<p><strong>ನವದೆಹಲಿ:</strong> ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ.</p><p>ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.</p>.7ನೇ ವೇತನ ಆಯೋಗ: ನಿವೃತ್ತ ಸರ್ಕಾರಿ ನೌಕರರಿಗೆ ಅನ್ಯಾಯ.<p>2016ರಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗಿತ್ತು. 2026ರಲ್ಲಿ ಅದರ ಅವಧಿ ಅಂತ್ಯವಾಗಲಿದೆ.</p><p>ಆಯೋಗದ ಅಧ್ಯಕ್ಷ ಹಾಗೂ ಇಬ್ಬರು ಸದಸ್ಯರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ವೈಷ್ಣವ್ ತಿಳಿಸಿದ್ದಾರೆ.</p> .ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5ರಷ್ಟು ಹೆಚ್ಚಳಕ್ಕೆ ಶಿಫಾರಸು.<p>ಏಳನೇ ವೇತನ ಆಯೋಗದ ಅವಧಿ ಪೂರ್ಣಗೊಳ್ಳುವ ಮೊದಲೇ ಶಿಫಾರಸುಗಳನ್ನು ಸ್ವೀಕರಿಸಲು ಸರ್ಕಾರವು ಈ ನಿರ್ಧಾರವನ್ನು ಬಹಳ ಮುಂಚಿತವಾಗಿ ತೆಗೆದುಕೊಂಡಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. </p><p>ದೆಹಲಿ ಸರ್ಕಾರದ ನೌಕರರ ವೇತನವೂ ಪರಿಷ್ಕರಣೆ ಆಗಲಿದೆ. ಆಯೋಗದ ಶಿಫಾರಸುಗಳು ಜಾರಿಯಾದ ಬಳಿಕ ಕೇಂದ್ರ ಹಾಗೂ ದೆಹಲಿ ರಾಜ್ಯ ಸರ್ಕಾರದ 4 ಲಕ್ಷ ನೌಕರರ ವೇತನ ಪರಿಷ್ಕರಣೆ ಆಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರ ನೌಕರರ ವೇತನ ಹಾಗೂ ಪಿಂಚಣಿದಾರ ಭತ್ಯೆಗಳ ಪರಿಷ್ಕರಣೆಗೆ 8ನೇ ವೇತನ ಆಯೋಗ ರಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಗುರುವಾರ ತೆಗೆದುಕೊಂಡಿದೆ.</p><p>ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.</p>.7ನೇ ವೇತನ ಆಯೋಗ: ನಿವೃತ್ತ ಸರ್ಕಾರಿ ನೌಕರರಿಗೆ ಅನ್ಯಾಯ.<p>2016ರಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗಿತ್ತು. 2026ರಲ್ಲಿ ಅದರ ಅವಧಿ ಅಂತ್ಯವಾಗಲಿದೆ.</p><p>ಆಯೋಗದ ಅಧ್ಯಕ್ಷ ಹಾಗೂ ಇಬ್ಬರು ಸದಸ್ಯರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ವೈಷ್ಣವ್ ತಿಳಿಸಿದ್ದಾರೆ.</p> .ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5ರಷ್ಟು ಹೆಚ್ಚಳಕ್ಕೆ ಶಿಫಾರಸು.<p>ಏಳನೇ ವೇತನ ಆಯೋಗದ ಅವಧಿ ಪೂರ್ಣಗೊಳ್ಳುವ ಮೊದಲೇ ಶಿಫಾರಸುಗಳನ್ನು ಸ್ವೀಕರಿಸಲು ಸರ್ಕಾರವು ಈ ನಿರ್ಧಾರವನ್ನು ಬಹಳ ಮುಂಚಿತವಾಗಿ ತೆಗೆದುಕೊಂಡಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. </p><p>ದೆಹಲಿ ಸರ್ಕಾರದ ನೌಕರರ ವೇತನವೂ ಪರಿಷ್ಕರಣೆ ಆಗಲಿದೆ. ಆಯೋಗದ ಶಿಫಾರಸುಗಳು ಜಾರಿಯಾದ ಬಳಿಕ ಕೇಂದ್ರ ಹಾಗೂ ದೆಹಲಿ ರಾಜ್ಯ ಸರ್ಕಾರದ 4 ಲಕ್ಷ ನೌಕರರ ವೇತನ ಪರಿಷ್ಕರಣೆ ಆಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>