‘ರಾಜ್ಯದ ಜಾತಿ ಗಣತಿ ಭಿನ್ನ’
ದಾವಣಗೆರೆ: ಕೇಂದ್ರ ಸರ್ಕಾರ ಕೇವಲ ಆಯಾ ಜಾತಿಯ ಜನರ ಸಂಖ್ಯೆಯನ್ನು ಲೆಕ್ಕ ಹಾಕುತ್ತಿದೆ. ರಾಜ್ಯ ಸರ್ಕಾರ ಜಾತಿ ಗಣತಿಯ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಕೇಂದ್ರಕ್ಕಿಂತ ರಾಜ್ಯ ಸರ್ಕಾರ ನಡೆಸುವ ಜಾತಿ ಗಣತಿ ಭಿನ್ನವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ‘ಸಾಮಾಜಿಕ ನ್ಯಾಯಕ್ಕೆ ಜಾತಿಗಳ ಸ್ಥಿತಿಗತಿ ಅರ್ಥ ಮಾಡಿಕೊಳ್ಳುವುದು ಮುಖ್ಯ. ಇದಕ್ಕೆ ಜಾತಿಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ಗೊತ್ತಾಗಬೇಕು. ಇಲ್ಲವಾದರೆ ಸಾಮಾಜಿಕ ನ್ಯಾಯ ನೀಡುವುದು ಕಷ್ಟ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.