<p><strong>ಬೆಂಗಳೂರು</strong>: ಕಳೆದ ವರ್ಷ ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶ ಹಾಗೂ ಆಸ್ತಿಪಾಸ್ತಿ ನಷ್ಟವಾಗಿತ್ತು. ಇದಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರ 629 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.</p>.<p>ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ವಿಷಯವನ್ನು ಟ್ವಿಟರ್ನಲ್ಲಿ ಇಂದು ತಿಳಿಸಿದ್ದಾರೆ. ಎಸ್ಡಿಆರ್ಎಫ್ ನಿಧಿಗೆ ಈ ನೆರವು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರಕ್ಕೂ ಕೂಡ 701 ಕೋಟಿ ನೆರವು ಘೋಷಣೆಯಾಗಿದೆ.</p>.<p>2020 ರಲ್ಲಿ ರಾಜಸ್ತಾನದಲ್ಲಿ ಅನಾವೃಷ್ಠಿಗೆ ತುತ್ತಾದ ರೈತರಿಗೆ ನೆರವು ನೀಡಲು ಎಸ್ಡಿಆರ್ಎಫ್ಗೆ 113 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.</p>.<p>2020–21 ರ ರಾಭಿ ಮತ್ತು ಖಾರೀಪ್ ಅವಧಿಯಲ್ಲಿ ಬೆಳೆ ನಷ್ಟ ಅನುಭವಿಸಿದ ಮಹಾರಾಷ್ಟ್ರದ 11.43 ಲಕ್ಷ ರೈತರಿಗೆ ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 750 ಕೋಟಿ ಬೆಳೆವಿಮೆ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ರೈತರ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಸದಾ ಸಿದ್ಧ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/supreme-court-notice-of-centre-delhi-govt-on-plea-for-rehabilitation-vaccination-of-beggars-amid-852143.html" target="_blank">ಭಿಕ್ಷುಕರಿಗೆ ಪುನರ್ವಸತಿ, ಲಸಿಕೆ ನೀಡುವಂತೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಳೆದ ವರ್ಷ ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶ ಹಾಗೂ ಆಸ್ತಿಪಾಸ್ತಿ ನಷ್ಟವಾಗಿತ್ತು. ಇದಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರ 629 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.</p>.<p>ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ವಿಷಯವನ್ನು ಟ್ವಿಟರ್ನಲ್ಲಿ ಇಂದು ತಿಳಿಸಿದ್ದಾರೆ. ಎಸ್ಡಿಆರ್ಎಫ್ ನಿಧಿಗೆ ಈ ನೆರವು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರಕ್ಕೂ ಕೂಡ 701 ಕೋಟಿ ನೆರವು ಘೋಷಣೆಯಾಗಿದೆ.</p>.<p>2020 ರಲ್ಲಿ ರಾಜಸ್ತಾನದಲ್ಲಿ ಅನಾವೃಷ್ಠಿಗೆ ತುತ್ತಾದ ರೈತರಿಗೆ ನೆರವು ನೀಡಲು ಎಸ್ಡಿಆರ್ಎಫ್ಗೆ 113 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.</p>.<p>2020–21 ರ ರಾಭಿ ಮತ್ತು ಖಾರೀಪ್ ಅವಧಿಯಲ್ಲಿ ಬೆಳೆ ನಷ್ಟ ಅನುಭವಿಸಿದ ಮಹಾರಾಷ್ಟ್ರದ 11.43 ಲಕ್ಷ ರೈತರಿಗೆ ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 750 ಕೋಟಿ ಬೆಳೆವಿಮೆ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ರೈತರ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಸದಾ ಸಿದ್ಧ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/supreme-court-notice-of-centre-delhi-govt-on-plea-for-rehabilitation-vaccination-of-beggars-amid-852143.html" target="_blank">ಭಿಕ್ಷುಕರಿಗೆ ಪುನರ್ವಸತಿ, ಲಸಿಕೆ ನೀಡುವಂತೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>