<p><strong>ಮುಂಬೈ:</strong> ‘ಕೇಂದ್ರ ಸರ್ಕಾರದ ಹುದ್ದೆಗಳು ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು ಇದಕ್ಕಾಗಿ ಡೊಮೈನ್ ಪರಿಣಿತರು ಮತ್ತು ಯೋಗ್ಯತಾ ಮಾರ್ಗದರ್ಶಿಗಳ ಸಲಹೆ ಪಡೆಯಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಹೇಳಿದರು.</p>.<p>ಮುಂಬೈನಲ್ಲಿ ‘ಐಐಎಂ’ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳನ್ನು ವಿಶ್ವಾಸಾರ್ಹ, ನ್ಯಾಯಯುತ ಮತ್ತು ವಸ್ತುನಿಷ್ಠ ವಿಧಾನದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಈ ಬದಲಾವಣೆಗಳು ಕಳೆದ ಒಂದು ದಶಕದಿಂದ ಜಾರಿಯಲ್ಲಿವೆ. ವೇಗವಾಗಿ ವಿಕಸಿತಗೊಳ್ಳುತ್ತಿರುವ ಭಾರತದ ಆಡಳಿತ ವ್ಯವಸ್ಥೆಯಲ್ಲೂ ಇದರ ಫಲಗಳು ಕಂಡುಬಂದಿವೆ’ ಎಂದರು. </p>.<p>ಪ್ರಧಾನಿಯವರ ‘2047ರ ವಿಕಸಿತ ಭಾರತ’ ಪರಿಕಲ್ಪನೆಯು ‘ಸುಧಾರಣೆ, ನಿರ್ವಹಣೆ ಮತ್ತು ವರ್ಗಾವಣೆ’ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿದೆ. ಈ ಯೋಜನೆಯಡಿ ಭಾರತವು ಜಾಗತಿಕ ನಾವೀನ್ಯತೆಯ ಶಕ್ತಿ ಕೇಂದ್ರವಾಗಿ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಕೇಂದ್ರ ಸರ್ಕಾರದ ಹುದ್ದೆಗಳು ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು ಇದಕ್ಕಾಗಿ ಡೊಮೈನ್ ಪರಿಣಿತರು ಮತ್ತು ಯೋಗ್ಯತಾ ಮಾರ್ಗದರ್ಶಿಗಳ ಸಲಹೆ ಪಡೆಯಲಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಹೇಳಿದರು.</p>.<p>ಮುಂಬೈನಲ್ಲಿ ‘ಐಐಎಂ’ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳನ್ನು ವಿಶ್ವಾಸಾರ್ಹ, ನ್ಯಾಯಯುತ ಮತ್ತು ವಸ್ತುನಿಷ್ಠ ವಿಧಾನದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಈ ಬದಲಾವಣೆಗಳು ಕಳೆದ ಒಂದು ದಶಕದಿಂದ ಜಾರಿಯಲ್ಲಿವೆ. ವೇಗವಾಗಿ ವಿಕಸಿತಗೊಳ್ಳುತ್ತಿರುವ ಭಾರತದ ಆಡಳಿತ ವ್ಯವಸ್ಥೆಯಲ್ಲೂ ಇದರ ಫಲಗಳು ಕಂಡುಬಂದಿವೆ’ ಎಂದರು. </p>.<p>ಪ್ರಧಾನಿಯವರ ‘2047ರ ವಿಕಸಿತ ಭಾರತ’ ಪರಿಕಲ್ಪನೆಯು ‘ಸುಧಾರಣೆ, ನಿರ್ವಹಣೆ ಮತ್ತು ವರ್ಗಾವಣೆ’ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿದೆ. ಈ ಯೋಜನೆಯಡಿ ಭಾರತವು ಜಾಗತಿಕ ನಾವೀನ್ಯತೆಯ ಶಕ್ತಿ ಕೇಂದ್ರವಾಗಿ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>