<p><strong>ನವದೆಹಲಿ :</strong> ದೇವಸ್ಥಾನದ ಟ್ರಸ್ಟ್ಗಳು ಅಥವಾ ದೇಶದ ಯಾವುದೇ ಧಾರ್ಮಿಕ ಸಂಸ್ಥೆಗಳ ಬಳಿ ಇರುವ ಚಿನ್ನವನ್ನು ನಗದೀಕರಿಸುವ ಯೋಜನೆಯನ್ನು ಜಾರಿಗೆ ತರುವ ಆಲೋಚನೆ ತನಗಿಲ್ಲ ಎಂದು ಕೇಂದ್ರ ಸರ್ಕಾರವು ಮಂಗಳವಾರ ಸ್ಪಷ್ಟಪಡಿಸಿದೆ.</p>.<p>ಈ ರೀತಿಯ ಆಲೋಚನೆ ಇದೆ ಎಂಬ ಊಹಾಪೋಹಗಳನ್ನು ಅದು ತಳ್ಳಿಹಾಕಿದೆ. ‘ಇವು ಸಂಪೂರ್ಣವಾಗಿ ಸುಳ್ಳು, ತಪ್ಪುದಾರಿಗೆ ಎಳೆಯುವಂಥವು’ ಎಂದು ಕೇಂದ್ರ ಹಣಕಾಸು ಸಚಿವಾಲಯವು ಸ್ಪಷ್ಟನೆ ನೀಡಿದೆ.</p>.<p>ದೇವಸ್ಥಾನಗಳ ಗೋಪುರದ ಮೇಲೆ, ಬಾಗಿಲುಗಳ ಮೇಲೆ ಅಥವಾ ದೇವಸ್ಥಾನದ ಇತರ ರಚನೆಗಳ ಮೇಲೆ ಇರುವ ಚಿನ್ನದ ಹೊದಿಕೆಯನ್ನು ‘ದೇಶದ ಮೀಸಲು ಚಿನ್ನ’ ಎಂದು ಪರಿಗಣಿಸಲಾಗುತ್ತದೆ ಎಂಬ ಪ್ರತಿಪಾದನೆಗಳು ಸುಳ್ಳು, ಸಂಪೂರ್ಣವಾಗಿ ಆಧಾರರಹಿತ ಎಂದು ಸ್ಪಷ್ಟನೆಯಲ್ಲಿ ಹೇಳಲಾಗಿದೆ.</p>.<p>ಇಂತಹ ಸುಳ್ಳುಗಳನ್ನು ಜನ ನಂಬಬಾರದು, ಇಂಥವುಗಳನ್ನು ಹಂಚಿಕೊಳ್ಳಬಾರದು ಎಂದು ಅದು ಹೇಳಿದೆ.</p>.<p class="bodytext">ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಇಂತಹ ಮಾಹಿತಿಗಳನ್ನು ಹಂಚಿಕೊಳ್ಳುವುದರಿಂದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗುತ್ತದೆ, ಇತರರನ್ನು ತಪ್ಪುದಾರಿಗೆ ಎಳೆದಂತಾಗುತ್ತದೆ ಎಂದು ಅದು ತಿಳಿಸಿದೆ.</p>.<p class="bodytext">ಸರ್ಕಾರದ ನೀತಿ ನಿರ್ಧಾರಗಳಿಗೆ ಸಂಬಂಧಿಸಿದ ವಿಚಾರಗಳನ್ನು ಅಧಿಕೃತ ಪತ್ರಿಕಾ ಪ್ರಕಟಣೆ ಮೂಲಕ, ಸರ್ಕಾರದ ಜಾಲತಾಣಗಳ ಮೂಲಕ ಹಾಗೂ ಅಧಿಕೃತ ಸಂವಹನ ವೇದಿಕೆಗಳ ಮೂಲಕವೇ ಹಂಚಿಕೊಳ್ಳಲಾಗುತ್ತದೆ ಎಂದು ಸಚಿವಾಲಯವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ :</strong> ದೇವಸ್ಥಾನದ ಟ್ರಸ್ಟ್ಗಳು ಅಥವಾ ದೇಶದ ಯಾವುದೇ ಧಾರ್ಮಿಕ ಸಂಸ್ಥೆಗಳ ಬಳಿ ಇರುವ ಚಿನ್ನವನ್ನು ನಗದೀಕರಿಸುವ ಯೋಜನೆಯನ್ನು ಜಾರಿಗೆ ತರುವ ಆಲೋಚನೆ ತನಗಿಲ್ಲ ಎಂದು ಕೇಂದ್ರ ಸರ್ಕಾರವು ಮಂಗಳವಾರ ಸ್ಪಷ್ಟಪಡಿಸಿದೆ.</p>.<p>ಈ ರೀತಿಯ ಆಲೋಚನೆ ಇದೆ ಎಂಬ ಊಹಾಪೋಹಗಳನ್ನು ಅದು ತಳ್ಳಿಹಾಕಿದೆ. ‘ಇವು ಸಂಪೂರ್ಣವಾಗಿ ಸುಳ್ಳು, ತಪ್ಪುದಾರಿಗೆ ಎಳೆಯುವಂಥವು’ ಎಂದು ಕೇಂದ್ರ ಹಣಕಾಸು ಸಚಿವಾಲಯವು ಸ್ಪಷ್ಟನೆ ನೀಡಿದೆ.</p>.<p>ದೇವಸ್ಥಾನಗಳ ಗೋಪುರದ ಮೇಲೆ, ಬಾಗಿಲುಗಳ ಮೇಲೆ ಅಥವಾ ದೇವಸ್ಥಾನದ ಇತರ ರಚನೆಗಳ ಮೇಲೆ ಇರುವ ಚಿನ್ನದ ಹೊದಿಕೆಯನ್ನು ‘ದೇಶದ ಮೀಸಲು ಚಿನ್ನ’ ಎಂದು ಪರಿಗಣಿಸಲಾಗುತ್ತದೆ ಎಂಬ ಪ್ರತಿಪಾದನೆಗಳು ಸುಳ್ಳು, ಸಂಪೂರ್ಣವಾಗಿ ಆಧಾರರಹಿತ ಎಂದು ಸ್ಪಷ್ಟನೆಯಲ್ಲಿ ಹೇಳಲಾಗಿದೆ.</p>.<p>ಇಂತಹ ಸುಳ್ಳುಗಳನ್ನು ಜನ ನಂಬಬಾರದು, ಇಂಥವುಗಳನ್ನು ಹಂಚಿಕೊಳ್ಳಬಾರದು ಎಂದು ಅದು ಹೇಳಿದೆ.</p>.<p class="bodytext">ಸತ್ಯಾಸತ್ಯತೆಯನ್ನು ಪರಿಶೀಲಿಸದೆ ಇಂತಹ ಮಾಹಿತಿಗಳನ್ನು ಹಂಚಿಕೊಳ್ಳುವುದರಿಂದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಯಾಗುತ್ತದೆ, ಇತರರನ್ನು ತಪ್ಪುದಾರಿಗೆ ಎಳೆದಂತಾಗುತ್ತದೆ ಎಂದು ಅದು ತಿಳಿಸಿದೆ.</p>.<p class="bodytext">ಸರ್ಕಾರದ ನೀತಿ ನಿರ್ಧಾರಗಳಿಗೆ ಸಂಬಂಧಿಸಿದ ವಿಚಾರಗಳನ್ನು ಅಧಿಕೃತ ಪತ್ರಿಕಾ ಪ್ರಕಟಣೆ ಮೂಲಕ, ಸರ್ಕಾರದ ಜಾಲತಾಣಗಳ ಮೂಲಕ ಹಾಗೂ ಅಧಿಕೃತ ಸಂವಹನ ವೇದಿಕೆಗಳ ಮೂಲಕವೇ ಹಂಚಿಕೊಳ್ಳಲಾಗುತ್ತದೆ ಎಂದು ಸಚಿವಾಲಯವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>