<p><strong>ನವದಹೆಲಿ:</strong> ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ 5 ವರ್ಷದ ಹಿಂದೆ ದಾಖಲಾದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ನಾಳೆ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.</p><p>ಸಿಆರ್ಪಿಸಿ ಸೆಕ್ಷನ್ 160ರಡಿ ನೋಟಿಸ್ ಜಾರಿ ಮಾಡಿದ್ದು, ಫೆ. 29ಕ್ಕೂ ಮುನ್ನ ಸಿಬಿಐ ಅಧಿಕಾರಿಗಳ ಎದುರು ಹಾಜರಾಗುವಂತೆ ತಿಳಿಸಿದೆ.</p><p>ಅಖಿಲೇಶ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ 2012 ರಿಂದ 2016ರ ವರೆಗೆ ಅಕ್ರಮವಾಗಿ ಗಣಿಗಾರಿಕೆಗೆ ಪರವಾನಿಗೆ ನೀಡಿದ್ದರು. ಇದರಿಂದಾಗಿ ಅಧಿಕಾರಿಗಳು ಖನಿಜಗಳ ಕಳ್ಳತನ, ಗುತ್ತಿಗೆದಾರರು ಮತ್ತು ಚಾಲಕರಿಂದ ಹಣ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಪ್ರಕರಣಕ್ಕೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ನ ಆದೇಶದ ಮೇರೆಗೆ 2016ರಲ್ಲಿ ಸಿಬಿಐ ಏಳು ಪ್ರಾಥಮಿಕ ತನಿಖೆಯನ್ನು ನಡೆಸಿತ್ತು. ಅಲ್ಲದೆ ಅಖಿಲೇಶ್ ಅವರಿದ್ದಾಗ ಒಂದೇ ದಿನ 13 ಯೋಜನೆಗಳಿಗೆ ಮುಖ್ಯಮಂತ್ರಿ ಕಚೇರಿ ಅನುಮತಿ ನೀಡಿ,ಇ– ಟೆಂಡರ್ ನಿಯಮಗಳನ್ನು ಉಲ್ಲಂಘಿಸಿತ್ತು ಎಂದೂ ಆರೋಪ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದಹೆಲಿ:</strong> ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ 5 ವರ್ಷದ ಹಿಂದೆ ದಾಖಲಾದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ನಾಳೆ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.</p><p>ಸಿಆರ್ಪಿಸಿ ಸೆಕ್ಷನ್ 160ರಡಿ ನೋಟಿಸ್ ಜಾರಿ ಮಾಡಿದ್ದು, ಫೆ. 29ಕ್ಕೂ ಮುನ್ನ ಸಿಬಿಐ ಅಧಿಕಾರಿಗಳ ಎದುರು ಹಾಜರಾಗುವಂತೆ ತಿಳಿಸಿದೆ.</p><p>ಅಖಿಲೇಶ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ 2012 ರಿಂದ 2016ರ ವರೆಗೆ ಅಕ್ರಮವಾಗಿ ಗಣಿಗಾರಿಕೆಗೆ ಪರವಾನಿಗೆ ನೀಡಿದ್ದರು. ಇದರಿಂದಾಗಿ ಅಧಿಕಾರಿಗಳು ಖನಿಜಗಳ ಕಳ್ಳತನ, ಗುತ್ತಿಗೆದಾರರು ಮತ್ತು ಚಾಲಕರಿಂದ ಹಣ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಪ್ರಕರಣಕ್ಕೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ನ ಆದೇಶದ ಮೇರೆಗೆ 2016ರಲ್ಲಿ ಸಿಬಿಐ ಏಳು ಪ್ರಾಥಮಿಕ ತನಿಖೆಯನ್ನು ನಡೆಸಿತ್ತು. ಅಲ್ಲದೆ ಅಖಿಲೇಶ್ ಅವರಿದ್ದಾಗ ಒಂದೇ ದಿನ 13 ಯೋಜನೆಗಳಿಗೆ ಮುಖ್ಯಮಂತ್ರಿ ಕಚೇರಿ ಅನುಮತಿ ನೀಡಿ,ಇ– ಟೆಂಡರ್ ನಿಯಮಗಳನ್ನು ಉಲ್ಲಂಘಿಸಿತ್ತು ಎಂದೂ ಆರೋಪ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>