<p><strong>ಮುಂಬೈ (ಪಿಟಿಐ):</strong> ಮಾದಕವಸ್ತು ನಿಯಂತ್ರಣ ದಳದ (ಎನ್ಸಿಬಿ) ಮುಂಬೈ ವಲಯದ ಮಾಜಿ ಮುಖ್ಯಸ್ಥ ಸಮೀರ್ ವಾಂಖೆಡೆಗೆ ಬಂಧನದಿಂದ ರಕ್ಷಣೆ ನೀಡುವ ಹಿಂದಿನ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಬಾಂಬ್ ಹೈಕೋರ್ಟ್ಗೆ ಸಿಬಿಐ ಮನವಿ ಮಾಡಿದೆ. </p>.<p>ಐಷಾರಾಮಿ ಹಡಗಿನಿಂದ ಮಾದಕವಸ್ತುಗಳನ್ನು ವಶಪಡಿಸಿಕೊಂಡ ನಂತರ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಬಂಧನಕ್ಕೆ ಸಂಬಂಧಿಸಿದಂತೆ ಸಮೀರ್ ವಿರುದ್ಧ ಸುಲಿಗೆ ಮತ್ತು ಲಂಚದ ಆರೋಪ ಪ್ರಕರಣ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.</p>.<p>ಡ್ರಗ್ಸ್ ತೆಗೆದುಕೊಂಡ ಪ್ರಕರಣದಿಂದ ಆರ್ಯನ್ ಖಾನ್ ಅವರನ್ನು ರಕ್ಷಿಸಲು ₹ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಿಬಿಐ ಕಳೆದ ತಿಂಗಳು ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಎಫ್ಐಆರ್ ರದ್ದುಗೊಳಿಸುವಂತೆ ಮತ್ತು ಬಂಧನದಂಥ ಒತ್ತಾಯದ ಕ್ರಮಗಳನ್ನು ತೆಗೆದುಕೊಳ್ಳದಂತೆ ಮಧ್ಯಂತರ ರಕ್ಷಣೆ ಕೋರಿ ವಾಂಖೆಡೆ ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಹೈಕೋರ್ಟ್ ರಜಾಕಾಲದ ಪೀಠ ಕಳೆದ ತಿಂಗಳು ವಾಂಖೆಡೆಗೆ ಮಧ್ಯಂತರ ಪರಿಹಾರ ನೀಡಿ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿತ್ತು.</p>.<p>ವಾಂಖೆಡೆ ಅವರ ಅರ್ಜಿಗೆ ಪ್ರತಿಕ್ರಿಯೆಯಾಗಿ ಸಿಬಿಐ ಜೂನ್ 2 ರಂದು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಮಧ್ಯಂತರ ಪರಿಹಾರ ನೀಡಿರುವುದರಿಂದ ತನಿಖೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಮಧ್ಯಂತರ ಆದೇಶ ಹಿಂತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿತ್ತು.</p>.<p>ಪ್ರಕರಣದ ತನಿಖೆ ಆರಂಭಿಕ ಹಂತದಲ್ಲಿದ್ದು, ನಿಷ್ಪಕ್ಷಪಾತ ಮತ್ತು ವೃತ್ತಿಪರ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದು ಸಿಬಿಐ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ಮಾದಕವಸ್ತು ನಿಯಂತ್ರಣ ದಳದ (ಎನ್ಸಿಬಿ) ಮುಂಬೈ ವಲಯದ ಮಾಜಿ ಮುಖ್ಯಸ್ಥ ಸಮೀರ್ ವಾಂಖೆಡೆಗೆ ಬಂಧನದಿಂದ ರಕ್ಷಣೆ ನೀಡುವ ಹಿಂದಿನ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಬಾಂಬ್ ಹೈಕೋರ್ಟ್ಗೆ ಸಿಬಿಐ ಮನವಿ ಮಾಡಿದೆ. </p>.<p>ಐಷಾರಾಮಿ ಹಡಗಿನಿಂದ ಮಾದಕವಸ್ತುಗಳನ್ನು ವಶಪಡಿಸಿಕೊಂಡ ನಂತರ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಬಂಧನಕ್ಕೆ ಸಂಬಂಧಿಸಿದಂತೆ ಸಮೀರ್ ವಿರುದ್ಧ ಸುಲಿಗೆ ಮತ್ತು ಲಂಚದ ಆರೋಪ ಪ್ರಕರಣ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.</p>.<p>ಡ್ರಗ್ಸ್ ತೆಗೆದುಕೊಂಡ ಪ್ರಕರಣದಿಂದ ಆರ್ಯನ್ ಖಾನ್ ಅವರನ್ನು ರಕ್ಷಿಸಲು ₹ 25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಸಿಬಿಐ ಕಳೆದ ತಿಂಗಳು ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಎಫ್ಐಆರ್ ರದ್ದುಗೊಳಿಸುವಂತೆ ಮತ್ತು ಬಂಧನದಂಥ ಒತ್ತಾಯದ ಕ್ರಮಗಳನ್ನು ತೆಗೆದುಕೊಳ್ಳದಂತೆ ಮಧ್ಯಂತರ ರಕ್ಷಣೆ ಕೋರಿ ವಾಂಖೆಡೆ ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಹೈಕೋರ್ಟ್ ರಜಾಕಾಲದ ಪೀಠ ಕಳೆದ ತಿಂಗಳು ವಾಂಖೆಡೆಗೆ ಮಧ್ಯಂತರ ಪರಿಹಾರ ನೀಡಿ, ತನಿಖೆಗೆ ಸಹಕರಿಸುವಂತೆ ನಿರ್ದೇಶನ ನೀಡಿತ್ತು.</p>.<p>ವಾಂಖೆಡೆ ಅವರ ಅರ್ಜಿಗೆ ಪ್ರತಿಕ್ರಿಯೆಯಾಗಿ ಸಿಬಿಐ ಜೂನ್ 2 ರಂದು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಮಧ್ಯಂತರ ಪರಿಹಾರ ನೀಡಿರುವುದರಿಂದ ತನಿಖೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಮಧ್ಯಂತರ ಆದೇಶ ಹಿಂತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿತ್ತು.</p>.<p>ಪ್ರಕರಣದ ತನಿಖೆ ಆರಂಭಿಕ ಹಂತದಲ್ಲಿದ್ದು, ನಿಷ್ಪಕ್ಷಪಾತ ಮತ್ತು ವೃತ್ತಿಪರ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದು ಸಿಬಿಐ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>