<p><strong>ನವದೆಹಲಿ:</strong> ದೇಶದ ಸಶಸ್ತ್ರ ಪಡೆಗಳು ಯಾವುದೇ ರೀತಿಯ ಭದ್ರತಾ ಸವಾಲುಗಳನ್ನು ಎದುರಿಸಲು ಸಿದ್ಧವಾಗಿವೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.</p>.<p>ಸ್ವಾತಂತ್ರ್ಯೋತ್ಸವದ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು , ಸೇನೆಯ ಮೂರೂ ಪಡೆಗಳ ನಡುವೆ ಸಹಕಾರ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸಲಿವೆ ಎಂದು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/afghanistan-likely-to-plunge-into-civil-war-after-talibans-victory-political-commentator-harlan-857610.html" itemprop="url">ತಾಲಿಬಾನ್ ಗೆದ್ದರೆ ಅಫ್ಗಾನಿಸ್ತಾನದಲ್ಲಿ ಅಂತರ್ಯುದ್ಧ ಸೃಷ್ಟಿ ಭೀತಿ: ಹರ್ಲನ್</a></p>.<p>ಸಶಸ್ತ್ರ ಪಡೆಗಳನ್ನು ಆಧುನೀಕರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಗಳನ್ನೂ ಉಲ್ಲೇಖಿಸಿದ ಅವರು, ಪಡೆಗಳ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಬೇಕಾದ ಅಗತ್ಯವಿದೆ ಎಂದಿದ್ದಾರೆ.</p>.<p>ಭಾರತವು ಶಾಂತಿಪ್ರಿಯ ದೇಶ. ಆದರೆ ಮುಂದಿರುವ ಸವಾಲುಗಳನ್ನು ಪರಿಗಣಿಸಿ ಸೇನೆಯನ್ನು ಯುದ್ಧ ಸನ್ನದ್ಧವಾಗಿರುವಂತೆ ತರಬೇತಿ ನೀಡುವ ಅಗತ್ಯ ದೇಶಕ್ಕಿತ್ತು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ಸಶಸ್ತ್ರ ಪಡೆಗಳು ಯಾವುದೇ ರೀತಿಯ ಭದ್ರತಾ ಸವಾಲುಗಳನ್ನು ಎದುರಿಸಲು ಸಿದ್ಧವಾಗಿವೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.</p>.<p>ಸ್ವಾತಂತ್ರ್ಯೋತ್ಸವದ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು , ಸೇನೆಯ ಮೂರೂ ಪಡೆಗಳ ನಡುವೆ ಸಹಕಾರ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸಲಿವೆ ಎಂದು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/afghanistan-likely-to-plunge-into-civil-war-after-talibans-victory-political-commentator-harlan-857610.html" itemprop="url">ತಾಲಿಬಾನ್ ಗೆದ್ದರೆ ಅಫ್ಗಾನಿಸ್ತಾನದಲ್ಲಿ ಅಂತರ್ಯುದ್ಧ ಸೃಷ್ಟಿ ಭೀತಿ: ಹರ್ಲನ್</a></p>.<p>ಸಶಸ್ತ್ರ ಪಡೆಗಳನ್ನು ಆಧುನೀಕರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಗಳನ್ನೂ ಉಲ್ಲೇಖಿಸಿದ ಅವರು, ಪಡೆಗಳ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಬೇಕಾದ ಅಗತ್ಯವಿದೆ ಎಂದಿದ್ದಾರೆ.</p>.<p>ಭಾರತವು ಶಾಂತಿಪ್ರಿಯ ದೇಶ. ಆದರೆ ಮುಂದಿರುವ ಸವಾಲುಗಳನ್ನು ಪರಿಗಣಿಸಿ ಸೇನೆಯನ್ನು ಯುದ್ಧ ಸನ್ನದ್ಧವಾಗಿರುವಂತೆ ತರಬೇತಿ ನೀಡುವ ಅಗತ್ಯ ದೇಶಕ್ಕಿತ್ತು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>