ಸರ್ವೇ ಆಫ್ ಇಂಡಿಯಾ ಅಧಿಕಾರಿಗಳು ಉಭಯ ರಾಜ್ಯಗಳ ಅಧಿಕಾರಿಗಳೊಂದಿಗೆ ಕಳೆದ ತಿಂಗಳು ಅಂತರರಾಜ್ಯ ಗಡಿಯಲ್ಲಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿತ್ತು. ನಂತರ, ಸರ್ವೇಯರ್ ಜನರಲ್ ನೀಡಿದ ಅಂತಿಮ ವರದಿಯಲ್ಲಿರುವ ಕೆಲವು ಅಂಶಗಳ ಕುರಿತು ಆಂಧ್ರಪ್ರದೇಶ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ಕರ್ನಾಟಕ ಸರ್ಕಾರ ವರದಿಯನ್ನು ಒಪ್ಪಿಕೊಂಡಿದೆ.