<p><strong>ಚೆನ್ನೈ:</strong> ತಮಿಳುನಾಡಿನ ಆರೋಗ್ಯ ಸಚಿವ ಸಿ.ವಿಜಯ ಭಾಸ್ಕರ್, ಡಿಜಿಪಿ ಟಿ.ಕೆ.ರಾಜೇಂದ್ರನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ಮನೆಗಳ ಮೇಲೆ ಸಿಬಿಐ ಬುಧವಾರ ದಾಳಿ ನಡೆಸಿದೆ.</p>.<p>ಬಹುಕೋಟಿ ಗುಟ್ಕಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ.</p>.<p>ಸಚಿವರ ಮನೆ, ಕಚೇರಿ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ನಿವಾಸ, ಕಚೇರಿ ಸೇರಿದಂತೆ 32 ಕಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡು ಪರಿಶೀಲಿಸಲಾಗುತ್ತಿದೆ ಎಂದು ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ.</p>.<p>2016 ರಲ್ಲಿ ತಂಬಾಕು ವ್ಯಾಪಾರಿ ಮಾದವ್ ರಾವ್ ಅವರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮಾದವ್ ರಾವ್ ಡೈರಿಯಲ್ಲಿ ಅಕ್ರಮವಾಗಿ ಗುಟ್ಕಾ ಮತ್ತು ತಂಬಾಕು ಮಾರಾಟದ ಬಗ್ಗೆ ಮಾಹಿತಿ ದೊರೆತಿತ್ತು. ಅದರಲ್ಲಿ ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ₹ 40 ಕೋಟಿಗೂ ಹೆಚ್ಚು ಹಣ ನೀಡಿದ್ದರ ಬಗ್ಗೆ ನಮೂದಿಸಲಾಗಿತ್ತು.</p>.<p>ಬಹುಕೋಟಿ ಗುಟ್ಕಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಕಳೆದ ಏಪ್ರಿಲ್ನಲ್ಲಿ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.</p>.<p>2013ರಲ್ಲಿ ತಂಬಾಕು ಮತ್ತು ಗುಟ್ಕಾವನ್ನು ತಮಿಳುನಾಡಿನಲ್ಲಿ ನಿಷೇದಿಸಲಾಗಿದೆ. ಆದರೂ ಅಕ್ರಮವಾಗಿ ಗುಟ್ಕಾ ಮಾರಾಟವನ್ನು ಮಾಡಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನ ಆರೋಗ್ಯ ಸಚಿವ ಸಿ.ವಿಜಯ ಭಾಸ್ಕರ್, ಡಿಜಿಪಿ ಟಿ.ಕೆ.ರಾಜೇಂದ್ರನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ಮನೆಗಳ ಮೇಲೆ ಸಿಬಿಐ ಬುಧವಾರ ದಾಳಿ ನಡೆಸಿದೆ.</p>.<p>ಬಹುಕೋಟಿ ಗುಟ್ಕಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ.</p>.<p>ಸಚಿವರ ಮನೆ, ಕಚೇರಿ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ನಿವಾಸ, ಕಚೇರಿ ಸೇರಿದಂತೆ 32 ಕಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡು ಪರಿಶೀಲಿಸಲಾಗುತ್ತಿದೆ ಎಂದು ತಮಿಳುನಾಡು ಮಾಧ್ಯಮಗಳು ವರದಿ ಮಾಡಿವೆ.</p>.<p>2016 ರಲ್ಲಿ ತಂಬಾಕು ವ್ಯಾಪಾರಿ ಮಾದವ್ ರಾವ್ ಅವರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮಾದವ್ ರಾವ್ ಡೈರಿಯಲ್ಲಿ ಅಕ್ರಮವಾಗಿ ಗುಟ್ಕಾ ಮತ್ತು ತಂಬಾಕು ಮಾರಾಟದ ಬಗ್ಗೆ ಮಾಹಿತಿ ದೊರೆತಿತ್ತು. ಅದರಲ್ಲಿ ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ₹ 40 ಕೋಟಿಗೂ ಹೆಚ್ಚು ಹಣ ನೀಡಿದ್ದರ ಬಗ್ಗೆ ನಮೂದಿಸಲಾಗಿತ್ತು.</p>.<p>ಬಹುಕೋಟಿ ಗುಟ್ಕಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಕಳೆದ ಏಪ್ರಿಲ್ನಲ್ಲಿ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು.</p>.<p>2013ರಲ್ಲಿ ತಂಬಾಕು ಮತ್ತು ಗುಟ್ಕಾವನ್ನು ತಮಿಳುನಾಡಿನಲ್ಲಿ ನಿಷೇದಿಸಲಾಗಿದೆ. ಆದರೂ ಅಕ್ರಮವಾಗಿ ಗುಟ್ಕಾ ಮಾರಾಟವನ್ನು ಮಾಡಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>