<p><strong>ನವದೆಹಲಿ</strong>: ತಾಂತ್ರಿಕ ದೋಷಗಳ ಕಾರಣದಿಂದಾಗಿ ಫಲಿತಾಂಶದ ನಂತರದ ಪ್ರಕ್ರಿಯೆಗಳಿಗೆ 12ನೇ ತರಗತಿ ವಿದ್ಯಾರ್ಥಿಗಳು ಪಾವತಿಸಿದ್ದ ಹೆಚ್ಚುವರಿ ಶುಲ್ಕವನ್ನು ಶೀಘ್ರವೇ ಹಿಂದಿರುಗಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಭಾನುವಾರ ತಿಳಿಸಿದೆ.</p><p>ಮರು ಮೌಲ್ಯಮಾಪನ ಸಂಬಂಧಿತ ಪ್ರಕ್ರಿಯೆಗಳ ವೇಳೆ ತಾಂತ್ರಿಕ ಸಮಸ್ಯೆಗಳು ಎದುರಾದ ಸಂಬಂಧ ವಿದ್ಯಾರ್ಥಿಗಳಿಂದ ದೂರುಗಳು ಕೇಳಿ ಬಂದಿದ್ದವು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರದಿ ನೀಡುವಂತೆ ಸಿಬಿಎಸ್ಇಗೆ ಸೂಚಿಸಿದ್ದರು. ಇದಾದ ಒಂದು ದಿನದ ನಂತರ ಶುಲ್ಕ ಮರುಪಾವತಿ ಹೇಳಿಕೆ ಹೊರಬಿದ್ದಿದೆ.</p><p>ಮೌಲ್ಯಮಾಪನ ಮಾಡಲಾದ ಉತ್ತರ ಪತ್ರಿಕೆಗಳ ಸ್ಕ್ಯಾನ್ ಕಾಪಿಗಳಿಗಾಗಿ ವಿದ್ಯಾರ್ಥಿಗಳು ಮೇ 21 ಮತ್ತು 22ರಂದು ಅರ್ಜಿ ಸಲ್ಲಿಸಿದ ವೇಳೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಕೆಲವರು ಹೆಚ್ಚುವರಿ ಶುಲ್ಕ ಪಾವತಿಸುವಂತಾಗಿತ್ತು ಎಂದು ಸಿಬಿಎಸ್ಇ ಹೇಳಿಕೆ ಬಿಡುಗಡೆ ಮಾಡಿದೆ.</p><p>‘ಕೆಲವರು ಹೆಚ್ಚುವರಿ ಹಣ ಪಾವತಿಸಿದ್ದಾರೆ. ಇನ್ನು ಕೆಲವರಿಗೆ ಕಡಿಮೆ ಮೊತ್ತವನ್ನು ಭರಿಸಿದ್ದಾರೆ. ತಾಂತ್ರಿಕ ದೋಷದಿಂದ ಹೀಗಾಗಿದೆ’ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.</p><p>‘ಶುಲ್ಕ ಪಾವತಿಗೆ ಅನುಸರಿಸಿದ್ದ ವಿಧಾನದಲ್ಲೇ ಹೆಚ್ಚುವರಿ ಹಣವನ್ನು ಹಿಂತಿರುಗಿಸಲಾಗುವುದು. ಅದೇ ರೀತಿ, ಅಗತ್ಯಬಿದ್ದರೆ, ಕಡಿಮೆ ಮೊತ್ತ ಪಾವತಿಸಿರುವ ವಿದ್ಯಾರ್ಥಿಗಳಿಗೆ ಬಾಕಿ ಮೊತ್ತ ಭರಿಸುವಂತೆ ಸೂಚಿಸಲಾಗುವುದು’ ಎಂದೂ ತಿಳಿಸಲಾಗಿದೆ.</p><p>ಮೌಲ್ಯಮಾಪನ ಮಾಡಲಾದ ಉತ್ತರ ಪತ್ರಿಕೆಗಳ ಸ್ಕ್ಯಾನ್ ಕಾಪಿಗಳಿಗಾಗಿ ವಿದ್ಯಾರ್ಥಿಗಳು ಮತ್ತೊಮ್ಮೆ ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂಬುದಾಗಿಯೂ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತಾಂತ್ರಿಕ ದೋಷಗಳ ಕಾರಣದಿಂದಾಗಿ ಫಲಿತಾಂಶದ ನಂತರದ ಪ್ರಕ್ರಿಯೆಗಳಿಗೆ 12ನೇ ತರಗತಿ ವಿದ್ಯಾರ್ಥಿಗಳು ಪಾವತಿಸಿದ್ದ ಹೆಚ್ಚುವರಿ ಶುಲ್ಕವನ್ನು ಶೀಘ್ರವೇ ಹಿಂದಿರುಗಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಭಾನುವಾರ ತಿಳಿಸಿದೆ.</p><p>ಮರು ಮೌಲ್ಯಮಾಪನ ಸಂಬಂಧಿತ ಪ್ರಕ್ರಿಯೆಗಳ ವೇಳೆ ತಾಂತ್ರಿಕ ಸಮಸ್ಯೆಗಳು ಎದುರಾದ ಸಂಬಂಧ ವಿದ್ಯಾರ್ಥಿಗಳಿಂದ ದೂರುಗಳು ಕೇಳಿ ಬಂದಿದ್ದವು. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರದಿ ನೀಡುವಂತೆ ಸಿಬಿಎಸ್ಇಗೆ ಸೂಚಿಸಿದ್ದರು. ಇದಾದ ಒಂದು ದಿನದ ನಂತರ ಶುಲ್ಕ ಮರುಪಾವತಿ ಹೇಳಿಕೆ ಹೊರಬಿದ್ದಿದೆ.</p><p>ಮೌಲ್ಯಮಾಪನ ಮಾಡಲಾದ ಉತ್ತರ ಪತ್ರಿಕೆಗಳ ಸ್ಕ್ಯಾನ್ ಕಾಪಿಗಳಿಗಾಗಿ ವಿದ್ಯಾರ್ಥಿಗಳು ಮೇ 21 ಮತ್ತು 22ರಂದು ಅರ್ಜಿ ಸಲ್ಲಿಸಿದ ವೇಳೆ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಕೆಲವರು ಹೆಚ್ಚುವರಿ ಶುಲ್ಕ ಪಾವತಿಸುವಂತಾಗಿತ್ತು ಎಂದು ಸಿಬಿಎಸ್ಇ ಹೇಳಿಕೆ ಬಿಡುಗಡೆ ಮಾಡಿದೆ.</p><p>‘ಕೆಲವರು ಹೆಚ್ಚುವರಿ ಹಣ ಪಾವತಿಸಿದ್ದಾರೆ. ಇನ್ನು ಕೆಲವರಿಗೆ ಕಡಿಮೆ ಮೊತ್ತವನ್ನು ಭರಿಸಿದ್ದಾರೆ. ತಾಂತ್ರಿಕ ದೋಷದಿಂದ ಹೀಗಾಗಿದೆ’ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.</p><p>‘ಶುಲ್ಕ ಪಾವತಿಗೆ ಅನುಸರಿಸಿದ್ದ ವಿಧಾನದಲ್ಲೇ ಹೆಚ್ಚುವರಿ ಹಣವನ್ನು ಹಿಂತಿರುಗಿಸಲಾಗುವುದು. ಅದೇ ರೀತಿ, ಅಗತ್ಯಬಿದ್ದರೆ, ಕಡಿಮೆ ಮೊತ್ತ ಪಾವತಿಸಿರುವ ವಿದ್ಯಾರ್ಥಿಗಳಿಗೆ ಬಾಕಿ ಮೊತ್ತ ಭರಿಸುವಂತೆ ಸೂಚಿಸಲಾಗುವುದು’ ಎಂದೂ ತಿಳಿಸಲಾಗಿದೆ.</p><p>ಮೌಲ್ಯಮಾಪನ ಮಾಡಲಾದ ಉತ್ತರ ಪತ್ರಿಕೆಗಳ ಸ್ಕ್ಯಾನ್ ಕಾಪಿಗಳಿಗಾಗಿ ವಿದ್ಯಾರ್ಥಿಗಳು ಮತ್ತೊಮ್ಮೆ ಮನವಿ ಸಲ್ಲಿಸುವ ಅಗತ್ಯವಿಲ್ಲ ಎಂಬುದಾಗಿಯೂ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>