<p><strong>ನವದೆಹಲಿ</strong>: ಮಧ್ಯಂತರ ಜಾಮೀನಿನ ಅವಧಿ ವಿಸ್ತರಿಸುವಂತೆ ಜೈದೀಪ್ ಸೆಂಗರ್ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಗೆ ಸಿಬಿಐ ಮಂಗಳವಾರ ವಿರೋಧ ವ್ಯಕ್ತಪಡಿಸಿದೆ.</p>.<p>ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಸಹೋದರ ಜೈದೀಪ್ ಸೆಂಗರ್ಗೆ ನ್ಯಾಯಾಲಯವು 10 ವರ್ಷ ಶಿಕ್ಷೆ ವಿಧಿಸಿದೆ.</p>.<p>ಬಾಯಿ ಕ್ಯಾನ್ಸರ್ನಿಂದ ಬಳಲುತ್ತಿರುವುದರಿಂದ ಮಧ್ಯಂತರ ಜಾಮೀನಿನ ಅವಧಿಯನ್ನು ಮೂರು ತಿಂಗಳು ವಿಸ್ತರಿಸುವಂತೆ ಕೋರಿ ಜೈದೀಪ್ ಸೆಂಗರ್ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಮಧ್ಯಂತರ ಜಾಮೀನಿನ ಅವಧಿ ವಿಸ್ತರಣೆಗೆ ಇದು ಸೂಕ್ತವಾದ ಪ್ರಕರಣವಲ್ಲ. ಅರ್ಜಿಗೆ ಪೂರಕವಾಗಿ ಸಲ್ಲಿಸಿರುವ ವೈದ್ಯಕೀಯ ಶಿಫಾರಸು ಪತ್ರ ನಿಜವಲ್ಲ. ಕಟ್ಟುಕತೆ. ಜಾಮೀನು ಅವಧಿಯ ವಿಸ್ತರಣೆ ಬೇಕಿದ್ದರೆ, ಅವರು ‘ಸಮಯದೊಳಗೆ’ ನ್ಯಾಯಾಲಯದ ಮುಂದೆ ಬರಬೇಕಾಗಿತ್ತು’ ಎಂದು ಸಿಬಿಐ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.</p>.<p>ಆದಾಗ್ಯೂ, ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರು ಜೈದೀಪ್ ಸೆಂಗರ್ನ ಮಧ್ಯಂತರ ಜಾಮೀನು ಅವಧಿಯನ್ನು ಫೆ. 20ರವರೆಗೆ ವಿಸ್ತರಿಸಿದರು.</p>.<p>ಸೆಂಗರ್ನ ಆರೋಗ್ಯದ ಕುರಿತಂತೆ ವಿವರವಾದ ಪರಿಶೀಲನಾ ವರದಿ ಸಲ್ಲಿಸುವಂತೆ ಶರ್ಮಾ ಅವರು ಸಿಬಿಐ ವಕೀಲರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಧ್ಯಂತರ ಜಾಮೀನಿನ ಅವಧಿ ವಿಸ್ತರಿಸುವಂತೆ ಜೈದೀಪ್ ಸೆಂಗರ್ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಗೆ ಸಿಬಿಐ ಮಂಗಳವಾರ ವಿರೋಧ ವ್ಯಕ್ತಪಡಿಸಿದೆ.</p>.<p>ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಸಹೋದರ ಜೈದೀಪ್ ಸೆಂಗರ್ಗೆ ನ್ಯಾಯಾಲಯವು 10 ವರ್ಷ ಶಿಕ್ಷೆ ವಿಧಿಸಿದೆ.</p>.<p>ಬಾಯಿ ಕ್ಯಾನ್ಸರ್ನಿಂದ ಬಳಲುತ್ತಿರುವುದರಿಂದ ಮಧ್ಯಂತರ ಜಾಮೀನಿನ ಅವಧಿಯನ್ನು ಮೂರು ತಿಂಗಳು ವಿಸ್ತರಿಸುವಂತೆ ಕೋರಿ ಜೈದೀಪ್ ಸೆಂಗರ್ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಮಧ್ಯಂತರ ಜಾಮೀನಿನ ಅವಧಿ ವಿಸ್ತರಣೆಗೆ ಇದು ಸೂಕ್ತವಾದ ಪ್ರಕರಣವಲ್ಲ. ಅರ್ಜಿಗೆ ಪೂರಕವಾಗಿ ಸಲ್ಲಿಸಿರುವ ವೈದ್ಯಕೀಯ ಶಿಫಾರಸು ಪತ್ರ ನಿಜವಲ್ಲ. ಕಟ್ಟುಕತೆ. ಜಾಮೀನು ಅವಧಿಯ ವಿಸ್ತರಣೆ ಬೇಕಿದ್ದರೆ, ಅವರು ‘ಸಮಯದೊಳಗೆ’ ನ್ಯಾಯಾಲಯದ ಮುಂದೆ ಬರಬೇಕಾಗಿತ್ತು’ ಎಂದು ಸಿಬಿಐ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.</p>.<p>ಆದಾಗ್ಯೂ, ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರು ಜೈದೀಪ್ ಸೆಂಗರ್ನ ಮಧ್ಯಂತರ ಜಾಮೀನು ಅವಧಿಯನ್ನು ಫೆ. 20ರವರೆಗೆ ವಿಸ್ತರಿಸಿದರು.</p>.<p>ಸೆಂಗರ್ನ ಆರೋಗ್ಯದ ಕುರಿತಂತೆ ವಿವರವಾದ ಪರಿಶೀಲನಾ ವರದಿ ಸಲ್ಲಿಸುವಂತೆ ಶರ್ಮಾ ಅವರು ಸಿಬಿಐ ವಕೀಲರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>