<p><strong>ನವದೆಹಲಿ</strong>: ಕೇಂದ್ರ ಸರ್ಕಾರದ ಅತಿಯಾಗಿ ಒತ್ತಡ ಹೇರಿದ್ದರಿಂದಲೇ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.</p>.<p>ಇದಕ್ಕೆ ತಿರುಗೇಟು ನೀಡಿರುವ ಸಿಬಿಐ, ಸಿಸೋಡಿಯಾ ಆರೋಪ ಚೇಷ್ಟೆಯಿಂದ ಕೂಡಿದ್ದು ತಪ್ಪುದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ತಿಳಿಸಿದೆ.</p>.<p>‘ಮನೀಶ್ ಸಿಸೋಡಿಯಾ ಅವರ ಹೇಳಿಕೆಯು ಚೇಷ್ಟೆಯಿಂದ ಕೂಡಿದ್ದು ತಪ್ಪುದಾರಿಗೆಳೆಯುವ ಯತ್ನವಾಗಿದೆ. ಸಜ್ಜನ ಅಧಿಕಾರಿ ದಿವಂಗತ ಜಿತೇಂದ್ರ ಕುಮಾರ್ ಅವರು ಸಿಸೋಡಿಯಾ ಪ್ರಕರಣದ ತನಿಖಾ ಪ್ರಕ್ರಿಯೆಯೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ’ ಎಂದು ಸಿಬಿಐ ಸ್ಪಷ್ಟಪಡಿಸಿದೆ.</p>.<p>‘ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವಂತೆ ಸಿಬಿಐ ಜಿತೇಂದ್ರ ಕುಮಾರ್ ಮೇಲೆ ಒತ್ತಡ ಹೇರಲಾಗಿತ್ತು. ಇದರಿಂದಾಗಿಯೇ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸಿಸೋಡಿಯಾ ಹೇಳಿಕೆ ನೀಡಿದ್ದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/cbi-bjp-aap-manish-sisodia-central-govt-indian-politics-969336.html" target="_blank"><strong>ಬಂಧಿಸುವುದಾದರೆ ನನ್ನನ್ನು ಬಂಧಿಸಿ, ಅಧಿಕಾರಿಗಳನ್ನು ಸಾವಿಗೆ ದೂಡಬೇಡಿ: ಸಿಸೋಡಿಯಾ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರದ ಅತಿಯಾಗಿ ಒತ್ತಡ ಹೇರಿದ್ದರಿಂದಲೇ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.</p>.<p>ಇದಕ್ಕೆ ತಿರುಗೇಟು ನೀಡಿರುವ ಸಿಬಿಐ, ಸಿಸೋಡಿಯಾ ಆರೋಪ ಚೇಷ್ಟೆಯಿಂದ ಕೂಡಿದ್ದು ತಪ್ಪುದಾರಿಗೆ ಎಳೆಯುವ ಪ್ರಯತ್ನವಾಗಿದೆ ಎಂದು ತಿಳಿಸಿದೆ.</p>.<p>‘ಮನೀಶ್ ಸಿಸೋಡಿಯಾ ಅವರ ಹೇಳಿಕೆಯು ಚೇಷ್ಟೆಯಿಂದ ಕೂಡಿದ್ದು ತಪ್ಪುದಾರಿಗೆಳೆಯುವ ಯತ್ನವಾಗಿದೆ. ಸಜ್ಜನ ಅಧಿಕಾರಿ ದಿವಂಗತ ಜಿತೇಂದ್ರ ಕುಮಾರ್ ಅವರು ಸಿಸೋಡಿಯಾ ಪ್ರಕರಣದ ತನಿಖಾ ಪ್ರಕ್ರಿಯೆಯೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ’ ಎಂದು ಸಿಬಿಐ ಸ್ಪಷ್ಟಪಡಿಸಿದೆ.</p>.<p>‘ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವಂತೆ ಸಿಬಿಐ ಜಿತೇಂದ್ರ ಕುಮಾರ್ ಮೇಲೆ ಒತ್ತಡ ಹೇರಲಾಗಿತ್ತು. ಇದರಿಂದಾಗಿಯೇ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸಿಸೋಡಿಯಾ ಹೇಳಿಕೆ ನೀಡಿದ್ದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/india-news/cbi-bjp-aap-manish-sisodia-central-govt-indian-politics-969336.html" target="_blank"><strong>ಬಂಧಿಸುವುದಾದರೆ ನನ್ನನ್ನು ಬಂಧಿಸಿ, ಅಧಿಕಾರಿಗಳನ್ನು ಸಾವಿಗೆ ದೂಡಬೇಡಿ: ಸಿಸೋಡಿಯಾ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>