<p><strong>ನವದೆಹಲಿ</strong>: ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಿಸುವ ಕುರಿತು ಚರ್ಚಿಸುವ ಸಂಬಂಧ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್, ಇದೇ 18ರಂದು ಸಭೆ ಕರೆದಿದ್ದಾರೆ.</p>.<p>ಗೃಹ ಸಚಿವಾಲಯ ಕಾರ್ಯದರ್ಶಿ ಗೋವಿಂದ ಮೋಹನ್, ಶಾಸಕಾಂಗ ಇಲಾಖೆ ಕಾರ್ಯದರ್ಶಿ ರಾಜೀವ್ ಮಣಿ ಹಾಗೂ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ಸಿಇಒ ಭುವನೇಶ ಕುಮಾರ್ ಅವರು ಕೂಡ ಸಭೆಯಲ್ಲಿ ಪಾಲ್ಗೊಳ್ಳುವರು.</p>.<p>ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಅಕ್ರಮ ಹಾಗೂ ಒಂದೇ ರೀತಿಯ ಸಂಖ್ಯೆವುಳ್ಳ ಮತದಾರರ ಗುರುತಿನ ಚೀಟಿಗಳ ಕುರಿತು ವ್ಯಾಪಕ ದೂರುಗಳು ಕೇಳಿ ಬಂದಿರುವ ಕಾರಣ, ಚುನಾವಣಾ ಆಯೋಗವು ಈ ಸಭೆ ಆಯೋಜಿಸಿದೆ ಎಂದು ಮೂಲಗಳು ಹೇಳಿವೆ.</p>.<p>ಸದ್ಯದ ಕಾನೂನು ಪ್ರಕಾರ, ಮತದಾರರು ಸ್ವ ಇಚ್ಛೆಯಿಂದ ಮಾತ್ರ ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಿಸಬಹುದಾಗಿದೆ.</p>.<p><strong>‘ನಿಗಾ ಇಡುತ್ತೇವೆ’</strong></p><p> ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸಭೆ ಕರೆದಿರುವ ಕುರಿತು ರಾಜ್ಯಸಭೆಯಲ್ಲಿನ ಟಿಎಂಸಿ ಉಪನಾಯಕಿ ಸಾಗರಿಕಾ ಘೋಷ್ ಪ್ರತಿಕ್ರಿಯಿಸಿದ್ದು, ‘ತಮ್ಮ ಮಾನ ಉಳಿಸುವಕೊಳ್ಳುವ ಉದ್ದೇಶದಿಂದ ಅವರು ಈ ಸಭೆ ಕರೆದಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಆರೋಪಗಳ ಕುರಿತು ಚುನಾವಣಾ ಆಯೋಗವು ಈ ವರೆಗೆ ಮೂರು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು, ಈಗ ಸಭೆ ಕರೆದಿದೆ. ಮುಂಬರುವ ಚುನಾವಣೆಗಳು ಮುಗಿಯುವವರೆಗೆ ನಾವು ನಿಗಾ ವಹಿಸುತ್ತೇವೆ’ ಎಂದೂ ಹೇಳಿದ್ದಾರೆ.</p>.<p>ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಸಲಹೆಗಳನ್ನು ನೀಡುವಂತೆ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳನ್ನು ಕೋರಿರುವ ಆಯೋಗ, ಪರಸ್ಪರರಿಗೆ ಅನುಕೂಲವಾಗುವ ದಿನಾಂಕದಂದು ಸಭೆ ನಡೆಸುವುದಾಗಿ ಇತ್ತೀಚೆಗೆ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಿಸುವ ಕುರಿತು ಚರ್ಚಿಸುವ ಸಂಬಂಧ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್, ಇದೇ 18ರಂದು ಸಭೆ ಕರೆದಿದ್ದಾರೆ.</p>.<p>ಗೃಹ ಸಚಿವಾಲಯ ಕಾರ್ಯದರ್ಶಿ ಗೋವಿಂದ ಮೋಹನ್, ಶಾಸಕಾಂಗ ಇಲಾಖೆ ಕಾರ್ಯದರ್ಶಿ ರಾಜೀವ್ ಮಣಿ ಹಾಗೂ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ಸಿಇಒ ಭುವನೇಶ ಕುಮಾರ್ ಅವರು ಕೂಡ ಸಭೆಯಲ್ಲಿ ಪಾಲ್ಗೊಳ್ಳುವರು.</p>.<p>ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಅಕ್ರಮ ಹಾಗೂ ಒಂದೇ ರೀತಿಯ ಸಂಖ್ಯೆವುಳ್ಳ ಮತದಾರರ ಗುರುತಿನ ಚೀಟಿಗಳ ಕುರಿತು ವ್ಯಾಪಕ ದೂರುಗಳು ಕೇಳಿ ಬಂದಿರುವ ಕಾರಣ, ಚುನಾವಣಾ ಆಯೋಗವು ಈ ಸಭೆ ಆಯೋಜಿಸಿದೆ ಎಂದು ಮೂಲಗಳು ಹೇಳಿವೆ.</p>.<p>ಸದ್ಯದ ಕಾನೂನು ಪ್ರಕಾರ, ಮತದಾರರು ಸ್ವ ಇಚ್ಛೆಯಿಂದ ಮಾತ್ರ ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಿಸಬಹುದಾಗಿದೆ.</p>.<p><strong>‘ನಿಗಾ ಇಡುತ್ತೇವೆ’</strong></p><p> ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸಭೆ ಕರೆದಿರುವ ಕುರಿತು ರಾಜ್ಯಸಭೆಯಲ್ಲಿನ ಟಿಎಂಸಿ ಉಪನಾಯಕಿ ಸಾಗರಿಕಾ ಘೋಷ್ ಪ್ರತಿಕ್ರಿಯಿಸಿದ್ದು, ‘ತಮ್ಮ ಮಾನ ಉಳಿಸುವಕೊಳ್ಳುವ ಉದ್ದೇಶದಿಂದ ಅವರು ಈ ಸಭೆ ಕರೆದಿದ್ದಾರೆ’ ಎಂದು ಹೇಳಿದ್ದಾರೆ.</p>.<p>‘ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಆರೋಪಗಳ ಕುರಿತು ಚುನಾವಣಾ ಆಯೋಗವು ಈ ವರೆಗೆ ಮೂರು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು, ಈಗ ಸಭೆ ಕರೆದಿದೆ. ಮುಂಬರುವ ಚುನಾವಣೆಗಳು ಮುಗಿಯುವವರೆಗೆ ನಾವು ನಿಗಾ ವಹಿಸುತ್ತೇವೆ’ ಎಂದೂ ಹೇಳಿದ್ದಾರೆ.</p>.<p>ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಸಲಹೆಗಳನ್ನು ನೀಡುವಂತೆ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳನ್ನು ಕೋರಿರುವ ಆಯೋಗ, ಪರಸ್ಪರರಿಗೆ ಅನುಕೂಲವಾಗುವ ದಿನಾಂಕದಂದು ಸಭೆ ನಡೆಸುವುದಾಗಿ ಇತ್ತೀಚೆಗೆ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>