‘ಸುಶಾಂತ್ ಸಾವು, ಕೊಲೆಯಲ್ಲ, ಆತ್ಮಹತ್ಯೆ ಎಂದು ಹೇಳಲಾಗುತ್ತಿದೆಯಲ್ಲಾ‘ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಬಗ್ಗೆ ನಮ್ಮ ಸರ್ಕಾರಕ್ಕೆ ಅಧಿಕೃತವಾದ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಾಗಾಗಿ, ಈ ಪ್ರಶ್ನೆಗೆ ಸೂಕ್ತ ಉತ್ತರ ಹೇಳುವುದು ಅಸಾಧ್ಯ‘ ಎಂದಿದ್ದಾರೆ. ‘ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಶೀಘ್ರದಲ್ಲೇ ಸಾರ್ವಜನಿಕರ ಎದರು ತನಿಖೆಯ ವಿವರವನ್ನು ನೀಡಬೇಕೆಂದು ನಮ್ಮ ಸರ್ಕಾರ ಬಯಸುತ್ತದೆ‘ ಎಂದು ಪುನರುಚ್ಚರಿಸಿದರು.