<p class="title"><strong>ನವದೆಹಲಿ:</strong> ಚುನಾವಣಾ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ವಿನಿಯೋಗಿಸುವ ಹಣಕ್ಕೆ ಮಿತಿ ಹೇರುವ ಕಾನೂನು ಮುಂದಿನ ದಿನಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ ಹೇಳಿದ್ದಾರೆ.</p>.<p class="title">ಚುನಾವಣಾ ಆಯುಕ್ತರಾಗಿ ಶನಿವಾರ ರಾವತ್ ಅವರ ಕರ್ತವ್ಯದಕೊನೆಯ ದಿನ. ಈ ಸಲುವಾಗಿ ಪಿಟಿಐ ನಡೆಸಿದ ಸಂದರ್ಶನದಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ.</p>.<p class="title">‘ಈ ವಿಚಾರವಾಗಿ ಚರ್ಚಿಸಲೆಂದೇ ಆಗಸ್ಟ್ನಲ್ಲಿ ಸರ್ವ ಪಕ್ಷಗಳ ಸಭೆ ಕರೆಯಲಾಗಿತ್ತು. ಚುನಾವಣಾ ಪ್ರಚಾರ ಕಾರ್ಯಗಳಿಗೆ ಪಕ್ಷಗಳು ಮಾಡುವ ವೆಚ್ಚಕ್ಕೆ ಗರಿಷ್ಠ ಮಿತಿ ಇರಬೇಕು ಎಂಬುದಕ್ಕೆ ಸಭೆಯಲ್ಲಿ ಒಮ್ಮತ ವ್ಯಕ್ತವಾಗಿತ್ತು. ಈ ಸಂಬಂಧ ಸಮಿತಿಯೊಂದನ್ನು ರಚಿಸಲಾಗಿತ್ತು. ಅದು ಈಗಾಗಲೇ ಶಿಫಾರಸುಗಳನ್ನು ನೀಡಿದೆ. ಆದರೆ ಅವನ್ನು ಪರಿಶೀಲಿಸಿ, ಕಾನೂನು ಸಚಿವಾಲಯಕ್ಕೆ ತಲುಪಿಸಲು ಆಯೋಗಕ್ಕೆ ಸಾಧ್ಯವಾಗಿಲ್ಲ. ಆದರೆ ಶೀಘ್ರವೇ ಆ ಕೆಲಸ ಆಗಲಿದೆ’ ಎಂದು ರಾವತ್ ಹೇಳಿದ್ದಾರೆ.</p>.<p class="title">**</p>.<p class="title">ಈ ಕಾನೂನು ಜಾರಿಯಾಗಬೇಕು ಎಂದು ಬಹಳ ವರ್ಷಗಳಿಂದ ಬೇಡಿಕೆಯಿದೆ. ನನ್ನ ಅವಧಿಯಲ್ಲಿ ಜಾರಿಗೆ ತರಲು ಸಾಧ್ಯವಾಗಲಿಲ್ಲವಲ್ಲಾ ಎಂಬ ಬೇಸರ ಕಾಡುತ್ತಿದೆ.</p>.<p class="title"><em><strong>-ಒ.ಪಿ.ರಾವತ್, ನಿರ್ಗಮಿತ ಮುಖ್ಯ ಚುನಾವಣಾ ಆಯುಕ್ತ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಚುನಾವಣಾ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ವಿನಿಯೋಗಿಸುವ ಹಣಕ್ಕೆ ಮಿತಿ ಹೇರುವ ಕಾನೂನು ಮುಂದಿನ ದಿನಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ ಹೇಳಿದ್ದಾರೆ.</p>.<p class="title">ಚುನಾವಣಾ ಆಯುಕ್ತರಾಗಿ ಶನಿವಾರ ರಾವತ್ ಅವರ ಕರ್ತವ್ಯದಕೊನೆಯ ದಿನ. ಈ ಸಲುವಾಗಿ ಪಿಟಿಐ ನಡೆಸಿದ ಸಂದರ್ಶನದಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ.</p>.<p class="title">‘ಈ ವಿಚಾರವಾಗಿ ಚರ್ಚಿಸಲೆಂದೇ ಆಗಸ್ಟ್ನಲ್ಲಿ ಸರ್ವ ಪಕ್ಷಗಳ ಸಭೆ ಕರೆಯಲಾಗಿತ್ತು. ಚುನಾವಣಾ ಪ್ರಚಾರ ಕಾರ್ಯಗಳಿಗೆ ಪಕ್ಷಗಳು ಮಾಡುವ ವೆಚ್ಚಕ್ಕೆ ಗರಿಷ್ಠ ಮಿತಿ ಇರಬೇಕು ಎಂಬುದಕ್ಕೆ ಸಭೆಯಲ್ಲಿ ಒಮ್ಮತ ವ್ಯಕ್ತವಾಗಿತ್ತು. ಈ ಸಂಬಂಧ ಸಮಿತಿಯೊಂದನ್ನು ರಚಿಸಲಾಗಿತ್ತು. ಅದು ಈಗಾಗಲೇ ಶಿಫಾರಸುಗಳನ್ನು ನೀಡಿದೆ. ಆದರೆ ಅವನ್ನು ಪರಿಶೀಲಿಸಿ, ಕಾನೂನು ಸಚಿವಾಲಯಕ್ಕೆ ತಲುಪಿಸಲು ಆಯೋಗಕ್ಕೆ ಸಾಧ್ಯವಾಗಿಲ್ಲ. ಆದರೆ ಶೀಘ್ರವೇ ಆ ಕೆಲಸ ಆಗಲಿದೆ’ ಎಂದು ರಾವತ್ ಹೇಳಿದ್ದಾರೆ.</p>.<p class="title">**</p>.<p class="title">ಈ ಕಾನೂನು ಜಾರಿಯಾಗಬೇಕು ಎಂದು ಬಹಳ ವರ್ಷಗಳಿಂದ ಬೇಡಿಕೆಯಿದೆ. ನನ್ನ ಅವಧಿಯಲ್ಲಿ ಜಾರಿಗೆ ತರಲು ಸಾಧ್ಯವಾಗಲಿಲ್ಲವಲ್ಲಾ ಎಂಬ ಬೇಸರ ಕಾಡುತ್ತಿದೆ.</p>.<p class="title"><em><strong>-ಒ.ಪಿ.ರಾವತ್, ನಿರ್ಗಮಿತ ಮುಖ್ಯ ಚುನಾವಣಾ ಆಯುಕ್ತ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>