<p><strong>ನವದೆಹಲಿ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರದ ಮನವಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ತನಿಖಾ ಸಂಸ್ಥೆಯು ಹೊಸದಾಗಿ ಎಫ್ಐಆರ್ ದಾಖಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ನಿಯಮದಂತೆ, ರಾಜ್ಯ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನೇ ಆಧಾರವಾಗಿಟ್ಟುಕೊಂಡು ಸಿಬಿಐ ಮರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದೆ. ತನಿಖೆಯ ಅಂತ್ಯದಲ್ಲಿ ಸಂಸ್ಥೆಯು ನ್ಯಾಯಾಲಯಕ್ಕೆ ಆರೋಪಪಟ್ಟಿ ಅಥವಾ ಪ್ರಕರಣದ ಅಂತಿಮ ವರದಿ ಸಲ್ಲಿಕೆ ಮಾಡಲಿದೆ.</p><p>ಈಗಾಗಲೇ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳು ಟೋಲ್ ಪ್ಲಾಜಾವೊಂದರಲ್ಲಿ ಯುಪಿಐ ಮೂಲಕ ಹಣ ಪಾವತಿಸಿದ್ದರು. ಈ ಡಿಜಿಟಲ್ ಪಾವತಿಯು ತನಿಖಾಧಿಕಾರಿಗಳಿಗೆ ಮೊಬೈಲ್ ಸಂಖ್ಯೆ ಮತ್ತು ಶಂಕಿತರ ಗುರುತನ್ನು ಪತ್ತೆಹಚ್ಚಲು ನೆರವಾಯಿತು. ಸದ್ಯ ಕೊಲೆಯಲ್ಲಿ ಕನಿಷ್ಠ ಎಂಟು ಜನರು ಭಾಗಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. </p><p>ಬಂಧಿತರ ಮೇಲೆ ಭಾರತೀಯ ನ್ಯಾಯ ಸಂಹಿತೆಯ (BNS) ಅಡಿ ಹತ್ಯೆ, ಅಕ್ರಮ ಶಸ್ತ್ರಾಸ್ತ್ರಗಳ ಬಳಕೆ, ಕ್ರಿಮಿನಲ್ ಪಿತೂರಿ ಹಾಗೂ ಸಾಕ್ಷ್ಯ ನಾಶದ ಆರೋಪಗಳನ್ನು ಹೊರಿಸಲಾಗಿದೆ. ಈ ಕೊಲೆಯಲ್ಲಿ ಒಟ್ಟು ಎಂಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಹತ್ಯೆಗೂ ಮುನ್ನ ಆರೋಪಿಗಳು ರಥ್ ಅವರ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೇ 6ರಂದು ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ಗ್ರಾಮ್ ಪ್ರದೇಶದ ಜೆಸ್ಸೋರ್ ರಸ್ತೆಯಲ್ಲಿ ಚಂದ್ರನಾಥ್ ರಥ್ ಹತ್ಯೆ ನಡೆದಿತ್ತು. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ನಂತರ ನಡೆದ ಈ ಘಟನೆಯನ್ನು ಬಿಜೆಪಿ ನಾಯಕರು ಯೋಜಿತ ಕೃತ್ಯ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರದ ಮನವಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ತನಿಖಾ ಸಂಸ್ಥೆಯು ಹೊಸದಾಗಿ ಎಫ್ಐಆರ್ ದಾಖಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p><p>ನಿಯಮದಂತೆ, ರಾಜ್ಯ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನೇ ಆಧಾರವಾಗಿಟ್ಟುಕೊಂಡು ಸಿಬಿಐ ಮರು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದೆ. ತನಿಖೆಯ ಅಂತ್ಯದಲ್ಲಿ ಸಂಸ್ಥೆಯು ನ್ಯಾಯಾಲಯಕ್ಕೆ ಆರೋಪಪಟ್ಟಿ ಅಥವಾ ಪ್ರಕರಣದ ಅಂತಿಮ ವರದಿ ಸಲ್ಲಿಕೆ ಮಾಡಲಿದೆ.</p><p>ಈಗಾಗಲೇ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳು ಟೋಲ್ ಪ್ಲಾಜಾವೊಂದರಲ್ಲಿ ಯುಪಿಐ ಮೂಲಕ ಹಣ ಪಾವತಿಸಿದ್ದರು. ಈ ಡಿಜಿಟಲ್ ಪಾವತಿಯು ತನಿಖಾಧಿಕಾರಿಗಳಿಗೆ ಮೊಬೈಲ್ ಸಂಖ್ಯೆ ಮತ್ತು ಶಂಕಿತರ ಗುರುತನ್ನು ಪತ್ತೆಹಚ್ಚಲು ನೆರವಾಯಿತು. ಸದ್ಯ ಕೊಲೆಯಲ್ಲಿ ಕನಿಷ್ಠ ಎಂಟು ಜನರು ಭಾಗಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. </p><p>ಬಂಧಿತರ ಮೇಲೆ ಭಾರತೀಯ ನ್ಯಾಯ ಸಂಹಿತೆಯ (BNS) ಅಡಿ ಹತ್ಯೆ, ಅಕ್ರಮ ಶಸ್ತ್ರಾಸ್ತ್ರಗಳ ಬಳಕೆ, ಕ್ರಿಮಿನಲ್ ಪಿತೂರಿ ಹಾಗೂ ಸಾಕ್ಷ್ಯ ನಾಶದ ಆರೋಪಗಳನ್ನು ಹೊರಿಸಲಾಗಿದೆ. ಈ ಕೊಲೆಯಲ್ಲಿ ಒಟ್ಟು ಎಂಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಹತ್ಯೆಗೂ ಮುನ್ನ ಆರೋಪಿಗಳು ರಥ್ ಅವರ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೇ 6ರಂದು ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ಗ್ರಾಮ್ ಪ್ರದೇಶದ ಜೆಸ್ಸೋರ್ ರಸ್ತೆಯಲ್ಲಿ ಚಂದ್ರನಾಥ್ ರಥ್ ಹತ್ಯೆ ನಡೆದಿತ್ತು. ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿತ್ತು. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ನಂತರ ನಡೆದ ಈ ಘಟನೆಯನ್ನು ಬಿಜೆಪಿ ನಾಯಕರು ಯೋಜಿತ ಕೃತ್ಯ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>