<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಫೆ.26ರಂದು ವಿಚಾರಣೆಗೆ ಹಾಜರಾಗುವಂತೆ ಬಿಆರ್ಎಸ್ ಶಾಸಕಿ ಕೆ.ಕವಿತಾ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p>.<p>ದೆಹಲಿಯಲ್ಲಿರುವ ಸಿಬಿಐನ ಕೇಂದ್ರ ಕಚೇರಿಯಲ್ಲಿ ತನಿಖಾ ತಂಡದ ಎದುರು ಹಾಜರಾಗುವಂತೆ ಕವಿತಾ ಅವರಿಗೆ ಸೂಚಿಸಲಾಗಿದೆ. ಈ ಹಿಂದೆ, 2022ರ ಡಿಸೆಂಬರ್ನಲ್ಲಿ ಹೈದರಾಬಾದ್ನಲ್ಲಿರುವ ಅವರ ನಿವಾಸದಲ್ಲಿ ಕವಿತಾ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ.</p>.<p>ಹಗರಣದಲ್ಲಿ ಆರೋಪಿಯಾಗಿರುವ ವಿಜಯ್ ನಾಯರ್ಗೆ ಕವಿತಾ, ಶರತ್ ರೆಡ್ಡಿ ಹಾಗೂ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮಾಲೀಕತ್ವದ ಸೌಥ್ ಗ್ರೂಪ್ನಿಂದ ₹100 ಕೋಟಿಯಷ್ಟು ಲಂಚ ನೀಡಲಾಗಿದೆ. ಆಮ್ ಆದ್ಮಿ ಪಕ್ಷದ ನಾಯಕರ ಪರವಾಗಿ ಈ ಹಣ ನೀಡಲಾಗಿದೆ ಎಂದು ಇ.ಡಿ ಆರೋಪಿಸಿದೆ. </p>.<p>ಇ.ಡಿ ಆರೋಪಗಳ ಆಧಾರದ ಮೇಲೆ ತನಿಖೆ ಕೈಗೊಂಡಿರುವ ಸಿಬಿಐ, ಈ ವರೆಗೆ ಹಲವು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಫೆ.26ರಂದು ವಿಚಾರಣೆಗೆ ಹಾಜರಾಗುವಂತೆ ಬಿಆರ್ಎಸ್ ಶಾಸಕಿ ಕೆ.ಕವಿತಾ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p>.<p>ದೆಹಲಿಯಲ್ಲಿರುವ ಸಿಬಿಐನ ಕೇಂದ್ರ ಕಚೇರಿಯಲ್ಲಿ ತನಿಖಾ ತಂಡದ ಎದುರು ಹಾಜರಾಗುವಂತೆ ಕವಿತಾ ಅವರಿಗೆ ಸೂಚಿಸಲಾಗಿದೆ. ಈ ಹಿಂದೆ, 2022ರ ಡಿಸೆಂಬರ್ನಲ್ಲಿ ಹೈದರಾಬಾದ್ನಲ್ಲಿರುವ ಅವರ ನಿವಾಸದಲ್ಲಿ ಕವಿತಾ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ.</p>.<p>ಹಗರಣದಲ್ಲಿ ಆರೋಪಿಯಾಗಿರುವ ವಿಜಯ್ ನಾಯರ್ಗೆ ಕವಿತಾ, ಶರತ್ ರೆಡ್ಡಿ ಹಾಗೂ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮಾಲೀಕತ್ವದ ಸೌಥ್ ಗ್ರೂಪ್ನಿಂದ ₹100 ಕೋಟಿಯಷ್ಟು ಲಂಚ ನೀಡಲಾಗಿದೆ. ಆಮ್ ಆದ್ಮಿ ಪಕ್ಷದ ನಾಯಕರ ಪರವಾಗಿ ಈ ಹಣ ನೀಡಲಾಗಿದೆ ಎಂದು ಇ.ಡಿ ಆರೋಪಿಸಿದೆ. </p>.<p>ಇ.ಡಿ ಆರೋಪಗಳ ಆಧಾರದ ಮೇಲೆ ತನಿಖೆ ಕೈಗೊಂಡಿರುವ ಸಿಬಿಐ, ಈ ವರೆಗೆ ಹಲವು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>