ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ಹಗರಣ ಪ್ರಕರಣ; ಕೇಜ್ರಿವಾಲ್‌ಗೆ ಸಮನ್ಸ್‌ ನೀಡಿದ ಸಿಬಿಐ

Last Updated 14 ಏಪ್ರಿಲ್ 2023, 12:52 IST
ಅಕ್ಷರ ಗಾತ್ರ

ದೆಹಲಿ : ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿಮಾಡಿದೆ. ಏಪ್ರಿಲ್‌ 16 ಭಾನುವಾರ ಸರಿಯಾಗಿ 11 ಗಂಟೆಗೆ ಸಿಬಿಐನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದೆಹಲಿ ಮಾಜಿ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಇದೀಗ ಈ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡುವ ಸಲುವಾಗಿ ದೆಹಲಿ ಸರ್ಕಾರ ‘ಅಬಕಾರಿ ನೀತಿ 2020–22‘ ಅನ್ನು ಜಾರಿಗೊಳಿಸಿದ್ದು, ಇದರಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು.ಈ ಆರೋಪವನ್ನು ಆಪ್‌ ಸರ್ಕಾರ ಬಲವಾಗಿ ವಿರೋಧಿಸಿತ್ತು.ನಂತರ ಈ ನೀತಿಯನ್ನು ರದ್ದುಗೊಳಿಸಲಾಗಿತ್ತು. ನಮ್ಮ ಸರ್ಕಾರದ ಅಭಿವೃದ್ದಿ ಕೆಲಸಗಳನ್ನು ಕಂಡು ತಾಳಲಾರದೆ ಕೇಂದ್ರ ಬಿಜೆಪಿ ಸರ್ಕಾರ ಆಪ್‌ ನಾಯಕರನ್ನು ಜೈಲಿಗಟ್ಟಿದೆ ಎಂದು ಆಪ್‌ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT