<p><strong>ನವದೆಹಲಿ</strong>: ದೆಹಲಿಯ ಲುಟಿಯನ್ಸ್ನಲ್ಲಿ ಮಹಾತ್ವಾಂಕ್ಷೆಯ ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿ ಉಪರಾಷ್ಟ್ರಪತಿಗಳ ಹೊಸ ನಿವಾಸದ ನಿರ್ಮಾಣಕ್ಕೆ ಭೂಬಳಕೆಯ ಬದಲಾವಣೆಯನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.</p>.<p>ಭವನ ನಿರ್ಮಾಣದ ಭೂ ಬಳಕೆಯ ಬದಲಾವಣೆ ಸಮರ್ಥಿಸಲು ಸಂಬಂಧಿಸಿದ ಅಧಿಕಾರಿಗಳು ಸಾಕಷ್ಟು ವಿವರಣೆಯನ್ನು ನೀಡಿದ್ದಾರೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.</p>.<p>‘ವಿಷಯವನ್ನು ಮತ್ತೆ ಪರಿಶೀಲಿಸುವ ಯಾವುದೇ ಕಾರಣವು ನಮಗೆ ಗೋಚರಿಸುತ್ತಿಲ್ಲ. ಆದ್ದರಿಂದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಇದನ್ನು ಅಂತ್ಯಗೊಳಿಸುತ್ತಿದ್ದೇವೆ’ ಎಂದು ಪೀಠ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎನ್.ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.</p>.<p>2019ರ ಸೆಪ್ಟೆಂಬರ್ನಲ್ಲಿ ಘೋಷಿಸಲಾದ ಸೆಂಟ್ರಲ್ ವಿಸ್ತಾ ಪರಿಷ್ಕರಣೆ ಯೋಜನೆಯು 900 ರಿಂದ 1200 ಸಂಸದರಿಗೆ ಆಸನ ಸಾಮರ್ಥ್ಯದ ಹೊಸ ತ್ರಿಕೋನ ಸಂಸತ್ ಕಟ್ಟಡವನ್ನು ನಿರ್ಮಿಸುವುದಾಗಿದೆ. ಇದನ್ನು ದೇಶವು ತನ್ನ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುವ 2022ರ ಆಗಸ್ಟ್ ವೇಳೆಗೆ ನಿರ್ಮಿಸುವ ಯೋಜನೆಯಿದೆ.</p>.<p>ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ಮನರಂಜನಾ ಪ್ರದೇಶದ ಭೂಮಿಯನ್ನು ವಸತಿ ಪ್ರದೇಶವಾಗಿ ಬದಲಾಯಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ಲುಟಿಯನ್ಸ್ನಲ್ಲಿ ಮಹಾತ್ವಾಂಕ್ಷೆಯ ಸೆಂಟ್ರಲ್ ವಿಸ್ತಾ ಯೋಜನೆಯ ಭಾಗವಾಗಿ ಉಪರಾಷ್ಟ್ರಪತಿಗಳ ಹೊಸ ನಿವಾಸದ ನಿರ್ಮಾಣಕ್ಕೆ ಭೂಬಳಕೆಯ ಬದಲಾವಣೆಯನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.</p>.<p>ಭವನ ನಿರ್ಮಾಣದ ಭೂ ಬಳಕೆಯ ಬದಲಾವಣೆ ಸಮರ್ಥಿಸಲು ಸಂಬಂಧಿಸಿದ ಅಧಿಕಾರಿಗಳು ಸಾಕಷ್ಟು ವಿವರಣೆಯನ್ನು ನೀಡಿದ್ದಾರೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.</p>.<p>‘ವಿಷಯವನ್ನು ಮತ್ತೆ ಪರಿಶೀಲಿಸುವ ಯಾವುದೇ ಕಾರಣವು ನಮಗೆ ಗೋಚರಿಸುತ್ತಿಲ್ಲ. ಆದ್ದರಿಂದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಇದನ್ನು ಅಂತ್ಯಗೊಳಿಸುತ್ತಿದ್ದೇವೆ’ ಎಂದು ಪೀಠ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎ.ಎನ್.ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.</p>.<p>2019ರ ಸೆಪ್ಟೆಂಬರ್ನಲ್ಲಿ ಘೋಷಿಸಲಾದ ಸೆಂಟ್ರಲ್ ವಿಸ್ತಾ ಪರಿಷ್ಕರಣೆ ಯೋಜನೆಯು 900 ರಿಂದ 1200 ಸಂಸದರಿಗೆ ಆಸನ ಸಾಮರ್ಥ್ಯದ ಹೊಸ ತ್ರಿಕೋನ ಸಂಸತ್ ಕಟ್ಟಡವನ್ನು ನಿರ್ಮಿಸುವುದಾಗಿದೆ. ಇದನ್ನು ದೇಶವು ತನ್ನ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುವ 2022ರ ಆಗಸ್ಟ್ ವೇಳೆಗೆ ನಿರ್ಮಿಸುವ ಯೋಜನೆಯಿದೆ.</p>.<p>ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ಮನರಂಜನಾ ಪ್ರದೇಶದ ಭೂಮಿಯನ್ನು ವಸತಿ ಪ್ರದೇಶವಾಗಿ ಬದಲಾಯಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>