ಕಚೇರಿಯ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ಕುಣಿದು, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ‘ಜೈಲ್ ಕೆ ತಾಲೆ ಟೂಟ್ ಗಯೆ, ಕೇಜ್ರಿವಾಲ್ ಚೂಟ್ ಗಯೆ’ (ಜೈಲಿನ ಕಂಬಿಗಳು ಮುರಿದವು, ಕೇಜ್ರಿವಾಲ್ ಬಿಡುಗಡೆಯಾದರು) ಎಂದು ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು.
ಮಹತ್ವದ ಘಟನೆಯೊಂದರಲ್ಲಿ, ಲೋಕಸಭಾ ಚುನವಣಾ ಪ್ರಚಾರದಲ್ಲಿ ಭಾಗಿಯಾಗಲು ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1ರ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.