<p><strong>ನವದೆಹಲಿ:</strong> ಐ ಮಾನಿಟರಿ ಅಡ್ವೈಸರಿ (ಐಎಂಎ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಆರು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಸಿಬಿಐ ಮನವಿ ಮಾಡಿದೆ.</p>.<p>ಸಿಬಿಐ ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. 1998ನೇ ತಂಡದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು 2008ನೇ ತಂಡದ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಅನುಮತಿ ಕೋರಲಾಗಿದೆ.</p>.<p>ಹಗರಣ ಬೆಳಕಿಗೆ ಬಂದಾಗ ನಿಂಬಾಳ್ಕರ್ ಆರ್ಥಿಕ ಅಪರಾಧಗಳ ವಿಭಾಗದ ಇನ್ಸ್ಪೆಕ್ಟರ್ ಜನರಲ್ (ಐಜಿ) ಆಗಿದ್ದರು. ಹಿಲೋರಿ ಅವರು ಬೆಂಗಳೂರು ಪೂರ್ವ ವಲಯದ ಡಿಸಿಪಿ ಆಗಿದ್ದರು.</p>.<p>ಈ ಐಪಿಎಸ್ ಅಧಿಕಾರಿಗಳಲ್ಲದೇ, ಈ ಹಿಂದೆ ಸಿಐಡಿ ಡಿವೈಎಸ್ಪಿ ಆಗಿದ್ದ ಇ.ಬಿ.ಶ್ರೀಧರ, ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಎಂ. ರಮೇಶ್, ಸಬ್ ಇನ್ಸ್ಪೆಕ್ಟರ್ ಪಿ.ಗೌರಿಶಂಕರ್, ಆಗಿನ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ವಿರುದ್ಧ ಕ್ರಮ ಜರುಗಿಸಲು ಅನುಮತಿ ಕೋರಲಾಗಿದೆ.</p>.<p>ಸಿಐಡಿ ಆರ್ಥಿಕ ಅಪರಾಧ ವಿಭಾಗ ಐಎಂಎ ಸಮೂಹ ಚಟುವಟಿಕೆಗಳ ಬಗ್ಗೆ ತನಿಖೆ ಕೈಗೊಂಡಾಗ ಶ್ರೀಧರ್ ತನಿಖಾಧಿಕಾರಿಯಾಗಿದ್ದರು ಮತ್ತು ಹೇಮಂತ್ ನಿಂಬಾಳ್ಕರ್ ಉಸ್ತುವಾರಿ ಅಧಿಕಾರಿಯಾಗಿದ್ದರು. ‘ಕರ್ನಾಟಕ ಸರ್ಕಾರ ಅನುಮೋದನೆ ನೀಡುತ್ತಿದ್ದಂತೆ ಈ ಆರು ಜನರ ವಿರುದ್ಧವೂ ಪೂರಕ ದೋಷಾರೋಪ ಪಟ್ಟಿ ದಾಖಲಿಸಲಾಗುವುದು’ ಎಂದು ಸಿಬಿಐ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಐ ಮಾನಿಟರಿ ಅಡ್ವೈಸರಿ (ಐಎಂಎ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಆರು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಸಿಬಿಐ ಮನವಿ ಮಾಡಿದೆ.</p>.<p>ಸಿಬಿಐ ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. 1998ನೇ ತಂಡದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು 2008ನೇ ತಂಡದ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಅನುಮತಿ ಕೋರಲಾಗಿದೆ.</p>.<p>ಹಗರಣ ಬೆಳಕಿಗೆ ಬಂದಾಗ ನಿಂಬಾಳ್ಕರ್ ಆರ್ಥಿಕ ಅಪರಾಧಗಳ ವಿಭಾಗದ ಇನ್ಸ್ಪೆಕ್ಟರ್ ಜನರಲ್ (ಐಜಿ) ಆಗಿದ್ದರು. ಹಿಲೋರಿ ಅವರು ಬೆಂಗಳೂರು ಪೂರ್ವ ವಲಯದ ಡಿಸಿಪಿ ಆಗಿದ್ದರು.</p>.<p>ಈ ಐಪಿಎಸ್ ಅಧಿಕಾರಿಗಳಲ್ಲದೇ, ಈ ಹಿಂದೆ ಸಿಐಡಿ ಡಿವೈಎಸ್ಪಿ ಆಗಿದ್ದ ಇ.ಬಿ.ಶ್ರೀಧರ, ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಎಂ. ರಮೇಶ್, ಸಬ್ ಇನ್ಸ್ಪೆಕ್ಟರ್ ಪಿ.ಗೌರಿಶಂಕರ್, ಆಗಿನ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ವಿರುದ್ಧ ಕ್ರಮ ಜರುಗಿಸಲು ಅನುಮತಿ ಕೋರಲಾಗಿದೆ.</p>.<p>ಸಿಐಡಿ ಆರ್ಥಿಕ ಅಪರಾಧ ವಿಭಾಗ ಐಎಂಎ ಸಮೂಹ ಚಟುವಟಿಕೆಗಳ ಬಗ್ಗೆ ತನಿಖೆ ಕೈಗೊಂಡಾಗ ಶ್ರೀಧರ್ ತನಿಖಾಧಿಕಾರಿಯಾಗಿದ್ದರು ಮತ್ತು ಹೇಮಂತ್ ನಿಂಬಾಳ್ಕರ್ ಉಸ್ತುವಾರಿ ಅಧಿಕಾರಿಯಾಗಿದ್ದರು. ‘ಕರ್ನಾಟಕ ಸರ್ಕಾರ ಅನುಮೋದನೆ ನೀಡುತ್ತಿದ್ದಂತೆ ಈ ಆರು ಜನರ ವಿರುದ್ಧವೂ ಪೂರಕ ದೋಷಾರೋಪ ಪಟ್ಟಿ ದಾಖಲಿಸಲಾಗುವುದು’ ಎಂದು ಸಿಬಿಐ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>