಜರಾಗುವಂತೆ ತಿಳಿಸಿದೆ.
ಅಖಿಲೇಶ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ 2012 ರಿಂದ 2016ರ ವರೆಗೆ ಅಕ್ರಮವಾಗಿ ಗಣಿಗಾರಿಕೆಗೆ ಪರವಾನಿಗೆ ನೀಡಿದ್ದರು. ಇದರಿಂದಾಗಿ ಅಧಿಕಾರಿಗಳು ಖನಿಜಗಳ ಕಳ್ಳತನ, ಗುತ್ತಿಗೆದಾರರು ಮತ್ತು ಚಾಲಕರಿಂದ ಹಣ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ನ ಆದೇಶದ ಮೇರೆಗೆ 2016ರಲ್ಲಿ ಸಿಬಿಐ ಏಳು ಪ್ರಾಥಮಿಕ ತನಿಖೆಯನ್ನು ನಡೆಸಿತ್ತು. ಅಲ್ಲದೆ ಅಖಿಲೇಶ್ ಅವರಿದ್ದಾಗ ಒಂದೇ ದಿನ 13 ಯೋಜನೆಗಳಿಗೆ ಮುಖ್ಯಮಂತ್ರಿ ಕಚೇರಿ ಅನುಮತಿ ನೀಡಿ,ಇ– ಟೆಂಡರ್ ನಿಯಮಗಳನ್ನು ಉಲ್ಲಂಘಿಸಿತ್ತು ಎಂದೂ ಆರೋಪ ಮಾಡಲಾಗಿದೆ.