<p><strong>ನವದೆಹಲಿ</strong>: ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸುವ ಕುರಿತು ವಿರೋಧ ಪಕ್ಷಗಳು ಎರಡೂ ಸದನಗಳಲ್ಲಿ ನೀಡಿದ್ದ ನೋಟಿಸ್ ಅನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆ ಸಭಾಪತಿ ಸಿ.ಪಿ.ರಾಧಾ ಕೃಷ್ಣನ್ ಸೋಮವಾರ ತಿರಸ್ಕರಿಸಿದ್ದಾರೆ.</p>.<p>ವಿರೋಧ ಪಕ್ಷಗಳು ನೋಟಿಸ್ ನೀಡಿದ 25 ದಿನಗಳ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನೋಟಿಸ್ ತಿರಸ್ಕರಿಸಿದ ಬಗ್ಗೆ ಸ್ಪೀಕರ್, ಸಭಾಪತಿ ಅವರು ಪ್ರತ್ಯೇಕ ಆದೇಶ ನೀಡಿದ್ದಾರೆ. ‘1968ರ ನ್ಯಾಯಾಧೀಶರು (ವಿಚಾರಣೆ) ಕಾಯ್ದೆಯ ಸೆಕ್ಷನ್ 3 ನೀಡಿದ ಅಧಿಕಾರವನ್ನು ಬಳಸಿ, ನೋಟಿಸ್ ಅನ್ನು ತಿರಸ್ಕರಿಸಲಾಗಿದೆ’ ಎಂದು ಸ್ಪೀಕರ್, ಸಭಾಪತಿ ನೀಡಿದ ಆದೇಶದಲ್ಲಿ ಹೇಳಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-51-751217149</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸುವ ಕುರಿತು ವಿರೋಧ ಪಕ್ಷಗಳು ಎರಡೂ ಸದನಗಳಲ್ಲಿ ನೀಡಿದ್ದ ನೋಟಿಸ್ ಅನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆ ಸಭಾಪತಿ ಸಿ.ಪಿ.ರಾಧಾ ಕೃಷ್ಣನ್ ಸೋಮವಾರ ತಿರಸ್ಕರಿಸಿದ್ದಾರೆ.</p>.<p>ವಿರೋಧ ಪಕ್ಷಗಳು ನೋಟಿಸ್ ನೀಡಿದ 25 ದಿನಗಳ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನೋಟಿಸ್ ತಿರಸ್ಕರಿಸಿದ ಬಗ್ಗೆ ಸ್ಪೀಕರ್, ಸಭಾಪತಿ ಅವರು ಪ್ರತ್ಯೇಕ ಆದೇಶ ನೀಡಿದ್ದಾರೆ. ‘1968ರ ನ್ಯಾಯಾಧೀಶರು (ವಿಚಾರಣೆ) ಕಾಯ್ದೆಯ ಸೆಕ್ಷನ್ 3 ನೀಡಿದ ಅಧಿಕಾರವನ್ನು ಬಳಸಿ, ನೋಟಿಸ್ ಅನ್ನು ತಿರಸ್ಕರಿಸಲಾಗಿದೆ’ ಎಂದು ಸ್ಪೀಕರ್, ಸಭಾಪತಿ ನೀಡಿದ ಆದೇಶದಲ್ಲಿ ಹೇಳಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-51-751217149</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>