‘ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ರಾಜ್ಯ ಸರ್ಕಾರಗಳು, ಇನ್ಸ್ಟಿಟ್ಯೂಟ್ಗಳು ಹಾಗೂ ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆಯನ್ನು ಈ ಆ್ಯಪ್ ಪ್ರೋತ್ಸಾಹಿಸಲಿದೆ. ಪರಿಸರ ರಕ್ಷಣೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಸುಸ್ಥಿರ ಚಟುವಟಿಕೆಗಳ ಕುರಿತು ಇದರ ಮೂಲಕ ಜಾಗೃತಿ ಮೂಡಿಸಬಹುದಾಗಿದೆ. ಆ್ಯಪ್ ಕುರಿತು ಜನರಲ್ಲಿ ಅರಿವು ಮೂಡಿಸಲು ಒಂದು ತಿಂಗಳ ಕಾಲ ಅಭಿಯಾನ ಕೈಗೊಳ್ಳಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.