ಘಟನೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಮೂವರು ಮಂದಿಗೆ ಗಾಯವಾಗಿದೆ. ಪ್ರಕರಣದ ಸಾಕ್ಷ್ಯಗಳನ್ನು ರಕ್ಷಿಸುವ ದೃಷ್ಟಿಯಿಂದ ರಾಜ್ಯದ ಪೊಲೀಸರನ್ನು ನಂಬಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಹುಲ್ ಮಾಂಕೂಟ್ಟತ್ತಿಲ್, ‘ಬಾಂಬ್ ತಯಾರಿಕೆಯು ಗಂಭೀರ ಸಮಸ್ಯೆಯಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಪೊಲೀಸರು ಸಾಕ್ಷ್ಯಗಳನ್ನು ನಾಶಪಡಿಸದಂತೆ ನೋಡಿಕೊಳ್ಳಲು ಕೇಂದ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಅಗತ್ಯವಿದೆ’ ಎಂದು ಹೇಳಿದ್ದಾರೆ.
ಘಟನೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಮುಸ್ಲಿಂ ಯೂತ್ ಲೀಗ್ನ ಕೇರಳ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಕೆ ಫಿರೋಸ್, ‘ಪೊಲೀಸರು ಪ್ರಕರಣದ ವಿವರಗಳನ್ನು ಹಾಗೂ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ಸ್ಥಿತಿಯನ್ನು ಮರೆಮಾಚುತ್ತಿದ್ದಾರೆ. ಹೀಗಾಗಿ ಪೊಲೀಸರು ಸೂಕ್ತ ತನಿಖೆ ನಡೆಸದಿರುವ ಆತಂಕವಿದೆ ಎಂದು ಆರೋಪಿಸಿದ್ದಾರೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.