<p><strong>ನವದೆಹಲಿ</strong>: ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಮಸೀದಿಗಳು ಮತ್ತು ಮದರಸಾಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಬಿಜೆಪಿ ಸಂಸದ ಅರುಣ್ ಗೋವಿರ್ ಗುರುವಾರ ಆಗ್ರಹಿಸಿದ್ದಾರೆ.</p><p>ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಗೋವಿಲ್, ‘ಈ ಬೇಡಿಕೆಯು ಯಾವುದೇ ಧರ್ಮದ ವಿರುದ್ಧವಲ್ಲ ಬದಲಾಗಿ ರಾಷ್ಟೀಯ ಭದ್ರತೆ ಮತ್ತು ಅಮೂಲ್ಯ ಜೀವವನ್ನು ರಕ್ಷಿಸುವ ಉದ್ದೇಶ ಹೊಂದಿದೆ’ ಎಂದಿದ್ದಾರೆ.</p><p>‘ದೇವಾಲಯ, ಚರ್ಚ್, ಶಾಲಾ ಮತ್ತು ಕಾಲೇಜುಗಳಲ್ಲಿ ಅಳವಡಿಸಿದಂತೆ ಮಸೀದಿಗಳಲ್ಲಿಯೂ ಸಿಸಿಟಿವಿ ಅಳವಳಡಿಸಬೇಕು. ಆ ಮೂಲಕ ಮದರಸಾಗಳು ಮತ್ತು ಮಸೀದಿಗಳಿಗೆ ಭೇಟಿ ನೀಡುವ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ’ ಎಂದು ಹೇಳಿದ್ದಾರೆ.</p><p>ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾದಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಹೇಳಿರುವ ಅವರು, ಈ ನಿಟ್ಟಿನಲ್ಲಿ ಸರ್ಕಾರ ಏಕರೂಪದ ರಾಷ್ಟ್ರೀಯ ಭದ್ರತಾ ನೀತಿಯನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಮಸೀದಿಗಳು ಮತ್ತು ಮದರಸಾಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಬಿಜೆಪಿ ಸಂಸದ ಅರುಣ್ ಗೋವಿರ್ ಗುರುವಾರ ಆಗ್ರಹಿಸಿದ್ದಾರೆ.</p><p>ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಗೋವಿಲ್, ‘ಈ ಬೇಡಿಕೆಯು ಯಾವುದೇ ಧರ್ಮದ ವಿರುದ್ಧವಲ್ಲ ಬದಲಾಗಿ ರಾಷ್ಟೀಯ ಭದ್ರತೆ ಮತ್ತು ಅಮೂಲ್ಯ ಜೀವವನ್ನು ರಕ್ಷಿಸುವ ಉದ್ದೇಶ ಹೊಂದಿದೆ’ ಎಂದಿದ್ದಾರೆ.</p><p>‘ದೇವಾಲಯ, ಚರ್ಚ್, ಶಾಲಾ ಮತ್ತು ಕಾಲೇಜುಗಳಲ್ಲಿ ಅಳವಡಿಸಿದಂತೆ ಮಸೀದಿಗಳಲ್ಲಿಯೂ ಸಿಸಿಟಿವಿ ಅಳವಳಡಿಸಬೇಕು. ಆ ಮೂಲಕ ಮದರಸಾಗಳು ಮತ್ತು ಮಸೀದಿಗಳಿಗೆ ಭೇಟಿ ನೀಡುವ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ’ ಎಂದು ಹೇಳಿದ್ದಾರೆ.</p><p>ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾದಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಹೇಳಿರುವ ಅವರು, ಈ ನಿಟ್ಟಿನಲ್ಲಿ ಸರ್ಕಾರ ಏಕರೂಪದ ರಾಷ್ಟ್ರೀಯ ಭದ್ರತಾ ನೀತಿಯನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>