<p><strong>ನವದೆಹಲಿ:</strong> ಯುವಕರನ್ನು ಸಶಕ್ತಗೊಳಿಸುವ ಹಾಗೂ ಹವಾಮಾನ ಬದಲಾವಣೆಗೆ ಕಡಿವಾಣ ಹಾಕುವ ಕಾರ್ಯದಲ್ಲಿ ಅವರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸೋಮವಾರ ‘ಮೇರಿ ಲೈಫ್’ (ನನ್ನ ಬದುಕು) ಮೊಬೈಲ್ ಆ್ಯಪ್ ಅನಾವರಣಗೊಳಿಸಿದೆ.</p>.<p>ಪ್ರಧಾನಿ ನರೇಂದ್ರ ಮೋದಿಯವರ ‘ಮಿಷನ್ ಲೈಫ್’ ಆ್ಯಪ್ನಿಂದ ಪ್ರೇರಣೆಗೊಂಡು ಇದನ್ನು ಅಭಿವೃದ್ಧಿಪಡಿಸಲಾಗಿದೆ. ಮೇರಿ ಲೈಫ್ನಲ್ಲಿನ ‘ಲೈಫ್’ ಎಂಬ ಪದವು ಪರಿಸರಕ್ಕಾಗಿ ಜೀವನಶೈಲಿ ಎಂಬ ಅರ್ಥವನ್ನು ಕೊಡುತ್ತದೆ. </p>.<p>‘ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿ ಆಂದೋಲನ ಕೈಗೊಳ್ಳುವುದಕ್ಕೆ ಈ ಆ್ಯಪ್ ನೆರವಾಗಲಿದೆ. ನಾಗರಿಕರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಕಲ್ಪಿಸಲಿದೆ’ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ. </p>.<p>‘ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ರಾಜ್ಯ ಸರ್ಕಾರಗಳು, ಇನ್ಸ್ಟಿಟ್ಯೂಟ್ಗಳು ಹಾಗೂ ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆಯನ್ನು ಈ ಆ್ಯಪ್ ಪ್ರೋತ್ಸಾಹಿಸಲಿದೆ. ಪರಿಸರ ರಕ್ಷಣೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಸುಸ್ಥಿರ ಚಟುವಟಿಕೆಗಳ ಕುರಿತು ಇದರ ಮೂಲಕ ಜಾಗೃತಿ ಮೂಡಿಸಬಹುದಾಗಿದೆ. ಆ್ಯಪ್ ಕುರಿತು ಜನರಲ್ಲಿ ಅರಿವು ಮೂಡಿಸಲು ಒಂದು ತಿಂಗಳ ಕಾಲ ಅಭಿಯಾನ ಕೈಗೊಳ್ಳಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಪರಿಸರ ಸಚಿವಾಲಯವು ರಚಿಸಿರುವಂತಹ 100ಕ್ಕೂ ಅಧಿಕ ಸೃಜನಶೀಲ ವಿಡಿಯೊಗಳು ಹಾಗೂ ಇತರೆ ಜ್ಞಾನಾಧಾರಿತ ಸಾಮಾಗ್ರಿಗಳು ಈ ಆ್ಯಪ್ನಲ್ಲಿ ಲಭ್ಯವಿರುತ್ತವೆ. ಅವು ಎಲ್ಲರಿಗೂ ಮುಕ್ತವಾಗಿ ದೊರೆಯಲಿವೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಯುವಕರನ್ನು ಸಶಕ್ತಗೊಳಿಸುವ ಹಾಗೂ ಹವಾಮಾನ ಬದಲಾವಣೆಗೆ ಕಡಿವಾಣ ಹಾಕುವ ಕಾರ್ಯದಲ್ಲಿ ಅವರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸೋಮವಾರ ‘ಮೇರಿ ಲೈಫ್’ (ನನ್ನ ಬದುಕು) ಮೊಬೈಲ್ ಆ್ಯಪ್ ಅನಾವರಣಗೊಳಿಸಿದೆ.</p>.<p>ಪ್ರಧಾನಿ ನರೇಂದ್ರ ಮೋದಿಯವರ ‘ಮಿಷನ್ ಲೈಫ್’ ಆ್ಯಪ್ನಿಂದ ಪ್ರೇರಣೆಗೊಂಡು ಇದನ್ನು ಅಭಿವೃದ್ಧಿಪಡಿಸಲಾಗಿದೆ. ಮೇರಿ ಲೈಫ್ನಲ್ಲಿನ ‘ಲೈಫ್’ ಎಂಬ ಪದವು ಪರಿಸರಕ್ಕಾಗಿ ಜೀವನಶೈಲಿ ಎಂಬ ಅರ್ಥವನ್ನು ಕೊಡುತ್ತದೆ. </p>.<p>‘ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿ ಆಂದೋಲನ ಕೈಗೊಳ್ಳುವುದಕ್ಕೆ ಈ ಆ್ಯಪ್ ನೆರವಾಗಲಿದೆ. ನಾಗರಿಕರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಕಲ್ಪಿಸಲಿದೆ’ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ. </p>.<p>‘ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ರಾಜ್ಯ ಸರ್ಕಾರಗಳು, ಇನ್ಸ್ಟಿಟ್ಯೂಟ್ಗಳು ಹಾಗೂ ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆಯನ್ನು ಈ ಆ್ಯಪ್ ಪ್ರೋತ್ಸಾಹಿಸಲಿದೆ. ಪರಿಸರ ರಕ್ಷಣೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಸುಸ್ಥಿರ ಚಟುವಟಿಕೆಗಳ ಕುರಿತು ಇದರ ಮೂಲಕ ಜಾಗೃತಿ ಮೂಡಿಸಬಹುದಾಗಿದೆ. ಆ್ಯಪ್ ಕುರಿತು ಜನರಲ್ಲಿ ಅರಿವು ಮೂಡಿಸಲು ಒಂದು ತಿಂಗಳ ಕಾಲ ಅಭಿಯಾನ ಕೈಗೊಳ್ಳಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಪರಿಸರ ಸಚಿವಾಲಯವು ರಚಿಸಿರುವಂತಹ 100ಕ್ಕೂ ಅಧಿಕ ಸೃಜನಶೀಲ ವಿಡಿಯೊಗಳು ಹಾಗೂ ಇತರೆ ಜ್ಞಾನಾಧಾರಿತ ಸಾಮಾಗ್ರಿಗಳು ಈ ಆ್ಯಪ್ನಲ್ಲಿ ಲಭ್ಯವಿರುತ್ತವೆ. ಅವು ಎಲ್ಲರಿಗೂ ಮುಕ್ತವಾಗಿ ದೊರೆಯಲಿವೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>