<p><strong>ನವದೆಹಲಿ:</strong> ಜನರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಅಗತ್ಯ ಕ್ರಮ ವಹಿಸಲು ಸ್ಥಳೀಯ ಆಡಳಿತಗಳಿಗೆ ನಿರ್ದೇಶಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.</p>.<p>ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ಸ್ಥಿತಿ ಮೂಡಿರುವಂತೆಯೇ, ಒಂದು ವೇಳೆ ತೀವ್ರ ದಾಳಿ ನಡೆದಲ್ಲಿ ಅಗತ್ಯ ಸೇವೆಗಳಿಗೆ ಧಕ್ಕೆಯಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದೆ.</p>.<p>ಕೇಂದ್ರ ಗೃಹ ಸಚಿವಾಲಯವು ಈ ಸಂಬಂಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.</p>.<p>ತುರ್ತು ಸಂದರ್ಭಗಳಲ್ಲಿ ಅಗತ್ಯ ಕ್ರಮವಹಿಸಲು 1968ರ ನಾಗರಿಕ ರಕ್ಷಣಾ ನಿಯಮಗಳ ಸೆಕ್ಷನ್ 11ರ ಅನ್ವಯ ನಾಗರಿಕ ರಕ್ಷಣಾ ನಿರ್ದೇಶನಾಲಯಕ್ಕೆ ವಿಶೇಷಾಧಿಕಾರ ನೀಡಬೇಕು ಎಂದಿದೆ.</p>.<div dir="ltr"><span style="font-size:large;">‘ತುರ್ತು ಅಗತ್ಯಗಳಿಗೆ ತಗಲುವ ವೆಚ್ಚ ಭರಿಸಲು ಸ್ಥಳೀಯ ಆಡಳಿತಗಳಲ್ಲಿ ಲಭ್ಯವಿರುವ ನಿಧಿ ಬಳಸಲು ಪ್ರಥಮ ಆದ್ಯತೆ ನೀಡಬೇಕು’ ಎಂದು ನಾಗರಿಕ ರಕ್ಷಣೆ, ಗೃಹರಕ್ಷಕರ ದಳ ಮತ್ತು ಅಗ್ನಿಶಾಮಕ ದಳಗಳ ಮಹಾ ನಿರ್ದೇಶಕರಾದ ವಿವೇಕ್ ಶ್ರೀವಾತ್ಸವ ಪತ್ರದಲ್ಲಿ ತಿಳಿಸಿದ್ದಾರೆ. </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜನರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಅಗತ್ಯ ಕ್ರಮ ವಹಿಸಲು ಸ್ಥಳೀಯ ಆಡಳಿತಗಳಿಗೆ ನಿರ್ದೇಶಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.</p>.<p>ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ಸ್ಥಿತಿ ಮೂಡಿರುವಂತೆಯೇ, ಒಂದು ವೇಳೆ ತೀವ್ರ ದಾಳಿ ನಡೆದಲ್ಲಿ ಅಗತ್ಯ ಸೇವೆಗಳಿಗೆ ಧಕ್ಕೆಯಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದೆ.</p>.<p>ಕೇಂದ್ರ ಗೃಹ ಸಚಿವಾಲಯವು ಈ ಸಂಬಂಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.</p>.<p>ತುರ್ತು ಸಂದರ್ಭಗಳಲ್ಲಿ ಅಗತ್ಯ ಕ್ರಮವಹಿಸಲು 1968ರ ನಾಗರಿಕ ರಕ್ಷಣಾ ನಿಯಮಗಳ ಸೆಕ್ಷನ್ 11ರ ಅನ್ವಯ ನಾಗರಿಕ ರಕ್ಷಣಾ ನಿರ್ದೇಶನಾಲಯಕ್ಕೆ ವಿಶೇಷಾಧಿಕಾರ ನೀಡಬೇಕು ಎಂದಿದೆ.</p>.<div dir="ltr"><span style="font-size:large;">‘ತುರ್ತು ಅಗತ್ಯಗಳಿಗೆ ತಗಲುವ ವೆಚ್ಚ ಭರಿಸಲು ಸ್ಥಳೀಯ ಆಡಳಿತಗಳಲ್ಲಿ ಲಭ್ಯವಿರುವ ನಿಧಿ ಬಳಸಲು ಪ್ರಥಮ ಆದ್ಯತೆ ನೀಡಬೇಕು’ ಎಂದು ನಾಗರಿಕ ರಕ್ಷಣೆ, ಗೃಹರಕ್ಷಕರ ದಳ ಮತ್ತು ಅಗ್ನಿಶಾಮಕ ದಳಗಳ ಮಹಾ ನಿರ್ದೇಶಕರಾದ ವಿವೇಕ್ ಶ್ರೀವಾತ್ಸವ ಪತ್ರದಲ್ಲಿ ತಿಳಿಸಿದ್ದಾರೆ. </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>