<p><strong>ಕೋಟಾ</strong>: ಎಲ್ಲ ಶಾಲೆಗಳಲ್ಲಿ ಮಾನಸಿಕ ಆರೋಗ್ಯ ಮತ್ತು ವೃತ್ತಿ ಸಲಹೆಗಾರರ ನೇಮಕವನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ಕಡ್ಡಾಯಗೊಳಿಸಿದೆ.</p>.<p>500 ವಿದ್ಯಾರ್ಥಿಗಳಿಗೆ ತಲಾ ಒಬ್ಬರನ್ನು ನೇಮಿಸಿಕೊಳ್ಳುವಂತೆ ಸಿಬಿಎಸ್ಇ ಜ.19ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ. ಸಿಬಿಎಸ್ಇ ಮಾನ್ಯತೆ ಪಡೆದಿರುವ ಎಲ್ಲ ಶಾಲೆಗಳಿಗೆ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ.</p>.<p>ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಬಲಪಡಿಸುವ ಮತ್ತು ಅವರಿಗೆ ವೃತ್ತಿ ಮಾರ್ಗದರ್ಶನ ನೀಡುವ ಗುರಿ ಹೊಂದಿರುವ ಮಹತ್ವದ ನೀತಿ ಸುಧಾರಣೆಯಡಿ ಸಿಬಿಎಸ್ಇ ಈ ಕ್ರಮ ಕೈಗೊಂಡಿದೆ.</p>.<p>ಕೋಟಾದ ವಕೀಲ ಸುಜೀತ್ ಸ್ವಾಮಿ ಮತ್ತು ಕೆಲವು ಮನೋವಿಜ್ಞಾನ ತಜ್ಞರು 2025ರ ಜುಲೈನಲ್ಲಿ ರಾಜಸ್ಥಾನ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿದ ನಂತರ, ರಾಷ್ಟ್ರೀಯ ಶಿಕ್ಷಣ ಮಂಡಳಿಯು ಸಿಬಿಎಸ್ಇ ನಿಬಂಧನೆಗಳಲ್ಲಿ ತಿದ್ದುಪಡಿ ಮಾಡಿದೆ.</p>.<p>ರಾಜಸ್ಥಾನ ಹೈಕೋರ್ಟ್ 2025ರ ಸೆಪ್ಟೆಂಬರ್ನಲ್ಲಿ ವಿಚಾರಣೆ ನಡೆಸಿದ ಸಂದರ್ಭ ಸಿಬಿಎಸ್ಇ, ಆರ್ಬಿಎಸ್ಇ, ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮತ್ತು ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆ ಕೋರಿತ್ತು.</p>.<p>ಪ್ರತಿಕ್ರಿಯೆ ಸಲ್ಲಿಸಿದ ಬಳಿಕ ಸಿಬಿಎಸ್ಇ ಈ ಸುತ್ತೋಲೆ ಹೊರಡಿಸಿದೆ.</p>.<p>ಶೈಕ್ಷಣಿಕ ಒತ್ತಡ ಮತ್ತು ರಚನಾತ್ಮಕ ವೃತ್ತಿ ಮಾರ್ಗದರ್ಶನದ ಕೊರತೆ ಸೇರಿದಂತೆ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸವಾಲುಗಳನ್ನು ಪಿಐಎಲ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟಾ</strong>: ಎಲ್ಲ ಶಾಲೆಗಳಲ್ಲಿ ಮಾನಸಿಕ ಆರೋಗ್ಯ ಮತ್ತು ವೃತ್ತಿ ಸಲಹೆಗಾರರ ನೇಮಕವನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ಕಡ್ಡಾಯಗೊಳಿಸಿದೆ.</p>.<p>500 ವಿದ್ಯಾರ್ಥಿಗಳಿಗೆ ತಲಾ ಒಬ್ಬರನ್ನು ನೇಮಿಸಿಕೊಳ್ಳುವಂತೆ ಸಿಬಿಎಸ್ಇ ಜ.19ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ. ಸಿಬಿಎಸ್ಇ ಮಾನ್ಯತೆ ಪಡೆದಿರುವ ಎಲ್ಲ ಶಾಲೆಗಳಿಗೆ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ.</p>.<p>ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಬಲಪಡಿಸುವ ಮತ್ತು ಅವರಿಗೆ ವೃತ್ತಿ ಮಾರ್ಗದರ್ಶನ ನೀಡುವ ಗುರಿ ಹೊಂದಿರುವ ಮಹತ್ವದ ನೀತಿ ಸುಧಾರಣೆಯಡಿ ಸಿಬಿಎಸ್ಇ ಈ ಕ್ರಮ ಕೈಗೊಂಡಿದೆ.</p>.<p>ಕೋಟಾದ ವಕೀಲ ಸುಜೀತ್ ಸ್ವಾಮಿ ಮತ್ತು ಕೆಲವು ಮನೋವಿಜ್ಞಾನ ತಜ್ಞರು 2025ರ ಜುಲೈನಲ್ಲಿ ರಾಜಸ್ಥಾನ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿದ ನಂತರ, ರಾಷ್ಟ್ರೀಯ ಶಿಕ್ಷಣ ಮಂಡಳಿಯು ಸಿಬಿಎಸ್ಇ ನಿಬಂಧನೆಗಳಲ್ಲಿ ತಿದ್ದುಪಡಿ ಮಾಡಿದೆ.</p>.<p>ರಾಜಸ್ಥಾನ ಹೈಕೋರ್ಟ್ 2025ರ ಸೆಪ್ಟೆಂಬರ್ನಲ್ಲಿ ವಿಚಾರಣೆ ನಡೆಸಿದ ಸಂದರ್ಭ ಸಿಬಿಎಸ್ಇ, ಆರ್ಬಿಎಸ್ಇ, ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮತ್ತು ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆ ಕೋರಿತ್ತು.</p>.<p>ಪ್ರತಿಕ್ರಿಯೆ ಸಲ್ಲಿಸಿದ ಬಳಿಕ ಸಿಬಿಎಸ್ಇ ಈ ಸುತ್ತೋಲೆ ಹೊರಡಿಸಿದೆ.</p>.<p>ಶೈಕ್ಷಣಿಕ ಒತ್ತಡ ಮತ್ತು ರಚನಾತ್ಮಕ ವೃತ್ತಿ ಮಾರ್ಗದರ್ಶನದ ಕೊರತೆ ಸೇರಿದಂತೆ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸವಾಲುಗಳನ್ನು ಪಿಐಎಲ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>