<p><strong>ನವದೆಹಲಿ:</strong> ಲೋಕಸಭಾ ಚುನಾವಣೆ ಪ್ರಕ್ರಿಯೆ ಮೇಲೆ ಪ್ರಭಾವ ಬೀರುವ ಪ್ರಯತ್ನಗಳು ನಡೆದಿವೆ ಎಂದು ವಿರೋಧ ಪಕ್ಷಗಳು ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ದೂರುಗಳಿಗೆ ಸಂಬಂಧಿಸಿದಂತೆ ಪುರಾವೆಗಳಿದ್ದರೆ ಒದಗಿಸುವಂತೆ ಸವಾಲು ಹಾಕಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾಧಿಕಾರಿಗಳ ಮೇಲೆ ಪ್ರಭಾವ ಬೀರಲಾಗಿದೆ ಎಂದು ಆರೋಪಿಸುತ್ತಿರುವವರು, ಆ ಜಿಲ್ಲಾಧಿಕಾರಿಗಳ ಹೆಸರನ್ನು ಹೇಳಿದರೆ ನಮಗೆ ಶಿಕ್ಷಿಸಲು ಸಾಧ್ಯವಾಗುತ್ತದೆ. ಮತ ಎಣಿಕೆ ಪ್ರಕ್ರಿಯೆ ಆರಂಭವಾಗುವ ಮುನ್ನ ನಮ್ಮ ಜತೆ ಮಾಹಿತಿ ಹಂಚಿಕೊಳ್ಳಬೇಕು. ವದಂತಿಯನ್ನು ಹರಡಿ ಎಲ್ಲರನ್ನೂ ಅನುಮಾನದಿಂದ ನೋಡುವ ಹಾಗೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾಧಿಕಾರಿಯೂ ಆಗಿರುವ 150 ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಾಡಿದ ಆರೋಪವನ್ನು ಉಲ್ಲೇಖಿಸಿದ ಅವರು, ‘ನಿರ್ದಿಷ್ಟ ದೂರುಗಳ ಮೇಲೆ ಕ್ರಮ ಕೈಗೊಳ್ಳಲು ಪುರಾವೆಗಳನ್ನು ಒದಗಿಸಿ’ ಎಂದರು.</p>.<p>ಚುನಾವಣೆ ಅವಧಿಯಲ್ಲಿ ಮತದಾರರ ಪಟ್ಟಿ, ಇವಿಎಂಗಳಿಗೆ ಸಂಬಂಧಿಸಿದಂತೆ ಹರಡಿದ ‘ಸುಳ್ಳು ನಿರೂಪಣೆ’ಗಳನ್ನು ಸಮರ್ಥವಾಗಿ ಎದುರಿಸಲು ಆಯೋಗಕ್ಕೆ ಸಾಧ್ಯವಾಗಲಿಲ್ಲ ಎಂಬುದನ್ನು ಅವರು ಒಪ್ಪಿಕೊಂಡರು.</p>.<p>‘ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ವಿದೇಶದಿಂದ ನಡೆಸುವ ಯಾವುದೇ ರೀತಿಯ ಪ್ರಯತ್ನಗಳನ್ನು ಎದುರಿಸಲು ಆಯೋಗವು ಎಲ್ಲ ಸಿದ್ಧತೆಗಳನ್ನು ಮಾಡಿತ್ತು. ಆದರೆ ನಮಗೆ ದೇಶದ ಒಳಗಿನಿಂದಲೇ ಆರೋಪಗಳನ್ನು ಕೇಳಬೇಕಾಗಿ ಬಂತು. ಇದನ್ನು ಎದುರಿಸಲು (ಸುಳ್ಳು ನಿರೂಪಣೆ) ನಾವು ಇನ್ನಷ್ಟು ಸಿದ್ಧರಿರಬೇಕು’ ಎಂದರು.</p>.<p>ಮತ ಎಣಿಕೆಗೆ ಸಂಬಂಧಿಸಿದಂತೆ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಮುಂದಿಟ್ಟಿರುವ ಎಲ್ಲ ಬೇಡಿಕೆಗಳನ್ನು ಸ್ವೀಕರಿಸಿದ್ದೇವೆ ಎಂದು ತಿಳಿಸಿದರು. ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಎಸ್.ಎಸ್.ಸಂಧು ಅವರೂ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭಾ ಚುನಾವಣೆ ಪ್ರಕ್ರಿಯೆ ಮೇಲೆ ಪ್ರಭಾವ ಬೀರುವ ಪ್ರಯತ್ನಗಳು ನಡೆದಿವೆ ಎಂದು ವಿರೋಧ ಪಕ್ಷಗಳು ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ದೂರುಗಳಿಗೆ ಸಂಬಂಧಿಸಿದಂತೆ ಪುರಾವೆಗಳಿದ್ದರೆ ಒದಗಿಸುವಂತೆ ಸವಾಲು ಹಾಕಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾಧಿಕಾರಿಗಳ ಮೇಲೆ ಪ್ರಭಾವ ಬೀರಲಾಗಿದೆ ಎಂದು ಆರೋಪಿಸುತ್ತಿರುವವರು, ಆ ಜಿಲ್ಲಾಧಿಕಾರಿಗಳ ಹೆಸರನ್ನು ಹೇಳಿದರೆ ನಮಗೆ ಶಿಕ್ಷಿಸಲು ಸಾಧ್ಯವಾಗುತ್ತದೆ. ಮತ ಎಣಿಕೆ ಪ್ರಕ್ರಿಯೆ ಆರಂಭವಾಗುವ ಮುನ್ನ ನಮ್ಮ ಜತೆ ಮಾಹಿತಿ ಹಂಚಿಕೊಳ್ಳಬೇಕು. ವದಂತಿಯನ್ನು ಹರಡಿ ಎಲ್ಲರನ್ನೂ ಅನುಮಾನದಿಂದ ನೋಡುವ ಹಾಗೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾಧಿಕಾರಿಯೂ ಆಗಿರುವ 150 ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಾಡಿದ ಆರೋಪವನ್ನು ಉಲ್ಲೇಖಿಸಿದ ಅವರು, ‘ನಿರ್ದಿಷ್ಟ ದೂರುಗಳ ಮೇಲೆ ಕ್ರಮ ಕೈಗೊಳ್ಳಲು ಪುರಾವೆಗಳನ್ನು ಒದಗಿಸಿ’ ಎಂದರು.</p>.<p>ಚುನಾವಣೆ ಅವಧಿಯಲ್ಲಿ ಮತದಾರರ ಪಟ್ಟಿ, ಇವಿಎಂಗಳಿಗೆ ಸಂಬಂಧಿಸಿದಂತೆ ಹರಡಿದ ‘ಸುಳ್ಳು ನಿರೂಪಣೆ’ಗಳನ್ನು ಸಮರ್ಥವಾಗಿ ಎದುರಿಸಲು ಆಯೋಗಕ್ಕೆ ಸಾಧ್ಯವಾಗಲಿಲ್ಲ ಎಂಬುದನ್ನು ಅವರು ಒಪ್ಪಿಕೊಂಡರು.</p>.<p>‘ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ವಿದೇಶದಿಂದ ನಡೆಸುವ ಯಾವುದೇ ರೀತಿಯ ಪ್ರಯತ್ನಗಳನ್ನು ಎದುರಿಸಲು ಆಯೋಗವು ಎಲ್ಲ ಸಿದ್ಧತೆಗಳನ್ನು ಮಾಡಿತ್ತು. ಆದರೆ ನಮಗೆ ದೇಶದ ಒಳಗಿನಿಂದಲೇ ಆರೋಪಗಳನ್ನು ಕೇಳಬೇಕಾಗಿ ಬಂತು. ಇದನ್ನು ಎದುರಿಸಲು (ಸುಳ್ಳು ನಿರೂಪಣೆ) ನಾವು ಇನ್ನಷ್ಟು ಸಿದ್ಧರಿರಬೇಕು’ ಎಂದರು.</p>.<p>ಮತ ಎಣಿಕೆಗೆ ಸಂಬಂಧಿಸಿದಂತೆ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಮುಂದಿಟ್ಟಿರುವ ಎಲ್ಲ ಬೇಡಿಕೆಗಳನ್ನು ಸ್ವೀಕರಿಸಿದ್ದೇವೆ ಎಂದು ತಿಳಿಸಿದರು. ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಎಸ್.ಎಸ್.ಸಂಧು ಅವರೂ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>