<p><strong>ನವದೆಹಲಿ:</strong> ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 15ನೇ ದಿನಕ್ಕೆ ಕಾಲಿಟ್ಟಿದೆ. ಇದೇ 14ರಂದು ದೇಶದಾದ್ಯಂತ ಪ್ರತಿಭಟನೆಗೆಕರೆ ನೀಡಲಾಗಿದೆ.</p>.<p>ಈ ಮಧ್ಯೆ ಡಿಸೆಂಬರ್ 10 ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಂದು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪ ಮಾಡಿದರು.</p>.<p>'ಕೇಂದ್ರ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಇದು ಮಾನವೀಯತೆಯ ವಿರುದ್ಧದ ಅಪರಾಧ' ಎಂದು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡರು.</p>.<p>ಇದನ್ನೂ ಓದಿ:<a href="https://www.prajavani.net/india-news/stones-hurled-at-j-p-naddas-convoy-vijayvargiyas-vehicle-ransacked-785943.html" itemprop="url">ಬಿಜೆಪಿ ಅಧ್ಯಕ್ಷ ನಡ್ಡಾ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ </a></p>.<p>'ದೇಶದ ಉತ್ತಮ ಭವಿಷ್ಯಕ್ಕಾಗಿ, ನಾವು ಎಲ್ಲ ವರ್ಗದ ಜನರ ಹಕ್ಕುಗಳನ್ನು ಗೌರವಿಸಬೇಕು' ಎಂದು ಹೇಳಿದರು.</p>.<p>ಈ ಮೊದಲು ಹೇಳಿಕೆ ಕೊಟ್ಟಿರುವ ರಾಹುಲ್ ಗಾಂಧಿ, 'ಸರ್ಕಾರ ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಬಯಸುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದರು.</p>.<p>ರೈತರ ಪ್ರತಿಭಟನೆಯ ಒತ್ತಡಕ್ಕೆ ಮಣಿದ ಸರ್ಕಾರ ಕೃಷಿ ಕ್ಷೇತ್ರದ ಸುಧಾರಣೆಗೆ ಇತ್ತೀಚೆಗೆ ಮೂರು ಕಾಯ್ದೆಗಳಲ್ಲಿ ಗಮನಾರ್ಹವಾದ ತಿದ್ದುಪಡಿ ತರುವ ಪ್ರಸ್ತಾಪ ಮುಂದಿಟ್ಟಿತ್ತು. ಆದರೆ ಮೂರು ಕಾಯ್ದೆಗಳನ್ನು ರದ್ದುಪಡಿಸಬೇಕು ಎಂಬ ರೈತರ ಆಗ್ರಹವನ್ನು ತಿರಸ್ಕರಿಸಿದೆ. ಸರ್ಕಾರದ ಪ್ರಸ್ತಾವವನ್ನು ಪ್ರತಿಭಟನಾನಿರತ ರೈತರು ತಿರಸ್ಕರಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/need-to-avoid-actions-that-may-complicate-situation-rajnath-singh-785924.html" itemprop="url">ಪರಿಸ್ಥಿತಿ ಸಂಕೀರ್ಣಗೊಳಿಸುವ ಚಟುವಟಿಕೆ ಬೇಡ: ರಾಜನಾಥ್ ಸಿಂಗ್ </a></p>.<p><strong>ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಮನವಿ</strong><br />ಏತನ್ಮಧ್ಯೆ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಗುರುವಾರದಂದು ರೈತರಿಗೆ ಮನವಿ ಮಾಡಲಿದ್ದಾರೆ. ಈ ಬಿಕ್ಕಟ್ಟನ್ನು ಕೊನೆಗೊಳಿಸಲು ಸರ್ಕಾರದೊಂದಿಗೆ ಕೆಲಸ ಮಾಡುವಂತೆ ತೋಮರ್ ಕರೆ ನೀಡಲಿದ್ದು, ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಲಿದ್ದಾರೆ ಎಂಬುದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 15ನೇ ದಿನಕ್ಕೆ ಕಾಲಿಟ್ಟಿದೆ. ಇದೇ 14ರಂದು ದೇಶದಾದ್ಯಂತ ಪ್ರತಿಭಟನೆಗೆಕರೆ ನೀಡಲಾಗಿದೆ.</p>.<p>ಈ ಮಧ್ಯೆ ಡಿಸೆಂಬರ್ 10 ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಂದು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪ ಮಾಡಿದರು.</p>.<p>'ಕೇಂದ್ರ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಇದು ಮಾನವೀಯತೆಯ ವಿರುದ್ಧದ ಅಪರಾಧ' ಎಂದು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡರು.</p>.<p>ಇದನ್ನೂ ಓದಿ:<a href="https://www.prajavani.net/india-news/stones-hurled-at-j-p-naddas-convoy-vijayvargiyas-vehicle-ransacked-785943.html" itemprop="url">ಬಿಜೆಪಿ ಅಧ್ಯಕ್ಷ ನಡ್ಡಾ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ </a></p>.<p>'ದೇಶದ ಉತ್ತಮ ಭವಿಷ್ಯಕ್ಕಾಗಿ, ನಾವು ಎಲ್ಲ ವರ್ಗದ ಜನರ ಹಕ್ಕುಗಳನ್ನು ಗೌರವಿಸಬೇಕು' ಎಂದು ಹೇಳಿದರು.</p>.<p>ಈ ಮೊದಲು ಹೇಳಿಕೆ ಕೊಟ್ಟಿರುವ ರಾಹುಲ್ ಗಾಂಧಿ, 'ಸರ್ಕಾರ ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಬಯಸುತ್ತಿದೆ' ಎಂದು ವಾಗ್ದಾಳಿ ನಡೆಸಿದ್ದರು.</p>.<p>ರೈತರ ಪ್ರತಿಭಟನೆಯ ಒತ್ತಡಕ್ಕೆ ಮಣಿದ ಸರ್ಕಾರ ಕೃಷಿ ಕ್ಷೇತ್ರದ ಸುಧಾರಣೆಗೆ ಇತ್ತೀಚೆಗೆ ಮೂರು ಕಾಯ್ದೆಗಳಲ್ಲಿ ಗಮನಾರ್ಹವಾದ ತಿದ್ದುಪಡಿ ತರುವ ಪ್ರಸ್ತಾಪ ಮುಂದಿಟ್ಟಿತ್ತು. ಆದರೆ ಮೂರು ಕಾಯ್ದೆಗಳನ್ನು ರದ್ದುಪಡಿಸಬೇಕು ಎಂಬ ರೈತರ ಆಗ್ರಹವನ್ನು ತಿರಸ್ಕರಿಸಿದೆ. ಸರ್ಕಾರದ ಪ್ರಸ್ತಾವವನ್ನು ಪ್ರತಿಭಟನಾನಿರತ ರೈತರು ತಿರಸ್ಕರಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/need-to-avoid-actions-that-may-complicate-situation-rajnath-singh-785924.html" itemprop="url">ಪರಿಸ್ಥಿತಿ ಸಂಕೀರ್ಣಗೊಳಿಸುವ ಚಟುವಟಿಕೆ ಬೇಡ: ರಾಜನಾಥ್ ಸಿಂಗ್ </a></p>.<p><strong>ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಮನವಿ</strong><br />ಏತನ್ಮಧ್ಯೆ ಪ್ರತಿಭಟನೆಯನ್ನು ಅಂತ್ಯಗೊಳಿಸುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಗುರುವಾರದಂದು ರೈತರಿಗೆ ಮನವಿ ಮಾಡಲಿದ್ದಾರೆ. ಈ ಬಿಕ್ಕಟ್ಟನ್ನು ಕೊನೆಗೊಳಿಸಲು ಸರ್ಕಾರದೊಂದಿಗೆ ಕೆಲಸ ಮಾಡುವಂತೆ ತೋಮರ್ ಕರೆ ನೀಡಲಿದ್ದು, ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಲಿದ್ದಾರೆ ಎಂಬುದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>