<p><strong>ನವದೆಹಲಿ:</strong> ಕೊರೊನಾ ವೈರಸ್ ಲಾಕ್ಡೌನ್ ವೇಳೆಯಲ್ಲಿ ಶಾಲೆಗಳನ್ನು ಮುಚ್ಚಿದ್ದರಿಂದಾಗಿ ವಿವಿಧ ರಾಜ್ಯಗಳಿಗೆ ಅಥವಾ ತಮ್ಮ ಸ್ವಂತ ಜಿಲ್ಲೆಗಳಿಗೆ ತೆರಳಿದ್ದ ಸಿಬಿಎಸ್ಇ 10 ಮತ್ತು 12 ವಿದ್ಯಾರ್ಥಿಗಳು ತಮ್ಮ ತವರು ಜಿಲ್ಲೆಯಲ್ಲಿಯೇ ಪರೀಕ್ಷೆಗೆ ಹಾಜರಾಗಲು ಕೇಂದ್ರಿಯ ಪ್ರೌಢಶಿಕ್ಷಣ ಮಂಡಳಿಯು ನಿರ್ಧರಿಸಿದೆ.</p>.<p>ಶಿಕ್ಷಣ ಸಚಿವರ ಪ್ರಕಾರ, ಲಾಕ್ಡೌನ್ ಕಾರಣದಿಂದಾಗಿ ತಮ್ಮ ಶಾಲೆಗಳಿಗೆ ಪ್ರಯಾಣಿಸಲು ಹೊರವಲಯದ ವಿದ್ಯಾರ್ಥಿಗಳು ಎದುರಿಸಬಹುದಾದ ಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬಿಎಸ್ಇ ಜುಲೈ 1 ರಿಂದ ಉಳಿದ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲಿದೆ ಎಂದು ತಿಳಿಸಿದ್ದಾರೆ.</p>.<p>ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಪರೀಕ್ಷಾ ಕೇಂದ್ರಗಳಲ್ಲಿನ ಬದಲಾವಣೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಆಯಾ ಶಾಲೆಗಳಿಗೆ ವಿದ್ಯಾರ್ಥಿಗಳು ತಿಳಿಸಬಹುದು.</p>.<p>ಲಾಕ್ಡೌನ್ನಿಂದಾಗಿ ಬೇರೆ ರಾಜ್ಯ ಅಥವಾ ಜಿಲ್ಲೆಗಳಿಗೆ ತೆರಳಿದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಸದ್ಯ ತಾವಿರುವ ತವರು ಜಿಲ್ಲೆಗಳಲ್ಲಿಯೇ ಪರೀಕ್ಷೆಗಳಿಗೆ ಹಾಜರಾಗಬಹುದು. ಅವರು ಪ್ರಯಾಣಿಸುವ ಅಗತ್ಯವಿಲ್ಲ. ಈ ಕುರಿತ ಮಾಹಿತಿ ಮತ್ತು ಅಂತವರ ಮನವಿಗಳನ್ನು ನೋಂದಾಯಿಸುವ ವಿಧಾನಗಳ ಕುರಿತು ಸಿಬಿಎಸ್ಇ ಅಧಿಸೂಚನೆಯನ್ನು ಹೊರಡಿಸುತ್ತದೆ. ತಮ್ಮ ಪರೀಕ್ಷಾ ಕೇಂದ್ರಗಳಲ್ಲಿನ ಬದಲಾವಣೆಯ ವಿವರಗಳನ್ನು ವಿದ್ಯಾರ್ಥಿಗಳು ಜೂನ್ ಮೊದಲ ವಾರದಲ್ಲಿ ಪಡೆಯಬಹುದು ಎಂದು ತಿಳಿಸಿದ್ದಾರೆ.</p>.<p>ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ಮಾರ್ಚ್ 25 ರಂದು ರಾಷ್ಟ್ರವ್ಯಾಪಿ ಲಾಕ್ಡೌನ್ ಘೋಷಿಸಿದ್ದರಿಂದಾಗಿ ಪರೀಕ್ಷೆಯನ್ನು ಮುಂದೂಡಲಾಯಿತು. ಈಗ ಜುಲೈ 1 ರಿಂದ 15ರವರೆಗೆ ಪರೀಕ್ಷೆಗಳು ನಡೆಯಲಿವೆ. 10ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಈಶಾನ್ಯ ದೆಹಲಿಯಲ್ಲಿ ಮಾತ್ರ ಬಾಕಿ ಉಳಿದಿವೆ.</p>.<p>ಪ್ರೀಮಿಯಂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪ್ರವೇಶ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸುವ ಮೊದಲು ಆಗಸ್ಟ್ನಲ್ಲಿ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ವೈರಸ್ ಲಾಕ್ಡೌನ್ ವೇಳೆಯಲ್ಲಿ ಶಾಲೆಗಳನ್ನು ಮುಚ್ಚಿದ್ದರಿಂದಾಗಿ ವಿವಿಧ ರಾಜ್ಯಗಳಿಗೆ ಅಥವಾ ತಮ್ಮ ಸ್ವಂತ ಜಿಲ್ಲೆಗಳಿಗೆ ತೆರಳಿದ್ದ ಸಿಬಿಎಸ್ಇ 10 ಮತ್ತು 12 ವಿದ್ಯಾರ್ಥಿಗಳು ತಮ್ಮ ತವರು ಜಿಲ್ಲೆಯಲ್ಲಿಯೇ ಪರೀಕ್ಷೆಗೆ ಹಾಜರಾಗಲು ಕೇಂದ್ರಿಯ ಪ್ರೌಢಶಿಕ್ಷಣ ಮಂಡಳಿಯು ನಿರ್ಧರಿಸಿದೆ.</p>.<p>ಶಿಕ್ಷಣ ಸಚಿವರ ಪ್ರಕಾರ, ಲಾಕ್ಡೌನ್ ಕಾರಣದಿಂದಾಗಿ ತಮ್ಮ ಶಾಲೆಗಳಿಗೆ ಪ್ರಯಾಣಿಸಲು ಹೊರವಲಯದ ವಿದ್ಯಾರ್ಥಿಗಳು ಎದುರಿಸಬಹುದಾದ ಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಬಿಎಸ್ಇ ಜುಲೈ 1 ರಿಂದ ಉಳಿದ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲಿದೆ ಎಂದು ತಿಳಿಸಿದ್ದಾರೆ.</p>.<p>ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಪರೀಕ್ಷಾ ಕೇಂದ್ರಗಳಲ್ಲಿನ ಬದಲಾವಣೆಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಆಯಾ ಶಾಲೆಗಳಿಗೆ ವಿದ್ಯಾರ್ಥಿಗಳು ತಿಳಿಸಬಹುದು.</p>.<p>ಲಾಕ್ಡೌನ್ನಿಂದಾಗಿ ಬೇರೆ ರಾಜ್ಯ ಅಥವಾ ಜಿಲ್ಲೆಗಳಿಗೆ ತೆರಳಿದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಸದ್ಯ ತಾವಿರುವ ತವರು ಜಿಲ್ಲೆಗಳಲ್ಲಿಯೇ ಪರೀಕ್ಷೆಗಳಿಗೆ ಹಾಜರಾಗಬಹುದು. ಅವರು ಪ್ರಯಾಣಿಸುವ ಅಗತ್ಯವಿಲ್ಲ. ಈ ಕುರಿತ ಮಾಹಿತಿ ಮತ್ತು ಅಂತವರ ಮನವಿಗಳನ್ನು ನೋಂದಾಯಿಸುವ ವಿಧಾನಗಳ ಕುರಿತು ಸಿಬಿಎಸ್ಇ ಅಧಿಸೂಚನೆಯನ್ನು ಹೊರಡಿಸುತ್ತದೆ. ತಮ್ಮ ಪರೀಕ್ಷಾ ಕೇಂದ್ರಗಳಲ್ಲಿನ ಬದಲಾವಣೆಯ ವಿವರಗಳನ್ನು ವಿದ್ಯಾರ್ಥಿಗಳು ಜೂನ್ ಮೊದಲ ವಾರದಲ್ಲಿ ಪಡೆಯಬಹುದು ಎಂದು ತಿಳಿಸಿದ್ದಾರೆ.</p>.<p>ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ಮಾರ್ಚ್ 25 ರಂದು ರಾಷ್ಟ್ರವ್ಯಾಪಿ ಲಾಕ್ಡೌನ್ ಘೋಷಿಸಿದ್ದರಿಂದಾಗಿ ಪರೀಕ್ಷೆಯನ್ನು ಮುಂದೂಡಲಾಯಿತು. ಈಗ ಜುಲೈ 1 ರಿಂದ 15ರವರೆಗೆ ಪರೀಕ್ಷೆಗಳು ನಡೆಯಲಿವೆ. 10ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಈಶಾನ್ಯ ದೆಹಲಿಯಲ್ಲಿ ಮಾತ್ರ ಬಾಕಿ ಉಳಿದಿವೆ.</p>.<p>ಪ್ರೀಮಿಯಂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪ್ರವೇಶ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸುವ ಮೊದಲು ಆಗಸ್ಟ್ನಲ್ಲಿ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>