ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಜನಗಣತಿಗೆ ಮುಹೂರ್ತ: ಅಧಿಸೂಚನೆ ಹೊರಡಿಸಿದ ಕೇಂದ್ರದ ವಿರುದ್ಧ ಕಾಂಗ್ರೆಸ್‌ ಟೀಕೆ

Published : 16 ಜೂನ್ 2025, 14:42 IST
Last Updated : 16 ಜೂನ್ 2025, 14:42 IST
ಫಾಲೋ ಮಾಡಿ
Comments
‘ರಾಜ್ಯದ ಜಾತಿ ಗಣತಿ ಭಿನ್ನ’
ದಾವಣಗೆರೆ: ಕೇಂದ್ರ ಸರ್ಕಾರ ಕೇವಲ ಆಯಾ ಜಾತಿಯ ಜನರ ಸಂಖ್ಯೆಯನ್ನು ಲೆಕ್ಕ ಹಾಕುತ್ತಿದೆ. ರಾಜ್ಯ ಸರ್ಕಾರ ಜಾತಿ ಗಣತಿಯ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಕೇಂದ್ರಕ್ಕಿಂತ ರಾಜ್ಯ ಸರ್ಕಾರ ನಡೆಸುವ ಜಾತಿ ಗಣತಿ ಭಿನ್ನವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ‘ಸಾಮಾಜಿಕ ನ್ಯಾಯಕ್ಕೆ ಜಾತಿಗಳ ಸ್ಥಿತಿಗತಿ ಅರ್ಥ ಮಾಡಿಕೊಳ್ಳುವುದು ಮುಖ್ಯ. ಇದಕ್ಕೆ ಜಾತಿಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ಗೊತ್ತಾಗಬೇಕು. ಇಲ್ಲವಾದರೆ ಸಾಮಾಜಿಕ ನ್ಯಾಯ ನೀಡುವುದು ಕಷ್ಟ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.
ಜಾತಿ ಜನಗಣತಿಯ ಬೇಡಿಕೆಗೆ ಪ್ರಧಾನಿ ಶರಣಾಗಲು ಕಾಂಗ್ರೆಸ್‌ನ ಹಠ ಮತ್ತು ಒತ್ತಾಯವೇ ಕಾರಣ. ಈ ಬೇಡಿಕೆಯನ್ನು ಮಂಡಿಸಿದ್ದಕ್ಕಾಗಿ ಪ್ರಧಾನಿ ಅವರು ಕಾಂಗ್ರೆಸ್ ನಾಯಕರನ್ನು ನಗರ ನಕ್ಸಲರು ಎಂದು ಕರೆದಿದ್ದರು. ಜಾತಿ ಎಣಿಕೆಗೆ ಮಾತ್ರವಲ್ಲದೆ ಸಾಮಾಜಿಕ-ಆರ್ಥಿಕ ಅಂಶಗಳ ದತ್ತಾಂಶ ಸಂಗ್ರಹಿಸಲು ಕೇಂದ್ರ ಸರ್ಕಾರವು ತೆಲಂಗಾಣ ಮಾದರಿ ಅಳವಡಿಸಿಕೊಳ್ಳಬೇಕು.
ಜೈರಾಮ್‌ ರಮೇಶ್‌, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT