<p><strong>ನವದೆಹಲಿ:</strong> ಮಧ್ಯಸ್ಥಿಕೆ ಮಂಡಳಿ ಸ್ಥಾಪನೆ ಪ್ರಕ್ರಿಯೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದ್ದು, ಶೀಘ್ರದಲ್ಲೇ ‘ಒಳ್ಳೆಯ ಸುದ್ದಿ’ ಹಂಚಿಕೊಳ್ಳುವುದಾಗಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾನುವಾರ ಹೇಳಿದ್ದಾರೆ.</p>.<p>ಮಧ್ಯಸ್ಥಿಕೆ ಕುರಿತ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ‘ಮಧ್ಯಸ್ಥಿಕೆ ಕಾಯ್ದೆ ಜಾರಿಗೆ ಬಂದು ವರ್ಷ ಕಳೆದರೂ ಅಖಿಲ ಭಾರತ ಮಟ್ಟದಲ್ಲಿ ಮಧ್ಯಸ್ಥಿಕೆ ಮಂಡಳಿಯನ್ನು ಸ್ಥಾಪಿಸಲಾಗಿಲ್ಲ ಎಂಬ ಬಗ್ಗೆ ಕೆಲವರು ಗಮನಸೆಳೆದಿದ್ದಾರೆ’ ಎಂದರು.</p>.<p>‘ನಾವು ಆ ದಿಕ್ಕಿನಲ್ಲಿ (ಮಧ್ಯಸ್ಥಿಕೆ ಮಂಡಳಿ ಸ್ಥಾಪನೆ) ವೇಗವಾಗಿ ಸಾಗುತ್ತಿದ್ದೇವೆ. ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದೇವೆ’ ಎಂದು ಹೇಳಿದರು. </p>.<p>ಮಧ್ಯಸ್ಥಿಕೆ ಕಾಯ್ದೆ ಸಂಸತ್ತಿನಲ್ಲಿ ಅಂಗೀಕಾರಗೊಂಡು ಎರಡು ವರ್ಷ ಕಳೆದರೂ ಮಧ್ಯಸ್ಥಿಕೆ ಮಂಡಳಿ ಸ್ಥಾಪನೆ ವಿಳಂಬವಾಗಿರುವುದಕ್ಕೆ ಮಾನವ ಸಂಪನ್ಮೂಲ ಕೊರತೆಯೇ ಕಾರಣ ಎಂದು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಈಚೆಗೆ ಹೇಳಿದ್ದರು.</p>.<p>ಮಧ್ಯಸ್ಥಿಕೆದಾರರನ್ನು ನಿಯಂತ್ರಿಸಲು ಮಧ್ಯಸ್ಥಿಕೆ ಮಂಡಳಿಯನ್ನು ಸ್ಥಾಪಿಸಲಾಗುವುದು ಎಂದು ಕಾಯ್ದೆ ಹೇಳುತ್ತದೆ. ಮಧ್ಯಸ್ಥಿಕೆದಾರರ ನೋಂದಣಿ, ಮಧ್ಯಸ್ಥಿಕೆ ಸೇವೆ ಒದಗಿಸುವವರಿಗೆ ಮಾನ್ಯತೆ ನೀಡುವ ಕೆಲಸವನ್ನು ಈ ಮಂಡಳಿ ಮಾಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಧ್ಯಸ್ಥಿಕೆ ಮಂಡಳಿ ಸ್ಥಾಪನೆ ಪ್ರಕ್ರಿಯೆಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಲಾಗಿದ್ದು, ಶೀಘ್ರದಲ್ಲೇ ‘ಒಳ್ಳೆಯ ಸುದ್ದಿ’ ಹಂಚಿಕೊಳ್ಳುವುದಾಗಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾನುವಾರ ಹೇಳಿದ್ದಾರೆ.</p>.<p>ಮಧ್ಯಸ್ಥಿಕೆ ಕುರಿತ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ‘ಮಧ್ಯಸ್ಥಿಕೆ ಕಾಯ್ದೆ ಜಾರಿಗೆ ಬಂದು ವರ್ಷ ಕಳೆದರೂ ಅಖಿಲ ಭಾರತ ಮಟ್ಟದಲ್ಲಿ ಮಧ್ಯಸ್ಥಿಕೆ ಮಂಡಳಿಯನ್ನು ಸ್ಥಾಪಿಸಲಾಗಿಲ್ಲ ಎಂಬ ಬಗ್ಗೆ ಕೆಲವರು ಗಮನಸೆಳೆದಿದ್ದಾರೆ’ ಎಂದರು.</p>.<p>‘ನಾವು ಆ ದಿಕ್ಕಿನಲ್ಲಿ (ಮಧ್ಯಸ್ಥಿಕೆ ಮಂಡಳಿ ಸ್ಥಾಪನೆ) ವೇಗವಾಗಿ ಸಾಗುತ್ತಿದ್ದೇವೆ. ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದೇವೆ’ ಎಂದು ಹೇಳಿದರು. </p>.<p>ಮಧ್ಯಸ್ಥಿಕೆ ಕಾಯ್ದೆ ಸಂಸತ್ತಿನಲ್ಲಿ ಅಂಗೀಕಾರಗೊಂಡು ಎರಡು ವರ್ಷ ಕಳೆದರೂ ಮಧ್ಯಸ್ಥಿಕೆ ಮಂಡಳಿ ಸ್ಥಾಪನೆ ವಿಳಂಬವಾಗಿರುವುದಕ್ಕೆ ಮಾನವ ಸಂಪನ್ಮೂಲ ಕೊರತೆಯೇ ಕಾರಣ ಎಂದು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಈಚೆಗೆ ಹೇಳಿದ್ದರು.</p>.<p>ಮಧ್ಯಸ್ಥಿಕೆದಾರರನ್ನು ನಿಯಂತ್ರಿಸಲು ಮಧ್ಯಸ್ಥಿಕೆ ಮಂಡಳಿಯನ್ನು ಸ್ಥಾಪಿಸಲಾಗುವುದು ಎಂದು ಕಾಯ್ದೆ ಹೇಳುತ್ತದೆ. ಮಧ್ಯಸ್ಥಿಕೆದಾರರ ನೋಂದಣಿ, ಮಧ್ಯಸ್ಥಿಕೆ ಸೇವೆ ಒದಗಿಸುವವರಿಗೆ ಮಾನ್ಯತೆ ನೀಡುವ ಕೆಲಸವನ್ನು ಈ ಮಂಡಳಿ ಮಾಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>