<p><strong>ನವದೆಹಲಿ</strong> : ಯಮುನಾ ಎಕ್ಸ್ಪ್ರೆಸ್ ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (ಯೇಡಾ) ಭೂಹಗರಣದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದ್ದು, ಪ್ರಾಧಿಕಾರದ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಪಿ.ಸಿ. ಗುಪ್ತಾ ಮತ್ತು ಇತರ 20 ಮಂದಿ ವಿರುದ್ಧ ಬುಧವಾರ ಎಫ್ಆರ್ಐ ದಾಖಲಿಸಿದೆ.</p>.<p>ಗ್ರೇಟರ್ ನೋಯ್ಡಾವನ್ನು ಆಗ್ರಾದೊಂದಿಗೆ ಸಂಪರ್ಕಿಸುವ 165 ಕಿ.ಮೀ. ಉದ್ದದ ಯುಮನಾ ಎಕ್ಸ್ಪ್ರೆಸ್ ಹೆದ್ದಾರಿ ಕಾಮಗಾರಿಗಾಗಿ ಮಥುರಾ ಬಳಿಯ 7 ಹಳ್ಳಿಗಳ ವ್ಯಾಪ್ತಿಯಲ್ಲಿ 57.15 ಹೆಕ್ಟೇರ್ ಖರೀದಿಗೆ ಪ್ರಾಧಿಕಾರ ₹ 85.49 ಕೋಟಿಗೆ ಒದಗಿಸಿತ್ತು. ಆದರೆ, ಗುಪ್ತಾ ಅವರು ತಮ್ಮ ಸಂಬಂಧಿಕರೊಂದಿಗೆ ಕ್ರಮಿನಲ್ ಸಂಚು ಹೂಡಿ, ಈ ಜಮೀನನ್ನು ಖರೀದಿಸಿ, ಪ್ರಾಧಿಕಾರಕ್ಕೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಇದರಿಂದ ಬೊಕ್ಕಸಕ್ಕೆ ₹ 126 ಕೋಟಿ ನಷ್ಟವುಂಟಾಗಿತ್ತು ಎಂದು ಪೊಲೀಸರು ಎಫ್ಐಆರ್ನಲ್ಲಿ ಆರೋಪಿಸಿದ್ದಾರೆ.</p>.<p>2018ರ ಜುಲೈ 24ರಂದು ಪ್ರಾಧಿಕಾರದಲ್ಲಿ ನಡೆದ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಸರ್ಕಾರ ಶಿಫಾರಸು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ಯಮುನಾ ಎಕ್ಸ್ಪ್ರೆಸ್ ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (ಯೇಡಾ) ಭೂಹಗರಣದ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದ್ದು, ಪ್ರಾಧಿಕಾರದ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಪಿ.ಸಿ. ಗುಪ್ತಾ ಮತ್ತು ಇತರ 20 ಮಂದಿ ವಿರುದ್ಧ ಬುಧವಾರ ಎಫ್ಆರ್ಐ ದಾಖಲಿಸಿದೆ.</p>.<p>ಗ್ರೇಟರ್ ನೋಯ್ಡಾವನ್ನು ಆಗ್ರಾದೊಂದಿಗೆ ಸಂಪರ್ಕಿಸುವ 165 ಕಿ.ಮೀ. ಉದ್ದದ ಯುಮನಾ ಎಕ್ಸ್ಪ್ರೆಸ್ ಹೆದ್ದಾರಿ ಕಾಮಗಾರಿಗಾಗಿ ಮಥುರಾ ಬಳಿಯ 7 ಹಳ್ಳಿಗಳ ವ್ಯಾಪ್ತಿಯಲ್ಲಿ 57.15 ಹೆಕ್ಟೇರ್ ಖರೀದಿಗೆ ಪ್ರಾಧಿಕಾರ ₹ 85.49 ಕೋಟಿಗೆ ಒದಗಿಸಿತ್ತು. ಆದರೆ, ಗುಪ್ತಾ ಅವರು ತಮ್ಮ ಸಂಬಂಧಿಕರೊಂದಿಗೆ ಕ್ರಮಿನಲ್ ಸಂಚು ಹೂಡಿ, ಈ ಜಮೀನನ್ನು ಖರೀದಿಸಿ, ಪ್ರಾಧಿಕಾರಕ್ಕೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಇದರಿಂದ ಬೊಕ್ಕಸಕ್ಕೆ ₹ 126 ಕೋಟಿ ನಷ್ಟವುಂಟಾಗಿತ್ತು ಎಂದು ಪೊಲೀಸರು ಎಫ್ಐಆರ್ನಲ್ಲಿ ಆರೋಪಿಸಿದ್ದಾರೆ.</p>.<p>2018ರ ಜುಲೈ 24ರಂದು ಪ್ರಾಧಿಕಾರದಲ್ಲಿ ನಡೆದ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಸರ್ಕಾರ ಶಿಫಾರಸು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>