<p><strong>ಧಾರವಾಡ: </strong>ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಬೆಳಗಾವಿಯಲ್ಲಿರುವ ಕೇಂದ್ರ ಅಬಕಾರಿ ಮತ್ತು ತೆರಿಗೆ (ಜಿಎಸ್ಟಿ) ಕಮಿಷನರೇಟ್ ಕಚೇರಿಯ ಮೂವರು ಅಧಿಕಾರಿಗಳನ್ನು ಇದೇ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಆದೇಶಿಸಿದೆ.</p>.<p>ಇನ್ಸ್ಟೆಕ್ಟರ್ ವೈಭವ ಗೋಯಲ್, ಸೂಪರಿಟೆಂಡೆಂಟ್ ಸುರೇಶ ಜಡಗಿ ಮತ್ತು ಡೆಪ್ಯುಟಿ ಸುಪರಿಟೆಂಡೆಂಟ್ ಮೋಹನಕುಮಾರ್ ಅವರೇ ಬಂಧಿತರು.</p>.<p>ಜಿಎಸ್ಟಿ ಕಡಿಮೆ ಮಾಡಲು ಈ ಅಧಿಕಾರಿಗಳು ₹20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಆರ್.ಎನ್. ಪಾನ್ಮಸಾಲಾ ಕಂಪನಿ ಮಾಲೀಕ ರಾಜಲಕ್ಷ್ಮಣ ಎನ್ನುವವರು ಬೆಂಗಳೂರಿನ ಸಿಬಿಐ ಕಚೇರಿಗೆ ದೂರು ನೀಡಿದ್ದರು. ಬುಧವಾರ ಬೆಳಗಾವಿಗೆ ಬಂದ ಸಿಬಿಐ ತಂಡ, ಭ್ರಷ್ಟಾಚಾರ ನಿಗ್ರಹ ದಳದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದರು. ದೂರುದಾರರಿಂದ ₹5 ಲಕ್ಷ ಹಣ ಸ್ವೀಕರಿಸುವಾಗಆರೋಪಿಗಳನ್ನು ಬಂಧಿಸಲಾಗಿತ್ತು.</p>.<p>ಗುರುವಾರ ಆರೋಪಿಗಳನ್ನು ಇಲ್ಲಿನ 3ನೇ ಹೆಚ್ಚುವರಿ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಈ ಮಧ್ಯೆ, ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ತಕರಾರು ಅರ್ಜಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಬೆಳಗಾವಿಯಲ್ಲಿರುವ ಕೇಂದ್ರ ಅಬಕಾರಿ ಮತ್ತು ತೆರಿಗೆ (ಜಿಎಸ್ಟಿ) ಕಮಿಷನರೇಟ್ ಕಚೇರಿಯ ಮೂವರು ಅಧಿಕಾರಿಗಳನ್ನು ಇದೇ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯ ಆದೇಶಿಸಿದೆ.</p>.<p>ಇನ್ಸ್ಟೆಕ್ಟರ್ ವೈಭವ ಗೋಯಲ್, ಸೂಪರಿಟೆಂಡೆಂಟ್ ಸುರೇಶ ಜಡಗಿ ಮತ್ತು ಡೆಪ್ಯುಟಿ ಸುಪರಿಟೆಂಡೆಂಟ್ ಮೋಹನಕುಮಾರ್ ಅವರೇ ಬಂಧಿತರು.</p>.<p>ಜಿಎಸ್ಟಿ ಕಡಿಮೆ ಮಾಡಲು ಈ ಅಧಿಕಾರಿಗಳು ₹20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಆರ್.ಎನ್. ಪಾನ್ಮಸಾಲಾ ಕಂಪನಿ ಮಾಲೀಕ ರಾಜಲಕ್ಷ್ಮಣ ಎನ್ನುವವರು ಬೆಂಗಳೂರಿನ ಸಿಬಿಐ ಕಚೇರಿಗೆ ದೂರು ನೀಡಿದ್ದರು. ಬುಧವಾರ ಬೆಳಗಾವಿಗೆ ಬಂದ ಸಿಬಿಐ ತಂಡ, ಭ್ರಷ್ಟಾಚಾರ ನಿಗ್ರಹ ದಳದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದರು. ದೂರುದಾರರಿಂದ ₹5 ಲಕ್ಷ ಹಣ ಸ್ವೀಕರಿಸುವಾಗಆರೋಪಿಗಳನ್ನು ಬಂಧಿಸಲಾಗಿತ್ತು.</p>.<p>ಗುರುವಾರ ಆರೋಪಿಗಳನ್ನು ಇಲ್ಲಿನ 3ನೇ ಹೆಚ್ಚುವರಿ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಈ ಮಧ್ಯೆ, ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ತಕರಾರು ಅರ್ಜಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>