<p><strong>ನವದೆಹಲಿ</strong>:ಪ್ರಾಧ್ಯಾಪಕರ ನೇರ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲು ಇಡೀ ವಿಶ್ವವಿದ್ಯಾಲಯ ಅಥವಾ ಕಾಲೇಜನ್ನು ಒಂದು ಘಟಕವಾಗಿ ಪರಿಗಣಿಸುವ ಹಳೆಯ ಪದ್ಧತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಕೇಂದ್ರ ಸಚಿವ ಸಂಪುಟವು ಗುರುವಾರ ಒಪ್ಪಿಗೆ ಸೂಚಿಸಿದೆ.</p>.<p>ಈ ಮೂಲಕ ‘ಕೇಂದ್ರೀಯ ಶೈಕ್ಷಣಿಕ ಸಂಸ್ಥೆಗಳ (ಶಿಕ್ಷಕರ ಕೇಡರ್ನಲ್ಲಿ ಮೀಸಲಾತಿ) ಸುಗ್ರೀವಾಜ್ಞೆ–2019’ನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.</p>.<p>ಇಡೀ ವಿಶ್ವವಿದ್ಯಾಲಯವನ್ನೇ ಒಂದು ಘಟಕ ಎಂದು ಪರಿಗಣಿಸುವ ಪದ್ಧತಿಯನ್ನು ಅಲಹಾಬಾದ್ ಹೈಕೋರ್ಟ್ 2017ರ ಏಪ್ರಿಲ್ನಲ್ಲಿ ರದ್ದುಪಡಿಸಿತ್ತು. ಬದಲಿಗೆ ವಿಶ್ವವಿದ್ಯಾಲಯದ ಪ್ರತಿ ವಿಭಾಗವನ್ನು ಮೂಲ ಘಟಕವನ್ನಾಗಿ ಪರಿಗಣಿಸಬೇಕು. ಮೀಸಲಾತಿಯನ್ನು ಆ ಮಟ್ಟದಲ್ಲೇ ನಿರ್ಧರಿಸಬೇಕು ಎಂದು ಹೈಕೋರ್ಟ್ ಹೇಳಿತ್ತು. ಈ ಆದೇಶದ ಆಧಾರದಲ್ಲೇ ಮೀಸಲಾತಿಯನ್ನು ಲೆಕ್ಕಹಾಕಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗವು ಸುತ್ತೋಲೆ ಹೊರಡಿಸಿತ್ತು.</p>.<p>ಈ ನಿರ್ಧಾರಕ್ಕೆ ದಲಿತ ಮತ್ತು ಇತರೆ ಹಿಂದುಳಿದ ವರ್ಗಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ನಂತರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು.</p>.<p class="Subhead"><strong>ನೇಮಕಾತಿ ಆರಂಭಿಸಿ: </strong>ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವುದರಿಂದ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಯುಜಿಸಿ ಎಲ್ಲ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದಿದೆ.</p>.<p class="Subhead">ರಾಜ್ಯಕ್ಕೆ ಎರಡು ಕೇಂದ್ರೀಯ ವಿದ್ಯಾಲಯ</p>.<p>ಕರ್ನಾಟಕದಲ್ಲಿ 2 ಕೇಂದ್ರೀಯ ವಿದ್ಯಾಲಯಗಳನ್ನು ಆರಂಭಿಸಲು ಒಪ್ಪಿಗೆ ದೊರೆತಿದೆ. ಬೆಂಗಳೂರಿನ ಯಶವಂತಪುರ ಮತ್ತು ಬೆಳಗಾವಿಯ ಸದಲಗದಲ್ಲಿ ಒಂದೊಂದು ಕೇಂದ್ರೀಯ ವಿದ್ಯಾಲಯಗಳನ್ನುಆರಂಭಿಸಲಾಗುತ್ತದೆ.</p>.<p>ದೇಶದ ಹಲವೆಡೆ ನೂತನವಾಗಿ 50 ಕೇಂದ್ರೀಯ ವಿದ್ಯಾಲಯಗಳು ಆರಂಭವಾಗಲಿವೆ</p>.<p>*ದೇಶದ ಬೇರೆಬೇರೆ ವಿಶ್ವವಿದ್ಯಾಲಯಗಳಲ್ಲಿ ತೆರವಾಗಿರುವ 5,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಈ ಸುಗ್ರೀವಾಜ್ಞೆಯಿಂದ ನೆರವಾಗಲಿದೆ</p>.<p><em><strong>- ಪ್ರಕಾಶ್ ಜಾವಡೇಕರ್, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ಪ್ರಾಧ್ಯಾಪಕರ ನೇರ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲು ಇಡೀ ವಿಶ್ವವಿದ್ಯಾಲಯ ಅಥವಾ ಕಾಲೇಜನ್ನು ಒಂದು ಘಟಕವಾಗಿ ಪರಿಗಣಿಸುವ ಹಳೆಯ ಪದ್ಧತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಕೇಂದ್ರ ಸಚಿವ ಸಂಪುಟವು ಗುರುವಾರ ಒಪ್ಪಿಗೆ ಸೂಚಿಸಿದೆ.</p>.<p>ಈ ಮೂಲಕ ‘ಕೇಂದ್ರೀಯ ಶೈಕ್ಷಣಿಕ ಸಂಸ್ಥೆಗಳ (ಶಿಕ್ಷಕರ ಕೇಡರ್ನಲ್ಲಿ ಮೀಸಲಾತಿ) ಸುಗ್ರೀವಾಜ್ಞೆ–2019’ನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.</p>.<p>ಇಡೀ ವಿಶ್ವವಿದ್ಯಾಲಯವನ್ನೇ ಒಂದು ಘಟಕ ಎಂದು ಪರಿಗಣಿಸುವ ಪದ್ಧತಿಯನ್ನು ಅಲಹಾಬಾದ್ ಹೈಕೋರ್ಟ್ 2017ರ ಏಪ್ರಿಲ್ನಲ್ಲಿ ರದ್ದುಪಡಿಸಿತ್ತು. ಬದಲಿಗೆ ವಿಶ್ವವಿದ್ಯಾಲಯದ ಪ್ರತಿ ವಿಭಾಗವನ್ನು ಮೂಲ ಘಟಕವನ್ನಾಗಿ ಪರಿಗಣಿಸಬೇಕು. ಮೀಸಲಾತಿಯನ್ನು ಆ ಮಟ್ಟದಲ್ಲೇ ನಿರ್ಧರಿಸಬೇಕು ಎಂದು ಹೈಕೋರ್ಟ್ ಹೇಳಿತ್ತು. ಈ ಆದೇಶದ ಆಧಾರದಲ್ಲೇ ಮೀಸಲಾತಿಯನ್ನು ಲೆಕ್ಕಹಾಕಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗವು ಸುತ್ತೋಲೆ ಹೊರಡಿಸಿತ್ತು.</p>.<p>ಈ ನಿರ್ಧಾರಕ್ಕೆ ದಲಿತ ಮತ್ತು ಇತರೆ ಹಿಂದುಳಿದ ವರ್ಗಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ನಂತರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು.</p>.<p class="Subhead"><strong>ನೇಮಕಾತಿ ಆರಂಭಿಸಿ: </strong>ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವುದರಿಂದ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಯುಜಿಸಿ ಎಲ್ಲ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದಿದೆ.</p>.<p class="Subhead">ರಾಜ್ಯಕ್ಕೆ ಎರಡು ಕೇಂದ್ರೀಯ ವಿದ್ಯಾಲಯ</p>.<p>ಕರ್ನಾಟಕದಲ್ಲಿ 2 ಕೇಂದ್ರೀಯ ವಿದ್ಯಾಲಯಗಳನ್ನು ಆರಂಭಿಸಲು ಒಪ್ಪಿಗೆ ದೊರೆತಿದೆ. ಬೆಂಗಳೂರಿನ ಯಶವಂತಪುರ ಮತ್ತು ಬೆಳಗಾವಿಯ ಸದಲಗದಲ್ಲಿ ಒಂದೊಂದು ಕೇಂದ್ರೀಯ ವಿದ್ಯಾಲಯಗಳನ್ನುಆರಂಭಿಸಲಾಗುತ್ತದೆ.</p>.<p>ದೇಶದ ಹಲವೆಡೆ ನೂತನವಾಗಿ 50 ಕೇಂದ್ರೀಯ ವಿದ್ಯಾಲಯಗಳು ಆರಂಭವಾಗಲಿವೆ</p>.<p>*ದೇಶದ ಬೇರೆಬೇರೆ ವಿಶ್ವವಿದ್ಯಾಲಯಗಳಲ್ಲಿ ತೆರವಾಗಿರುವ 5,000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಈ ಸುಗ್ರೀವಾಜ್ಞೆಯಿಂದ ನೆರವಾಗಲಿದೆ</p>.<p><em><strong>- ಪ್ರಕಾಶ್ ಜಾವಡೇಕರ್, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>